ಬೆಂಗಳೂರಿಗೆ ಕರೆಂಟ್ ಶಾಕ್: ಇಂದಿನಿಂದ ಮೂರು ದಿನಗಳ ಕಾಲ ವಿದ್ಯುತ್ ವ್ಯತ್ಯಯ- ಎಲ್ಲೆಲ್ಲಿ ತಿಳಿಯಿರಿ
ಬೆಂಗಳೂರು, ಆಗಸ್ಟ್ 22: ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಆಗಸ್ಟ್ 22 ರಿಂದ 24 ರ ವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.
ಆಗಸ್ಟ್ 22 ರಂದು ಲಕ್ಷ್ಮಿ ಲೇಔಟ್, ಕಮ್ಮನಹಳ್ಳಿ, ಶಾಂತಿನಿಕೇತನ, ದೊಡ್ಡಮ್ಮ ಲೇಔಟ್, ಪಾಂಡುರಂಗನಗರ ಲೇಔಟ್, ಬಿಡಬ್ಲ್ಯುಎಸ್ಎಸ್ಬಿ ಕೊತ್ತನೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಆಗಸ್ಟ್ 23 ರಂದು ಯಲಹಂಕ ನ್ಯೂ ಟೌನ್, ವಿದ್ಯಾರಣ್ಯಪುರ, ನ್ಯಾಯಾಂಗ ಬಡಾವಣೆ, ಉಣ್ಣಿಕೃಷ್ಣ ಡಬಲ್ ರೋಡ್, ಶೇಷಾದ್ರಿಪುರಂ, ಡೈರಿ ಸರ್ಕಲ್, ಸೋಮೇಶ್ವರ ನಗರ, ನ್ಯಾಯಾಂಗ ಬಡಾವಣೆ, ಚೌಡೇಶ್ವರಿ ಲೇಔಟ್, ಜಿಕೆವಿಕೆ, ಎನ್ಸಿಬಿಎಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯ ವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ.
ಆಗಸ್ಟ್ 24 ರಂದು ಸಹಕಾರ ನಗರ, ಬ್ಯಾಟರಾಯನಪುರ, ತಲಕಾವೇರಿ ಲೇಔಟ್, ಅಮೃತಹಳ್ಳಿ, ಜಕ್ಕೂರು, ಭುವನೇಶ್ವರಿನಗರ, ಅಮೃತನಗರ, ಶಿವರಾಮ ಕಾರಂತನಗರ, ನವ್ಯನಗರ, ಕೊಡಿಗೇಹಳ್ಳಿ ಮುಖ್ಯರಸ್ತೆ, ರಕ್ಷಣಾ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10.30ರಿಂದ ಮಧ್ಯಾಹ್ನ 3.30ರ ವರೆಗೆ ವಿದ್ಯುತ್ ಇರುವುದಿಲ್ಲ.

ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಎಚ್ಎಸ್ಆರ್ ಲೇಔಟ್, ಜಕ್ಕಸಂದ್ರ, ಸಿಪಿಡಬ್ಲ್ಯೂಡಿ ಕ್ವಾರ್ಟರ್ಸ್, ಟೀಚರ್ಸ್ ಕಾಲೋನಿ, ವೆಂಕಟಾಪುರ, ಕೆಎಸ್ಆರ್ಪಿ ಕ್ವಾರ್ಟರ್ಸ್, ಎಂಎಲ್ಎ ಲೇಔಟ್, ಸೋಮಸುಂದರಪಾಳ್ಯ, ಹರಳೂರು ರಸ್ತೆ, ಅಗರ ಫ್ಲೈಓವರ್, ಹೊಸೂರು ಮುಖ್ಯರಸ್ತೆ, ಅಂಬೇಡ್ಕರ್ ನಗರ, ಐಟಿಐ ಲೇಔಟ್, ಬೇಗೂರುಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಬೊಮ್ಮನಹಳ್ಳಿ, ಕೂಡ್ಲು, ವಾಸ್ತು ಲೇಔಟ್, ಮಾರುತಿ ಲೇಔಟ್, ಕೋರಮಂಗಲ, ವೀವರ್ಸ್ ಕಾಲೋನಿ, ಮಾರುತಿ ನಗರ, ಪಿಲ್ಲಗಾನಹಳ್ಳಿ, ಗೊಟ್ಟಿಗೆರೆ, ಎಂಎಲ್ಎ ಲೇಔಟ್, ಕಮ್ಮನಹಳ್ಳಿ, ಬಾಲಾಜಿ ಗಾರ್ಡನ್ ಲೇಔಟ್, ಬಸವನಪುರ, ತೇಜಶ್ವಿನಿನಗರ ಹಂತ-2, ಮೈಲಸಂದರ, ಹೊಮ್ಮೇದಡ್ಡಹಳ್ಳಿ, ಪ್ರಭಾವನ ರೆಡ್ಡಿ ಬೇಟದಾಸಪುರ, ಹುಲ್ಲಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.
ವಿದ್ಯುತ್ ವ್ಯತ್ಯಯ ಹಾಗೂ ಅಡಚಣೆಗಳಿಗೆ ಸಂಬಂಧಿಸಿದಂತೆ ದೂರುಗಳನ್ನು ಸಲ್ಲಿಸಲು ನೀವು 1912 ಅನ್ನು ಡಯಲ್ ಮಾಡಬಹುದು.

ಗೃಹಜ್ಯೋತಿ ಯೋಜನೆ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಆಗಸ್ಟ್ 1 ರಂದು ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿದೆ. ಇದು ಸರ್ಕಾರದ ಪ್ರಮುಖ ಯೋಜನೆಯಾಗಿದೆ. ಗೃಹ ಜ್ಯೋತಿ ಯೋಜನೆಗೆ ಚಾಲನೆ ದೊರೆತಾಗಿನಿಂದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ( ಬೆಸ್ಕಾಂ ) ಸಹಾಯವಾಣಿ ಸಂಖ್ಯೆ ( 1912 ) ಈ ವರೆಗೆ ನಾಗರಿಕರಿಂದ ಒಟ್ಟು 1,089 ದೂರುಗಳನ್ನು ಸ್ವೀಕರಿಸಿದೆ. ಈ ಪೈಕಿ 989 ದೂರುಗಳನ್ನು ಪರಿಹರಿಸಲಾಗಿದೆ ಎಂದು ಬೆಸ್ಕಾಂ ತಿಳಿಸಿದೆ.
ಗೃಹಜ್ಯೋತಿ ಯೋಜನೆಗೆ ಕಳೆದ 15 ದಿನಗಳಲ್ಲಿ ಹೊಸ ನೋಂದಣಿಗಳ ಸಂಖ್ಯೆ 11 ಲಕ್ಷದಷ್ಟು ಹೆಚ್ಚಾಗಿದೆ ಎಂದು ಇಂಧನ ಇಲಾಖೆಯ ಅಂಕಿಅಂಶಗಳು ಬಹಿರಂಗಪಡಿಸಿವೆ.
-
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ












Click it and Unblock the Notifications