ರೌಡಿ ಶೀಟರ್ ನಾಗನ ಮತ್ತೊಂದು ಮನೆ ಶೋಧ; ಮಹತ್ವದ ಡೈರಿ ವಶ
ಶ್ರೀರಾಂಪುರದಲ್ಲಿ ನಾಗರಾಜ್ ಗೆ ಸೇರಿದ ಮನೆಯ ಮೇಲೆ ಏ. 14ರಂದು ಪೊಲೀಸರು ದಾಳಿ ನಡೆಸಿದ್ದರು. ಈಗ ಆತನ ಮತ್ತೊಂದು ಮನೆಯ ಮೇಲೆ ದಾಳಿ ನಡೆಸಲಾಗಿದೆ.
ಬೆಂಗಳೂರು, ಮೇ 18: ರೌಡಿ ಶೀಟರ್ ವಿ. ನಾಗರಾಜ್ ಗೆ ಸೇರಿದ ಮತ್ತೊಂದು ಮನೆಯಲ್ಲಿ ಬೆಂಗಳೂರು ಪೊಲೀಸರು ಶೋಧ ನಡೆಸಿದ್ದು, ಅದರಲ್ಲಿ ಬಾಂಬ್ ಹಾಗೂ ಹಲವಾರು ಮಾರಕಾಸ್ತ್ರಗಳು ಪತ್ತೆಯಾಗಿವೆ. ಇದರ ಜತೆಗೆ ಮಹತ್ವದ ದಾಖಲೆಗಳುಳ್ಳ ಡೈರಿಯೊಂದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ಶ್ರೀರಾಂಪುರದಲ್ಲಿ ನಾಗರಾಜ್ ಗೆ ಸೇರಿದ ಮನೆಯ ಮೇಲೆ ಏ. 14ರಂದು ಪೊಲೀಸರು ದಾಳಿ ನಡೆಸಿದ್ದರು. ಆಗ, ನಾಗ ತಲೆಮರೆಸಿಕೊಂಡಿದ್ದ. ಇತ್ತೀಚೆಗೆ ಆತ ತಮಿಳುನಾಡಿನಲ್ಲಿ ಸೆರೆ ಸಿಕ್ಕಿದ್ದಾನೆ.[ಮೇ 22ರ ವರೆಗೆ ಬಾಂಬ್ ನಾಗ ಮತ್ತು ಮಕ್ಕಳು ಪೊಲೀಸ್ ಕಸ್ಟಡಿಗೆ]

ಆತ ಸೆರೆ ಸಿಕ್ಕ ನಂತರ ಆತನಿಗೆ ಸಂಬಂಧಿಸಿದ ಮತ್ತೊಂದು ಮನೆಯ ಮೇಲೆ ಮೇ. 17ರಂದು ದಾಳಿ ನಡೆಸಿರುವ ಪೊಲೀಸರು ಅಲ್ಲಿ ಸಿಕ್ಕ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.[ರೌಡಿ ಶೀಟರ್ ನಾಗನ ಪತ್ತೆಯ ಹಿಂದಿನ ರೋಚಕ ಕಹಾನಿ]
ಇವುಗಳ ಜತೆಗೆ ವಶಪಡಿಸಿಕೊಳ್ಳಲಾಗಿರುವ ಡೈರಿಯಲ್ಲಿ ಕೆಲ ರೌಡಿಗಳು ಹಾಗೂ ಉದ್ದಿಮೆದಾರರ ಫೋನ್ ಸಂಖ್ಯೆಗಳು ಹಾಗೂ ವಿವರಗಳಿವೆ ಎಂದು ಹೇಳಲಾಗಿದೆ.[ಬೆಂಗಳೂರು ಪೊಲೀಸರ ಬಲೆಗೆ ನಾಗ, ಗಾಂಧಿ ಮತ್ತು ಶಾಸ್ತ್ರಿ]
ಏತನ್ಮಧ್ಯೆ, ನಾಗರಾಜ್ ನ ಕಪ್ಪು ಹಣ ಬಿಳಿಯಾಗಿಸುವ ದಂಧೆಗೆ ಸಾಥ್ ನೀಡುತ್ತಿದ್ದ ಆತನ ಪತ್ನಿ ಲಕ್ಷ್ಮಿ ಅವರ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ತಮಿಳುನಾಡಿನಲ್ಲಿ ಇತ್ತೀಚೆಗೆ ನಾಗ ಹಾಗೂ ಆತನ ಪುತ್ರರು ಸೆರೆ ಸಿಕ್ಕ ನಂತರ ತಲೆಮರೆಸಿಕೊಂಡಿರುವ ಲಕ್ಷ್ಮಿ ಪತ್ತೆಗೆ ಪೊಲೀಸರು ಪ್ರಯತ್ನ ನಡೆಸಿದ್ದಾರೆ.
{promotion-urls}
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications