ಬೆಂಗಳೂರು : ಹೊಸ ವರ್ಷಾಚರಣೆ ಮೇಲೆ ಸಿಸಿಟಿವಿ ಕಣ್ಣು
ಬೆಂಗಳೂರು, ಡಿ. 30 : ಚರ್ಚ್ ಸ್ಟ್ರೀಟ್ನಲ್ಲಿ ಭಾನುವಾರ ರಾತ್ರಿ ಬಾಂಬ್ ಸ್ಫೋಟಗೊಂಡಿದ್ದರಿಂದ ಪೊಲೀಸರು ಹೊಸ ವರ್ಷಾಚರಣೆ ಮೇಲೆ ಕಣ್ಣಿಟ್ಟಿದ್ದಾರೆ. ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಹೆಚ್ಚುವರಿಯಾಗಿ 15 ಸಿಸಿಟಿವಿಗಳನ್ನು ಅವಳವಡಿಸಲಾಗುತ್ತಿದೆ. ತುರ್ತು ಸಂದರ್ಭದಲ್ಲಿ ಸಹಾಯಕ್ಕೆ ಬರುವಂತೆ ಸಾರ್ವಜನಿಕ ಸ್ಥಳದಲ್ಲಿ 108 ಆಂಬ್ಯುಲೆನ್ಸ್ಗಳನ್ನು ನಿಲ್ಲಿಸಲು ಆರೋಗ್ಯ ಸಚಿವರು ಆದೇಶ ಹೊರಡಿಸಿದ್ದಾರೆ.
ಭಾನುವಾರ ರಾತ್ರಿ ಚರ್ಚ್ ಸ್ಟ್ರೀಟ್ನಲ್ಲಿ ಬಾಂಬ್ ಸ್ಫೋಟಗೊಂಡಿದ್ದರಿಂದ ಬೆಂಗಳೂರಿನ ಹೊಸ ವರ್ಷಾಚರಣೆ ನಡೆಯುವ ಪ್ರಮುಖ ಸ್ಥಳವಾದ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಅಗತ್ಯ ಮೆನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ರಾತ್ರಿ 1 ಗಂಟೆಯ ತನಕ ಇಲ್ಲಿ ಸಂಭ್ರಮಾಚರಣೆ ಮಾಡಲು ಪೊಲೀಸರು ಅವಕಾಶ ನೀಡಿದ್ದಾರೆ. [1 ಗಂಟೆವರೆಗೆ ಬಾರ್, ಹೋಟೆಲ್ ಓಪನ್ ತೆರೆದಿಡಲು ಒಪ್ಪಿಗೆ]

ಮಂಗಳವಾರ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಪೊಲೀಸರು ಹೆಚ್ಚುವರಿಯಾಗಿ 15 ಸಿಸಿಟಿವಿಗಳನ್ನು ಆಳವಡಿಸುತ್ತಿದ್ದಾರೆ. ರಾತ್ರಿಯ ವೇಳೆಯಲ್ಲಿಯೂ ರಸ್ತೆಯ ಚಿತ್ರಣಗಳನ್ನು ಸ್ಪಷ್ಟವಾಗಿ ಸೆರೆ ಹಿಡಿಯುವ ಸಾಮರ್ಥ್ಯವನ್ನು ಈ ಕ್ಯಾಮರಾಗಳು ಹೊಂದಿವೆ. [ಸ್ಫೋಟದ ಹೊಣೆ ಹೊತ್ತಿದ್ದ ಅಬ್ದುಲ್ ಪೊಲೀಸರಿಗೆ ಸಿಕ್ಕ!]
ಆಂಬ್ಯುಲೆನ್ಸ್ ನಿಲ್ಲಿಸಲು ಸೂಚನೆ : ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟದ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಜನ ಸಂಚಾರ ಹೆಚ್ಚಿರುವ ಪ್ರದೇಶಗಳಲ್ಲಿ 108 ಆಂಬ್ಯುಲೆನ್ಸ್ಗಳನ್ನು ನಿಲ್ಲಿಸುವಂತೆ ಆರೋಗ್ಯ ಸಚಿವ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ.
ಹೊಸ ವರ್ಷಾಚರಣೆ ನಡೆಯುವ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ಸಾರ್ವಜನಿಕರ ಸ್ಥಳಗಳಲ್ಲಿ ಡಿ.31ರಂದು ಆಂಬ್ಯುಲೆನ್ಸ್ ಸಿದ್ಧವಾಗಿರುತ್ತದೆ. ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಸಹಕಾರಿಯಾಗಲು ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications