ಸೈಬರ್ ವಂಚಕರು ದೋಚಿದ್ದ ₹2.16 ಕೋಟಿ ಯಶಸ್ವಿಯಾಗಿ ಹಿಂಪಡೆದ ಬೆಂಗಳೂರು ಪೊಲೀಸರು
ಬೆಂಗಳೂರು: ಖಾಸಗಿ ಲ್ಯಾಬೊರೇಟರೀಸ್ಗೆ ಸಂಬಂಧಿಸಿದ ಮಹತ್ವದ ವ್ಯವಹಾರಗಳಲ್ಲಿ ಬಳಸಲಾಗುತ್ತಿದ್ದ ಇ-ಮೇಲ್ ಐಡಿಯನ್ನು ನಕಲಿ ಮಾಡಿ (ಇ-ಮೇಲ್ ಸ್ಪೂಫಿಂಗ್) ಬರೋಬ್ಬರಿ ₹2.16 ಕೋಟಿ ವಂಚಿಸಿದ್ದ ಅಂತರರಾಷ್ಟ್ರೀಯ ಸೈಬರ್ ಅಪರಾಧ ಜಾಲವನ್ನು ಬೆಂಗಳೂರು ಸಿಸಿಬಿಯ ಸೈಬರ್ ಕ್ರೈಂ ವಿಭಾಗ ಪತ್ತೆಹಚ್ಚಿದ್ದು, ಸಂಪೂರ್ಣ ಹಣವನ್ನು ವಾಪಸ್ ಪಡೆಯುವಲ್ಲಿ ಯಶಸ್ವಿಯಾಗಿದೆ.
ಸುಮಾರು ಒಂದು ವರ್ಷ ಕಾಲ ನಡೆದ ತನಿಖೆಯ ನಂತರ, ವಂಚನೆಯ ಮೂಲಕ ಬೇರೆ ಖಾತೆಗೆ ವರ್ಗಾಯಿಸಲಾಗಿದ್ದ ₹2.16 ಕೋಟಿ ಮೊತ್ತವನ್ನು ಸಂಪೂರ್ಣವಾಗಿ ಡಾ.ರೆಡ್ಡೀಸ್ ಲ್ಯಾಬೊರೇಟರೀಸ್ಗೆ ಮರುಪಾವತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣ 2025ರ ಫೆಬ್ರವರಿ 2ರಂದು ಬೆಳಕಿಗೆ ಬಂದಿತ್ತು. ಗ್ರೂಪ್ ಫಾರ್ಮಾ ಕಂಪನಿಯ ಪ್ರತಿನಿಧಿಗಳು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರಿನ ಪ್ರಕಾರ, ವಿದೇಶದಿಂದ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರು, ಹೈದರಾಬಾದ್ ಮೂಲದ ಡಾ.ರೆಡ್ಡೀಸ್ ಲ್ಯಾಬೊರೇಟರೀಸ್ ಜೊತೆಗಿನ ವ್ಯವಹಾರಗಳಿಗೆ ಬಳಸುತ್ತಿದ್ದ ಅಧಿಕೃತ ಇ-ಮೇಲ್ ಐಡಿಯನ್ನು ನಕಲಿ ರೂಪದಲ್ಲಿ ಬಳಸಿಕೊಂಡು ಹಣ ವರ್ಗಾವಣೆ ಮಾಡಿಸಿಕೊಂಡಿದ್ದರು. ನಕಲಿ ಇ-ಮೇಲ್ ಮೂಲಕ ವಿಶ್ವಾಸ ಗಳಿಸಿದ ಆರೋಪಿಗಳು, ಹಂತ ಹಂತವಾಗಿ ಒಟ್ಟು ₹2.16 ಕೋಟಿ ಹಣವನ್ನು ಗುಜರಾತ್ನ ಅಹಮದಾಬಾದ್ನಲ್ಲಿರುವ ಒಂದು ಬ್ಯಾಂಕ್ ಖಾತೆಗೆ ವರ್ಗಾಯಿಸಿದ್ದರು. ಅನುಮಾನ ಬರದಂತೆ ಹಣವನ್ನು ಒಂದೇ ಬಾರಿ ಅಲ್ಲದೆ, ಹಲವು ಹಂತಗಳಲ್ಲಿ ವರ್ಗಾವಣೆ ಮಾಡಲಾಗಿತ್ತು.
ನೈಜೀರಿಯಾದಿಂದ ಕೃತ್ಯ
ದೂರು ಸ್ವೀಕರಿಸಿದ ತಕ್ಷಣವೇ ಸಿಸಿಬಿ ಸೈಬರ್ ಕ್ರೈಂ ತಂಡ ಬ್ಯಾಂಕ್ ಆಫ್ ಬರೋಡಾಕ್ಕೆ ಕಾನೂನು ನೋಟಿಸ್ ನೀಡಿತು. ಈ ತಕ್ಷಣದ ಕ್ರಮದಿಂದಾಗಿ ಆರೋಪಿಗಳು ಹಣವನ್ನು ಸಂಪೂರ್ಣವಾಗಿ ಹಿಂಪಡೆಯುವ ಅಥವಾ ಮತ್ತೊಂದು ಖಾತೆಗೆ ವರ್ಗಾಯಿಸುವ ಮೊದಲೇ ಆ ಖಾತೆಯನ್ನು ಫ್ರೀಜ್ ಮಾಡಲಾಯಿತು. ತನಿಖೆಯಲ್ಲಿ ಈ ಇ-ಮೇಲ್ ಸ್ಪೂಫಿಂಗ್ ಕೃತ್ಯ ನೈಜೀರಿಯಾದಿಂದ ನಡೆದಿರುವುದು ದೃಢಪಟ್ಟಿತು. ಬಳಿಕ ಪ್ರಕರಣವನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದ್ದು, ಜನವರಿಯಲ್ಲಿ ನ್ಯಾಯಾಲಯವು ಫ್ರೀಜ್ ಮಾಡಿದ್ದ ಹಣವನ್ನು ಬಿಡುಗಡೆ ಮಾಡಲು ಆದೇಶ ನೀಡಿತು. ಇದೀಗ ಸಂಪೂರ್ಣ ₹2.16 ಕೋಟಿ ಹಣವನ್ನು ಡಾ.ರೆಡ್ಡೀಸ್ ಲ್ಯಾಬೊರೇಟರೀಸ್ಗೆ ಮರುಪಾವತಿ ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ.
ಗೋಲ್ಡನ್ ಅವರ್ನಿಂದಾಗಿ ಯಶಸ್ವಿ
ಹಣ ವಾಪಸ್ ಪಡೆಯುವಲ್ಲಿ ಯಶಸ್ಸು ದೊರೆತಿದ್ದರೂ, ವಿದೇಶದಿಂದ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನಿನ ಮುಂದೆ ತರುವ ಪ್ರಕ್ರಿಯೆ ನಡೆಸಲು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣವು ಸೈಬರ್ ಅಪರಾಧದಲ್ಲಿ ಗೋಲ್ಡನ್ ಅವರ್ ಒಳಗೆ ದೂರು ನೀಡುವುದು ಎಷ್ಟು ಮಹತ್ವದದ್ದು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಸಮಯಕ್ಕೆ ಸರಿಯಾಗಿ ದೂರು ನೀಡಿದ್ದರಿಂದಲೇ ಹಣವನ್ನು ಫ್ರೀಜ್ ಮಾಡಿ ಸಂಪೂರ್ಣ ಮೊತ್ತವನ್ನು ವಾಪಸ್ ಪಡೆಯಲು ಸಾಧ್ಯವಾಯಿತು ಎಂದು ಸಿಸಿಬಿ ಅಧಿಕಾರಿಗಳು ವಿವರಿಸಿದ್ದಾರೆ.
-
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Rashmika: ಹೈದರಾಬಾದ್ನಲ್ಲಿ ರಶ್ಮಿಕಾ-ವಿಜಯ್ ಅರತಕ್ಷತೆ: ನವದಂಪತಿಗೆ ಡಿಕೆ ಶಿವಕುಮಾರ್ ವಿಶ್












Click it and Unblock the Notifications