ಹಿರಿಯರ ನೆರವಿಗೆ ಬೆಂಗಳೂರು ಪೊಲೀಸರ ಸಹಾಯವಾಣಿ
ಬೆಂಗಳೂರು, ಮಾ. 27: ಹಿರಿಯರ ಮೇಲಾಗುತ್ತಿರುವ ನಿಂದನೆ ಮತ್ತು ದೌರ್ಜನ್ಯದ ಕುರಿತು ಜಾಗೃತಿ ಮೂಡಿಸಲು ಬೆಂಗಳೂರು ಪೊಲೀಸ್ ಇಲಾಖೆ ಮಾರ್ಚ್ 28 ರಂದು ಬೆಳಗ್ಗೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅರ್ಧ ದಿನದ ಅರಿವು ಕಾರ್ಯಕ್ರಮ ಹಮ್ಮಿಕೊಂಡಿದೆ. ಅಲ್ಲದೇ ಹಿರಿಯರ ನೆರವಿಗೆ ಇರುವ ಸಹಾಯವಾಣಿಯನ್ನು ಪ್ರಚುರಪಡಿಸಲಾಗುವುದು.
ಹಿರಿಯರ ಸಹಾಯವಾಣಿಯು ಬೆಂಗಳೂರು ನಗರ ಪೊಲೀಸ್ ಹಾಗೂ ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ ನಡುವಣ ಜಂಟಿ ಯೋಜನೆಯಾಗಿದೆ. ಪೊಲೀಸರು ಹಾಗೂ ಹಿರಿಯ ನಾಗರಿಕರ ನಡುವೆ ಒಂದು ಆರೋಗ್ಯಕರವಾದ ವಾತಾವರಣ ಸೃಷ್ಟಿಗೆ ಈ ಯೋಜನೆ ನೆರವಾಗಲಿದೆ.

ಪೊಲೀಸ್ ಆಯುಕ್ತರು ಎಂ.ಎನ್.ರೆಡ್ಡಿ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ದೌರ್ಜನ್ಯ, ನಿಂದನೆ, ಕಿರುಕುಳ, ಹಿಂಸೆ ಕುರಿತಾದ ಯಾವ ದೂರುಗಳಿದ್ದರೂ ನೇರವಾಗಿ ಸಹಾಯವಾಣಿ ಮೂಲಕ ದೂರು ದಾಖಲಿಸಬಹುದು.
ಸಹಾಯವಾಣಿ 2002 ರಲ್ಲೇ ಆರಂಭವಾಗಿದ್ದರೂ ಸರಿಯಾಗಿ ಪ್ರಚಾರ ಸಿಕ್ಕಿಲ್ಲ. ಈ ಅರಿವು ಮೂಡಿಸುವ ಕಾರ್ಯಕ್ರಮದ ಮೂಲಕ ನಿಜವಾಗಿ ಸಮಸ್ಯೆಯಲ್ಲಿರುವವರಿಗೆ ನೆರವು ನೀಡಲು ಸಾಧ್ಯವಾಗುತ್ತದೆ. ಬೆಂಗಳೂರಿನ ಎಲ್ಲ ಪೊಲೀಸ್ ಠಾಣೆಗಳಿಂದಲೂ ಒಬ್ಬ ಮುಖ್ಯ ಪೇದೆಯನ್ನು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗೆ 1090, 22943226 ಸಂಪರ್ಕಿಸಬಹುದು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications