ಬೆಂಗಳೂರು ಪೊಲೀಸರಿಂದ ರೌಡಿ ಪರೇಡ್, ಮಾನವ ಹಕ್ಕು ಉಲ್ಲಂಘನೆ?
ಬೆಂಗಳೂರು, ಆಗಸ್ಟ್ 11 : ಬೆಂಗಳೂರು ಪೊಲೀಸರು ನಡೆಸುವ ರೌಡಿ ಪರೇಡ್ ವಿವಾದಕ್ಕೆ ಕಾರಣವಾಗಿದೆ. ಪರೇಡ್ನಲ್ಲಿ ಮಾನವ ಹಕ್ಕುಗಳನ್ನು ಉಲ್ಲಂಘಟನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಸ್ವಾತಂತ್ರ ದಿನಾಚರಣೆ ಮತ್ತು ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಬೆಂಗಳೂರು ಉತ್ತರ ವಿಭಾಗದ ಪೊಲೀಸರು 379 ರೌಡಿಗಳ ಪರೇಡ್ ನಡೆಸಿದರು. ಈ ಸಂದರ್ಭದಲ್ಲಿ ಮಾನವ ಹಕ್ಕುಗಳನ್ನು ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಉತ್ತರ ವಿಭಾಗದ ಪೊಲೀಸರು ಡಿಸಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ 779 ರೌಡಿಗಳ ಮನೆಗಳ ಮೇಲೆ ದಾಳಿ ಮಾಡಿದ್ದರು. ಗುರುವಾರ ಮಲ್ಲೇಶ್ವರಂ ಆಟದ ಮೈದಾನದಲ್ಲಿ 379 ರೌಡಿಗಳ ಪರೇಡ್ ಮಾಡಿದ್ದರು.

ಈ ಸಂದರ್ಭದಲ್ಲಿ ಮೀಸೆ ಬಿಟ್ಟಿರುವುದು, ಕ್ಷೌರ ಮಾಡಿಸದಿರುವುದು ಹಾಗೂ ರೌಡಿಗಳ ವೇಷ-ಭೂಷಣಗಳ ಬಗ್ಗೆ ಪೊಲೀಸರು ಹೀಯಾಳಿಸಿದ್ದಾರೆ. ಡಿಸಿಪಿ ನೀಡಿದ ಸೂಚನೆಯಂತೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ರೌಡಿಯೊಬ್ಬರ ಮೀಸೆ ಹಿಡಿದು ಎಳೆದು ತಂದು ನಿಲ್ಲಿಸಿದ್ದಾರೆ.
ರೌಡಿಗಳ ಪರೇಡ್ ನಡೆಸಿದಾಗ ಪ್ರಸ್ತುತ ಕೆಲಸ, ಮನೆ ವಿಳಾಸ, ಸಂಬಂಧಿಕರ ವಿಳಾಸ, ಮೊಬೈಲ್ ನಂಬರ್ ಪಡೆದುಕೊಂಡು ಅವರ ಮನ ಪರಿವರ್ತನೆ ಆಗುವಂತೆ ಸೂಚನೆಗಳನ್ನು ನೀಡಬೇಕು. ಆದರೆ, ಪೊಲೀಸರು ಪರೇಡ್ ಅನ್ನು ಶೋ ಅಪ್ ಕಾರ್ಯಕ್ರಮದಂತೆ ಮಾಡುತ್ತಾರೆ ಎಂಬುದು ಆರೋಪವಾಗಿದೆ.
ಶೇವಿಂಗ್, ಕಟಿಂಗ್ : ಪರೇಡ್ಗೆ ಬಂದಿದ್ದ ರೌಡಿಗಳ ಗಡ್ಡ, ಮೀಸೆ, ಹೇರ್ ಸ್ಟೈಲ್ಗೆ ಆಕ್ಷೇಪ ವ್ಯಕ್ತಪಡಿಸಲಾಗಿದೆ. ವಿಭಿನ್ನ ಹೇರ್ ಸ್ಟೈಲ್ ಹೊಂದಿದ್ದ ರೌಡಿಗಳಿಗೆ ಕಪಾಳ ಮೋಕ್ಷ ಮಾಡಲಾಗಿದೆ. ಲಾಠಿಯಿಂದ ಥಳಿಸಲಾಗಿದೆ. ಸ್ಥಳದಲ್ಲಿಯೇ ಅವರಿಗೆ ಕಟಿಂಗ್, ಶೇವಿಂಗ್ ಮಾಡಲಾಗಿದೆ.
ನಿವೃತ್ತ ಪೊಲೀಸ್ ಅಧಿಕಾರಿಗಳು ಪರೇಡ್ನಲ್ಲಿ ಪೊಲೀಸರ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೌಡಿಗಳಿಗೆ ಎಚ್ಚರಿಕೆ ನೀಡುವ ಕಾರ್ಯಕ್ರಮ ಶೋ ಅಪ್ ಕಾರ್ಯಕ್ರಮವಾಗಿದೆ. ರೌಡಿಗಳ ಮೇಲೆ ನಿಗಾ ಇಡಬೇಕು, ಬರೀ ಪರೇಡ್ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಕೆಲವು ನಿವೃತ್ತ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
-
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ












Click it and Unblock the Notifications