ಸೈಬರ್ ವಂಚಕರು ದೋಚಿದ್ದ ₹2.16 ಕೋಟಿ ಯಶಸ್ವಿಯಾಗಿ ಹಿಂಪಡೆದ ಬೆಂಗಳೂರು ಪೊಲೀಸರು
ಬೆಂಗಳೂರು: ಖಾಸಗಿ ಲ್ಯಾಬೊರೇಟರೀಸ್ಗೆ ಸಂಬಂಧಿಸಿದ ಮಹತ್ವದ ವ್ಯವಹಾರಗಳಲ್ಲಿ ಬಳಸಲಾಗುತ್ತಿದ್ದ ಇ-ಮೇಲ್ ಐಡಿಯನ್ನು ನಕಲಿ ಮಾಡಿ (ಇ-ಮೇಲ್ ಸ್ಪೂಫಿಂಗ್) ಬರೋಬ್ಬರಿ ₹2.16 ಕೋಟಿ ವಂಚಿಸಿದ್ದ ಅಂತರರಾಷ್ಟ್ರೀಯ ಸೈಬರ್ ಅಪರಾಧ ಜಾಲವನ್ನು ಬೆಂಗಳೂರು ಸಿಸಿಬಿಯ ಸೈಬರ್ ಕ್ರೈಂ ವಿಭಾಗ ಪತ್ತೆಹಚ್ಚಿದ್ದು, ಸಂಪೂರ್ಣ ಹಣವನ್ನು ವಾಪಸ್ ಪಡೆಯುವಲ್ಲಿ ಯಶಸ್ವಿಯಾಗಿದೆ.
ಸುಮಾರು ಒಂದು ವರ್ಷ ಕಾಲ ನಡೆದ ತನಿಖೆಯ ನಂತರ, ವಂಚನೆಯ ಮೂಲಕ ಬೇರೆ ಖಾತೆಗೆ ವರ್ಗಾಯಿಸಲಾಗಿದ್ದ ₹2.16 ಕೋಟಿ ಮೊತ್ತವನ್ನು ಸಂಪೂರ್ಣವಾಗಿ ಡಾ.ರೆಡ್ಡೀಸ್ ಲ್ಯಾಬೊರೇಟರೀಸ್ಗೆ ಮರುಪಾವತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣ 2025ರ ಫೆಬ್ರವರಿ 2ರಂದು ಬೆಳಕಿಗೆ ಬಂದಿತ್ತು. ಗ್ರೂಪ್ ಫಾರ್ಮಾ ಕಂಪನಿಯ ಪ್ರತಿನಿಧಿಗಳು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರಿನ ಪ್ರಕಾರ, ವಿದೇಶದಿಂದ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರು, ಹೈದರಾಬಾದ್ ಮೂಲದ ಡಾ.ರೆಡ್ಡೀಸ್ ಲ್ಯಾಬೊರೇಟರೀಸ್ ಜೊತೆಗಿನ ವ್ಯವಹಾರಗಳಿಗೆ ಬಳಸುತ್ತಿದ್ದ ಅಧಿಕೃತ ಇ-ಮೇಲ್ ಐಡಿಯನ್ನು ನಕಲಿ ರೂಪದಲ್ಲಿ ಬಳಸಿಕೊಂಡು ಹಣ ವರ್ಗಾವಣೆ ಮಾಡಿಸಿಕೊಂಡಿದ್ದರು. ನಕಲಿ ಇ-ಮೇಲ್ ಮೂಲಕ ವಿಶ್ವಾಸ ಗಳಿಸಿದ ಆರೋಪಿಗಳು, ಹಂತ ಹಂತವಾಗಿ ಒಟ್ಟು ₹2.16 ಕೋಟಿ ಹಣವನ್ನು ಗುಜರಾತ್ನ ಅಹಮದಾಬಾದ್ನಲ್ಲಿರುವ ಒಂದು ಬ್ಯಾಂಕ್ ಖಾತೆಗೆ ವರ್ಗಾಯಿಸಿದ್ದರು. ಅನುಮಾನ ಬರದಂತೆ ಹಣವನ್ನು ಒಂದೇ ಬಾರಿ ಅಲ್ಲದೆ, ಹಲವು ಹಂತಗಳಲ್ಲಿ ವರ್ಗಾವಣೆ ಮಾಡಲಾಗಿತ್ತು.
ನೈಜೀರಿಯಾದಿಂದ ಕೃತ್ಯ
ದೂರು ಸ್ವೀಕರಿಸಿದ ತಕ್ಷಣವೇ ಸಿಸಿಬಿ ಸೈಬರ್ ಕ್ರೈಂ ತಂಡ ಬ್ಯಾಂಕ್ ಆಫ್ ಬರೋಡಾಕ್ಕೆ ಕಾನೂನು ನೋಟಿಸ್ ನೀಡಿತು. ಈ ತಕ್ಷಣದ ಕ್ರಮದಿಂದಾಗಿ ಆರೋಪಿಗಳು ಹಣವನ್ನು ಸಂಪೂರ್ಣವಾಗಿ ಹಿಂಪಡೆಯುವ ಅಥವಾ ಮತ್ತೊಂದು ಖಾತೆಗೆ ವರ್ಗಾಯಿಸುವ ಮೊದಲೇ ಆ ಖಾತೆಯನ್ನು ಫ್ರೀಜ್ ಮಾಡಲಾಯಿತು. ತನಿಖೆಯಲ್ಲಿ ಈ ಇ-ಮೇಲ್ ಸ್ಪೂಫಿಂಗ್ ಕೃತ್ಯ ನೈಜೀರಿಯಾದಿಂದ ನಡೆದಿರುವುದು ದೃಢಪಟ್ಟಿತು. ಬಳಿಕ ಪ್ರಕರಣವನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದ್ದು, ಜನವರಿಯಲ್ಲಿ ನ್ಯಾಯಾಲಯವು ಫ್ರೀಜ್ ಮಾಡಿದ್ದ ಹಣವನ್ನು ಬಿಡುಗಡೆ ಮಾಡಲು ಆದೇಶ ನೀಡಿತು. ಇದೀಗ ಸಂಪೂರ್ಣ ₹2.16 ಕೋಟಿ ಹಣವನ್ನು ಡಾ.ರೆಡ್ಡೀಸ್ ಲ್ಯಾಬೊರೇಟರೀಸ್ಗೆ ಮರುಪಾವತಿ ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ.
ಗೋಲ್ಡನ್ ಅವರ್ನಿಂದಾಗಿ ಯಶಸ್ವಿ
ಹಣ ವಾಪಸ್ ಪಡೆಯುವಲ್ಲಿ ಯಶಸ್ಸು ದೊರೆತಿದ್ದರೂ, ವಿದೇಶದಿಂದ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನಿನ ಮುಂದೆ ತರುವ ಪ್ರಕ್ರಿಯೆ ನಡೆಸಲು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣವು ಸೈಬರ್ ಅಪರಾಧದಲ್ಲಿ ಗೋಲ್ಡನ್ ಅವರ್ ಒಳಗೆ ದೂರು ನೀಡುವುದು ಎಷ್ಟು ಮಹತ್ವದದ್ದು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಸಮಯಕ್ಕೆ ಸರಿಯಾಗಿ ದೂರು ನೀಡಿದ್ದರಿಂದಲೇ ಹಣವನ್ನು ಫ್ರೀಜ್ ಮಾಡಿ ಸಂಪೂರ್ಣ ಮೊತ್ತವನ್ನು ವಾಪಸ್ ಪಡೆಯಲು ಸಾಧ್ಯವಾಯಿತು ಎಂದು ಸಿಸಿಬಿ ಅಧಿಕಾರಿಗಳು ವಿವರಿಸಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications