ಸೈಬರ್ ವಂಚಕರು ದೋಚಿದ್ದ ₹2.16 ಕೋಟಿ ಯಶಸ್ವಿಯಾಗಿ ಹಿಂಪಡೆದ ಬೆಂಗಳೂರು ಪೊಲೀಸರು
ಬೆಂಗಳೂರು: ಖಾಸಗಿ ಲ್ಯಾಬೊರೇಟರೀಸ್ಗೆ ಸಂಬಂಧಿಸಿದ ಮಹತ್ವದ ವ್ಯವಹಾರಗಳಲ್ಲಿ ಬಳಸಲಾಗುತ್ತಿದ್ದ ಇ-ಮೇಲ್ ಐಡಿಯನ್ನು ನಕಲಿ ಮಾಡಿ (ಇ-ಮೇಲ್ ಸ್ಪೂಫಿಂಗ್) ಬರೋಬ್ಬರಿ ₹2.16 ಕೋಟಿ ವಂಚಿಸಿದ್ದ ಅಂತರರಾಷ್ಟ್ರೀಯ ಸೈಬರ್ ಅಪರಾಧ ಜಾಲವನ್ನು ಬೆಂಗಳೂರು ಸಿಸಿಬಿಯ ಸೈಬರ್ ಕ್ರೈಂ ವಿಭಾಗ ಪತ್ತೆಹಚ್ಚಿದ್ದು, ಸಂಪೂರ್ಣ ಹಣವನ್ನು ವಾಪಸ್ ಪಡೆಯುವಲ್ಲಿ ಯಶಸ್ವಿಯಾಗಿದೆ.
ಸುಮಾರು ಒಂದು ವರ್ಷ ಕಾಲ ನಡೆದ ತನಿಖೆಯ ನಂತರ, ವಂಚನೆಯ ಮೂಲಕ ಬೇರೆ ಖಾತೆಗೆ ವರ್ಗಾಯಿಸಲಾಗಿದ್ದ ₹2.16 ಕೋಟಿ ಮೊತ್ತವನ್ನು ಸಂಪೂರ್ಣವಾಗಿ ಡಾ.ರೆಡ್ಡೀಸ್ ಲ್ಯಾಬೊರೇಟರೀಸ್ಗೆ ಮರುಪಾವತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣ 2025ರ ಫೆಬ್ರವರಿ 2ರಂದು ಬೆಳಕಿಗೆ ಬಂದಿತ್ತು. ಗ್ರೂಪ್ ಫಾರ್ಮಾ ಕಂಪನಿಯ ಪ್ರತಿನಿಧಿಗಳು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರಿನ ಪ್ರಕಾರ, ವಿದೇಶದಿಂದ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರು, ಹೈದರಾಬಾದ್ ಮೂಲದ ಡಾ.ರೆಡ್ಡೀಸ್ ಲ್ಯಾಬೊರೇಟರೀಸ್ ಜೊತೆಗಿನ ವ್ಯವಹಾರಗಳಿಗೆ ಬಳಸುತ್ತಿದ್ದ ಅಧಿಕೃತ ಇ-ಮೇಲ್ ಐಡಿಯನ್ನು ನಕಲಿ ರೂಪದಲ್ಲಿ ಬಳಸಿಕೊಂಡು ಹಣ ವರ್ಗಾವಣೆ ಮಾಡಿಸಿಕೊಂಡಿದ್ದರು. ನಕಲಿ ಇ-ಮೇಲ್ ಮೂಲಕ ವಿಶ್ವಾಸ ಗಳಿಸಿದ ಆರೋಪಿಗಳು, ಹಂತ ಹಂತವಾಗಿ ಒಟ್ಟು ₹2.16 ಕೋಟಿ ಹಣವನ್ನು ಗುಜರಾತ್ನ ಅಹಮದಾಬಾದ್ನಲ್ಲಿರುವ ಒಂದು ಬ್ಯಾಂಕ್ ಖಾತೆಗೆ ವರ್ಗಾಯಿಸಿದ್ದರು. ಅನುಮಾನ ಬರದಂತೆ ಹಣವನ್ನು ಒಂದೇ ಬಾರಿ ಅಲ್ಲದೆ, ಹಲವು ಹಂತಗಳಲ್ಲಿ ವರ್ಗಾವಣೆ ಮಾಡಲಾಗಿತ್ತು.
ನೈಜೀರಿಯಾದಿಂದ ಕೃತ್ಯ
ದೂರು ಸ್ವೀಕರಿಸಿದ ತಕ್ಷಣವೇ ಸಿಸಿಬಿ ಸೈಬರ್ ಕ್ರೈಂ ತಂಡ ಬ್ಯಾಂಕ್ ಆಫ್ ಬರೋಡಾಕ್ಕೆ ಕಾನೂನು ನೋಟಿಸ್ ನೀಡಿತು. ಈ ತಕ್ಷಣದ ಕ್ರಮದಿಂದಾಗಿ ಆರೋಪಿಗಳು ಹಣವನ್ನು ಸಂಪೂರ್ಣವಾಗಿ ಹಿಂಪಡೆಯುವ ಅಥವಾ ಮತ್ತೊಂದು ಖಾತೆಗೆ ವರ್ಗಾಯಿಸುವ ಮೊದಲೇ ಆ ಖಾತೆಯನ್ನು ಫ್ರೀಜ್ ಮಾಡಲಾಯಿತು. ತನಿಖೆಯಲ್ಲಿ ಈ ಇ-ಮೇಲ್ ಸ್ಪೂಫಿಂಗ್ ಕೃತ್ಯ ನೈಜೀರಿಯಾದಿಂದ ನಡೆದಿರುವುದು ದೃಢಪಟ್ಟಿತು. ಬಳಿಕ ಪ್ರಕರಣವನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದ್ದು, ಜನವರಿಯಲ್ಲಿ ನ್ಯಾಯಾಲಯವು ಫ್ರೀಜ್ ಮಾಡಿದ್ದ ಹಣವನ್ನು ಬಿಡುಗಡೆ ಮಾಡಲು ಆದೇಶ ನೀಡಿತು. ಇದೀಗ ಸಂಪೂರ್ಣ ₹2.16 ಕೋಟಿ ಹಣವನ್ನು ಡಾ.ರೆಡ್ಡೀಸ್ ಲ್ಯಾಬೊರೇಟರೀಸ್ಗೆ ಮರುಪಾವತಿ ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ.
ಗೋಲ್ಡನ್ ಅವರ್ನಿಂದಾಗಿ ಯಶಸ್ವಿ
ಹಣ ವಾಪಸ್ ಪಡೆಯುವಲ್ಲಿ ಯಶಸ್ಸು ದೊರೆತಿದ್ದರೂ, ವಿದೇಶದಿಂದ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನಿನ ಮುಂದೆ ತರುವ ಪ್ರಕ್ರಿಯೆ ನಡೆಸಲು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣವು ಸೈಬರ್ ಅಪರಾಧದಲ್ಲಿ ಗೋಲ್ಡನ್ ಅವರ್ ಒಳಗೆ ದೂರು ನೀಡುವುದು ಎಷ್ಟು ಮಹತ್ವದದ್ದು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಸಮಯಕ್ಕೆ ಸರಿಯಾಗಿ ದೂರು ನೀಡಿದ್ದರಿಂದಲೇ ಹಣವನ್ನು ಫ್ರೀಜ್ ಮಾಡಿ ಸಂಪೂರ್ಣ ಮೊತ್ತವನ್ನು ವಾಪಸ್ ಪಡೆಯಲು ಸಾಧ್ಯವಾಯಿತು ಎಂದು ಸಿಸಿಬಿ ಅಧಿಕಾರಿಗಳು ವಿವರಿಸಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications