ಎ.ಸೂರ್ಯಪ್ರಕಾಶ್ ಸೇರಿದಂತೆ 11 ಮಂದಿಗೆ ಪ್ರೆಸ್ ಕ್ಲಬ್ ಪ್ರಶಸ್ತಿ
ಬೆಂಗಳೂರು, ಡಿಸೆಂಬರ್ 22 : ಪ್ರೆಸ್ ಕ್ಲಬ್ ಆಫ್ ಬೆಂಗಳೂರು ನೀಡುವ ವರ್ಷದ ವ್ಯಕ್ತಿ ಮತ್ತು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಕಟಗೊಂಡಿದೆ. 'ಶತಮಾನದ ಶ್ರೀಗಳು' ಗೌರವಕ್ಕೆ ಸಿದ್ದಗಂಗಾಮಠದ ಡಾ. ಶ್ರೀ ಶಿವಕುಮಾರಸ್ವಾಮೀಜಿ ಪಾತ್ರರಾಗಿದ್ದಾರೆ. ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಬಹುಭಾಷಾ ನಟ ಪ್ರಕಾಶ್ ರೈ ಆಯ್ಕೆಯಾಗಿದ್ದಾರೆ.
ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಪ್ರಸಾರ ಭಾರತಿ ಅಧ್ಯಕ್ಷ ಡಾ. ಎ. ಸೂರ್ಯ ಪ್ರಕಾಶ್, ಪತ್ರಕರ್ತರಾದ ರಾಜಾ ಶೈಲೇಶ್ ಚಂದ್ರಗುಪ್ತ, ಅರೆಕೆರೆ ಜಯರಾಮ್, ಬಿ.ವಿ. ಮಲ್ಲಿಕಾರ್ಜುನಯ್ಯ, ಈಶ್ವರ್ ದೈತೋಟ, ವಿ. ರಾಮಸ್ವಾಮಿ ಕಣ್ವ, ಮಂಜುನಾಥ್ ಅದ್ದೆ, ಸುಗತ ಶ್ರೀನಿವಾಸ ರಾಜು, ಎಚ್.ಆರ್. ರಂಗನಾಥ್, ಆಯೇಷಾ ಖಾನಂ ಹಾಗೂ ಹಿರಿಯ ಛಾಯಾಗ್ರಾಹಕ ಕೆ. ವೆಂಕಟೇಶ್ ಆಯ್ಕೆಯಾಗಿದ್ದಾರೆ.

ಪತ್ರಕರ್ತ ಸುಗತ ಶ್ರೀನಿವಾಸ ರಾಜು ಅವರು ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ.

ಡಿಸೆಂಬರ್ 21 ರಂದು ನಡೆದ ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಪ್ರಶಸ್ತಿಯನ್ನು ಆಯ್ಕೆಮಾಡಲಾಗಿದೆ. ಡಿಸೆಂಬರ್ 31 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.












Click it and Unblock the Notifications