ನಿಯಮ ಉಲ್ಲಂಘಿಸಿದ ಡ್ಯಾನ್ಸ್ ಬಾರ್ ಮೇಲೆ ದಾಳಿ: 74 ಮಹಿಳೆಯರ ರಕ್ಷಣೆ
ಬೆಂಗಳೂರು, ಜೂನ್ 29: ಕಾನೂನು ನಿಯಮ ಉಲ್ಲಂಘಿಸಿ ನಡೆಸುತ್ತಿದ್ದ ಡ್ಯಾನ್ಸ್ ಬಾರ್ ಮೇಲೆ ದಾಳಿ ನಡೆಸಿದ ಪೊಲೀಸರು 74 ಮಂದಿ ಮಹಿಳೆಯರನ್ನು ರಕ್ಷಿಸಿದ್ದು, 53 ಮಂದಿಯನ್ನು ಬಂಧಿಸಿದ್ದಾರೆ.
ಬೆಂಗಳೂರು ನಗರ ಜೀವನ ಭೀಮನಗರ ಪೊಲೀಸ್ ಠಾಣಾ ಸರಹದ್ದಿನ ದೊಮ್ಮಲೂರು ರಿಂಗ್ ರಸ್ತೆಯಲ್ಲಿರುವ CHEF INN REGENCY ಎಂಬಲ್ಲಿ ಮಹಿಳೆಯರನ್ನು ಇರಿಸಿಕೊಂಡು ಪರವಾನಗಿ ನಿಬಂಧನೆಗಳನ್ನು ಉಲ್ಲಂಘನೆ ಮಾಡಿ ಅಕ್ರಮವಾಗಿ ಡ್ಯಾನ್ಸ್ಬಾರ್ ನಡೆಸುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ ಕೇಂದ್ರ ಅಪರಾಧ ವಿಭಾಗದ ಪೊಲೀಸರುಕ್ಷಿಪ್ರ ಕಾರ್ಯಾಚರಣೆ ನಡೆಸಿ, ಅಕ್ರಮ ಡ್ಯಾನ್ಸ್ ಬಾರ್ ನಡೆಸುತ್ತಿದ್ದ ಆರೋಪಿಗಳಾದ
ದಿನೇಶ ಬಿನ್ ಪೂವಯ್ಯ, ದಿನೇಶ್ಕುಮಾರ್, ರಿಯಾಜ್ವುದ್ದೀನ್ ಬಿನ್ ಅಬ್ಬಾಸ್ ಖಾನ್ , ಪ್ರಕಾಶ್ದತ್ ಜೋಷಿ, ಹೆಗ್ಯಾರಾಜ್ ಜೋಷಿ, ಡ್ಯಾನ್ಸ್ಬಾರ್ನಲ್ಲಿದ್ದ 48 ಜನ ಗಿರಾಕಿಗಳು ಸೇರಿದಂತೆ ಒಟ್ಟು 53 ಜನರನ್ನು ದಸ್ತಗಿರಿ ಮಾಡಿದ್ದಾರೆ.

ಆರೋಪಿಗಳಿಂದ 1,04,000 ರೂ ನಗದು ಹಣವನ್ನು ವಶಕ್ಕೆ ಪಡೆದಿರುತ್ತದೆ. ಡ್ಯಾನ್ಸ್ಬಾರ್ಗೆ ಬರುವ ಗಿರಾಕಿಗಳ ಜೊತೆ ಡ್ಯಾನ್ಸ್ ಮಾಡಲು ಕಳುಹಿಸಿಕೊಡಲು ಇರಿಸಿಕೊಂಡಿದ್ದ ಸ್ಥಳೀಯ ಹಾಗೂ ಹೊರ ರಾಜ್ಯದ 74 ಮಹಿಳೆಯರನ್ನು ಸಂರಕ್ಷಣೆ ಮಾಡಲಾಗಿರುತ್ತದೆ. ಈ ಸಂಬಂಧ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.
ಈ ಕಾರ್ಯಚರಣೆಯನ್ನು ಬೆಂಗಳೂರು ನಗರದ ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಬಿ.ಆರ್.ರವಿಕಾಂತೇಗೌಡ, ಐಪಿಎಸ್ ಮತ್ತು ಉಪ ಪೊಲೀಸ್ ಆಯುಕ್ತರಾದ ಗಿರೀಶ್.ಎಸ್, ಐಪಿಎಸ್ ರವರ ನೇರ ಮಾರ್ಗದರ್ಶನದಲ್ಲಿ, ಸಿಸಿಬಿ ಘಟಕ ವಿಶೇಷ ವಿಚಾರಣಾ ದಳದ ಸಹಾಯಕ ಪೊಲೀಸ್ ಆಯುಕ್ತರಾದ ಎನ್.ಹೆಚ್.ರಾಮಚಂದ್ರಯ್ಯ ರವರ ನೇತೃತ್ವದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ವಿ.ನಾರಾಯಣಸ್ವಾಮಿ ಮತ್ತು ಎ.ಪಿ.ಕುಮಾರ್,ಪಿ.ಐ ಮತ್ತು ಸಿಬ್ಬಂಧಿಗಳಾದ ರವರುಗಳು ಕೈಗೊಂಡಿರುತ್ತಾರೆ.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್












Click it and Unblock the Notifications