Private Bus Fare Hike: ಯುಗಾದಿ - ರಂಜಾನ್ ಸಾಲು ಸಾಲು ರಜೆ; ಖಾಸಗಿ ಬಸ್ಗಳ ಪ್ರಯಾಣ ದರ ದುಬಾರಿ, ಎಷ್ಟಾಗಿದೆ
Private Bus Fare Hike: ಬೆಂಗಳೂರಿನಿಂದ ಕರ್ನಾಟಕದ ವಿವಿಧ ನಗರ ಹಾಗೂ ಊರುಗಳಿಗೆ ಹೋಗುವ ಪ್ರಯಾಣಿಕರಿಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ. ಯುಗಾದಿ ಹಾಗೂ ರಂಜಾನ್ ಸೇರಿದಂತೆ ಈ ಬಾರಿ ಕರ್ನಾಟಕದಲ್ಲಿ ಸಾಲು - ಸಾಲು ರಜೆಗಳು ಬಂದಿವೆ. ಮಾರ್ಚ್ 19ರಿಂದ ಪ್ರಾರಂಭವಾಗಿ ಮಾರ್ಚ್ 23ರ ವರೆಗೂ ಸರ್ಕಾರಿ ರಜೆಗಳು ಇವೆ. ಸಾಲು - ಸಾಲು ರಜೆ ಹಾಗೂ ಹಬ್ಬದ ಹಿನ್ನೆಲೆಯಲ್ಲಿ ಜನ ಬೆಂಗಳೂರಿನಿಂದ ಕರ್ನಾಟಕದ ವಿವಿಧ ಪ್ರದೇಶಗಳಿಗೆ ಪ್ರಯಾಣ ಬೆಳೆಸುತ್ತಿದ್ದಾರೆ. ಆದರೆ ಎಂದಿನಂತೆ ಈ ಬಾರಿಯೂ ಖಾಸಗಿ ಬಸ್ಗಳು ಇದನ್ನೇ ಬಂಡವಾಳ ಮಾಡಿಕೊಂಡಿದ್ದು, ದುಬಾರಿ ಪ್ರಯಾಣ ದರವನ್ನು ನಿಗದಿ ಮಾಡಿವೆ. ಹಬ್ಬದ ಸೀಸನ್ನಲ್ಲಿ ಕೆಲವು ಖಾಸಗಿ ಬಸ್ಗಳ / ಬಸ್ ಮಾಲೀಕರ ಹಗಲು ದರೋಡೆ ಶುರುವಾಗಿದೆ.
ಬೆಂಗಳೂರಿನಲ್ಲಿ ಖಾಸಗಿ ಬಸ್ಗಳ ಟಿಕೆಟ್ ದರವನ್ನು ಎರಡರಿಂದ ಮೂರು ಪಟ್ಟು ಹೆಚ್ಚಳ ಮಾಡಲಾಗಿದೆ. ಸತತ ಐದು ದಿನಗಳ ವಾರದೆ ರಜೆ ಹಾಗೂ ವಾರಾಂತ್ಯವೂ ಸಹ ಇರುವುದರಿಂದ ಹಲವರು ತಮ್ಮ ಊರುಗಳಿಗೆ ಹಾಗೂ ಸಣ್ಣ ಪ್ರಯಾಣದ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಆದರೆ ಇದೀಗ ಖಾಸಗಿ ಬಸ್ಗಳ ಮಾಲೀಕರು ಏಕಾಏಕಿ ಬಸ್ಗಳ ಪ್ರಯಾಣ ದರವನ್ನು ಮೂರು ಪಟ್ಟು ಹೆಚ್ಚಳ ಮಾಡಿದ್ದಾರೆ. ಇನ್ನೂ ಆರ್ಸಿಟಿಸಿಯಲ್ಲಿಯೂ ವೈಟಿಂಗ್ ಲಿಸ್ಟ್ ಸಂಖ್ಯೆ ಹೆಚ್ಚಾಗುತ್ತಿದೆ. ವಿವಿಧ ರೈಲುಗಳಲ್ಲಿ ಪ್ರಯಾಣಿಕರಿಗೆ ಟಿಕೆಟ್ ಸಿಗುತ್ತಿಲ್ಲ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹೆಚ್ಚುವರಿ ಬಸ್ಗಳ ಸೇವೆ ನೀಡಲಾಗಿದೆ ಎಂದು ಹೇಳಲಾಗಿದ್ದರೂ, ಪರಿಸ್ಥಿತಿ ಸುಧಾರಿಸುತ್ತಿಲ್ಲ.

ಹಬ್ಬದ ರಜೆ ದಿನಗಳು
ಮಾರ್ಚ್ 19: ಯುಗಾದಿ ಹಬ್ಬ
ಮಾರ್ಚ್ 20: ರಂಜಾನ್ (ಆರ್ಎಚ್)
ಮಾರ್ಚ್ 21: ರಂಜಾನ್
ಮಾರ್ಚ್ 22: ಭಾನುವಾರ
ಮಾರ್ಚ್ 23: ದೇವರ ದಾಸೀಮಯ್ಯ ಜಯಂತಿ (ಆರ್ಎಚ್) ಇರುವುದರಿಂದ ಬೆಂಗಳೂರಿನಲ್ಲಿ ಇರುವವರು ದೂರದ ಊರುಗಳಿಗೆ ಪ್ರಯಾಣಿಸಲು ಖಾಸಗಿ ಬಸ್ ಟಿಕೆಟ್ ಬುಕ್ ಮಾಡಿಕೊಳ್ಳುತ್ತಿದ್ದಾರೆ. ಆದರೆ ಖಾಸಗಿ ಬಸ್ಗಳ ಪ್ರಯಾಣ ದರವು ಏಕಾಏಕಿ ಹೆಚ್ಚಳವಾಗಿದೆ. ಖಾಸಗಿ ಬಸ್ಗಳ ಪ್ರಯಾಣ ದರ ಈ ಹಿಂದೆ ಎಷ್ಟಿತ್ತು ಹಾಗೂ ಈಗ ಎಷ್ಟಿದೆ ಎನ್ನುವ ವಿವರ ಇಲ್ಲಿದೆ.
| ಮಾರ್ಗ | ಹಳೆಯ ದರ | ಹೊಸ ದರ |
|---|---|---|
| ಬೆಂಗಳೂರು - ಮಂಗಳೂರು | ₹600 | ₹ 3000 |
| ಬೆಂಗಳೂರು - ಧಾರವಾಡ / ಹುಬ್ಬಳ್ಳಿ | ₹400 - ₹1,300 | ₹4,500 |
| ಬೆಂಗಳೂರು - ಶಿವಮೊಗ್ಗ | ₹400 | ₹2,799 |
| ಬೆಂಗಳೂರು - ಧರ್ಮಸ್ಥಳ | ₹500 | ₹3,600 |
| ಬೆಂಗಳೂರು - ಮೈಸೂರು | ₹350 | ₹2,500 |
2,000 ಹೆಚ್ಚುವರಿ ಬಸ್ ಸೇವೆ
ಇನ್ನು ಕರ್ನಾಟಕ ಸರ್ಕಾರವು ಹಬ್ಬದ ಸೀಸನ್ ಹಿನ್ನೆಲೆಯಲ್ಲಿ 2,000 ಹೆಚ್ಚುವರಿ ಬಸ್ಗಳ ಸೇವೆಯನ್ನು ಕಲ್ಪಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)ಯಿಂದ ಮಾರ್ಚ್ 18, 19 ಮತ್ತು 20 ರಂದು ಬೆಂಗಳೂರಿನ ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್), ಮೈಸೂರು ರಸ್ತೆ ಸ್ಯಾಟಲೈಟ್ ಹಾಗೂ ಶಾಂತಿನಗರ ನಿಲ್ದಾಣಗಳಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ 2,000 ಹೆಚ್ಚುವರಿ ಬಸ್ಗಳ ಸೇವೆ ಕಲ್ಪಿಸಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications