Bengaluru Property: ಆಸ್ತಿ ಹರಾಜು ಭೀತಿಗೆ ಬೆಚ್ಚಿದ ಬೆಂಗಳೂರು ಆಸ್ತಿದಾರರು: 27.6 ಲಕ್ಷ ರೂ. ಆಸ್ತಿ ತೆರಿಗೆ ಪಾವತಿ
Bengaluru Property: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಆಸ್ತಿ ಹರಾಜು ಪ್ರಕ್ರಿಯೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಚುರುಕುಗೊಳಿಸಿದೆ. ಬೆಂಗಳೂರಿನಲ್ಲಿ ಸುದೀರ್ಘ ಅವಧಿಗೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರ ಆಸ್ತಿ ಹರಾಜು ಹಾಕುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ನಿರ್ಧರಿಸಿತ್ತು. ಅದರ ಅನ್ವಯ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಆಸ್ತಿ ಹರಾಜು ಹಾಕಲು ಮುಂದಾಗಿದೆ. ಆದರೆ, ಇದಕ್ಕೂ ಮುನ್ನವೇ ಹಲವರು ಆಸ್ತಿಗಳ ಆಸ್ತಿ ತೆರಿಗೆ ಪಾವತಿ ಮಾಡುತ್ತಿದ್ದಾರೆ. ಬೆಂಗಳೂರಿನ ಬೊಮ್ಮನಹಳ್ಳಿ ವಲಯದಲ್ಲಿ ಹರಾಜು ಪ್ರಕ್ರಿಯೆಗೂ ಮುನ್ನವೇ 14 ಸುಸ್ತಿದಾರರಿಂದ ಒಟ್ಟು 27,62,525 ರೂಪಾಯಿ ಆಸ್ತಿ ತೆರಿಗೆ ಪಾವತಿ ಆಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಒಳಪಡುವ ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ವಲಯ-2, ಬೊಮ್ಮನಹಳ್ಳಿ ವಲಯದಲ್ಲಿ ದಿನಾಂಕ: 27/02/2026 ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಈ ವಲಯ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿ/ವಸತಿಯೇತರ ವರ್ಗದ ಒಟ್ಟು 50 ಆಸ್ತಿಗಳನ್ನು ಪಟ್ಟಿ ಮಾಡಿ, ನಿಯಮಾನುಸಾರ ಹರಾಜು ಪ್ರಕ್ರಿಯೆ ನಡೆಸಲಾಗುವುದೆಂದು ಪತ್ರಿಕಾ ಪ್ರಕಟಣೆ ಹೊರಡಿಸಲಾಗಿತ್ತು.

ಬೊಮ್ಮನಹಳ್ಳಿ ವ್ಯಾಪ್ತಿಯ ಒಟ್ಟು 50 ಆಸ್ತಿಗಳ ಬೇಬಾಕಿ (ದೀರ್ಘ ಅವಧಿಯ ಆಸ್ತಿ ತೆರಿಗೆ ಬಾಕಿ) ಮೊತ್ತ 1,08,43,444 ರೂಪಾಯಿ ಆಗಿದ್ದು, ಈ ಎಲ್ಲಾ 50 ಆಸ್ತಿಗಳಿಗೆ ಈಗಾಗಲೇ Proclamation order ಗಳನ್ನು ಜಾರಿ ಮಾಡಿದ್ದು, ದಿನಾಂಕ:27/02/2026 ರಂದು ಹರಾಜು ಪ್ರಕ್ರಿಯೆಗೆ ಒಳಪಡಿಸಲು ವ್ಯಾಪಕ ಪ್ರಚಾರ ನೀಡಿ ಹರಾಜು ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದೆ. ಈ ಪೈಕಿ 14 ಬೇ-ಬಾಕಿ ಆಸ್ತಿದಾರರು ಹರಾಜು ಪ್ರಕ್ರಿಯೆಗೂ ಮುನ್ನವೇ ಚಲನ್ ಅಥವಾ ಆನೈನ್ ಮೂಲಕ ಪಾವತಿ ಮಾಡಿರುವುದಾಗಿ ಸಹಾಯಕ ಕಂದಾಯ ಅಧಿಕಾರಿಗಳು ವಿವರ ನೀಡಿದ್ದಾರೆ.
ಅದರಂತೆ 14 ಬೇ-ಬಾಕಿದಾರರಿಂದ ಒಟ್ಟಾರೆ 27,62,525 ರೂಪಾಯಿ ಮೊತ್ತದ ಕಂದಾಯವನ್ನು ಹರಾಜು ಪ್ರಕ್ರಿಯೆಗೂ ಮುನ್ನ ಪಾವತಿ ಮಾಡಿದ್ದು, ಅಂತಹ ಬೇಬಾಕಿದಾರರಿಗೆ ಹರಾಜು ಪ್ರಕ್ರಿಯೆಯಿಂದ ಅವರ 'ಆಸ್ತಿಗಳನ್ನು ಕೈಬಿಟ್ಟಿರುವ ಬಗ್ಗೆ ನಿಯಮಾನುಸಾರ ಹಿಂಬರಹ ಜಾರಿ ಮಾಡಲು ಸಂಬಂಧಪಟ್ಟ ಸಹಾಯಕ ಕಂದಾಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಆಯುಕ್ತ ಕೆ.ಎನ್ ರಮೇಶ್ ಅವರು ಹೇಳಿದ್ದಾರೆ.
ಶುಕ್ರವಾರ ಮಧ್ಯಾಹ್ನ 1. 30 ಗಂಟೆಯವರೆಗೆ ಇನ್ನುಳಿದ 36 ಬೇ-ಬಾಕಿದಾರರು ಇಲ್ಲಿಯವರೆಗೂ ಪಾವತಿಸಿರುವುದಿಲ್ಲ ಮತ್ತು ಈ ಆಸ್ತಿಗಳ ಹರಾಜು ಕರೆಯಲಾಗಿದ್ದು, ಸ್ಥಳದಲ್ಲಿ ಹಾಜರಿದ್ದ ಕೆಲವು ಸಾರ್ವಜನಿಕರು ಠೇವಣಿ ಮೊತ್ತ ಪಾವತಿಸಿ ಬಿಡ್ ಮಾಡಲು ಸಿದ್ಧರಾಗಿರಲಿಲ್ಲ.
ಈ ಹರಾಜು ಪ್ರಕ್ರಿಯೆಯನ್ನು ಮುಂದುವರಿಸಲಾಗಿ ಬೇರೇ ಯಾವುದೇ ಸಾರ್ವಜನಿಕರು ಹರಾಜು ಈ ಪ್ರಕ್ರಿಯೆಯಲ್ಲಿ ಭಾಗವಹಿಸಿ ಬಿಡ್ ಮಾಡಲು ಮುಂದೆ ಬಾರದುದರಿಂದ ಉಳಿದ 36 ಬೇ-ಬಾಕಿದಾರರ ಆಸ್ತಿಗಳನ್ನು ಮುಂದಿನ ದಿನಗಳಲ್ಲಿ ಮರು ಹರಾಜು ಪ್ರಕ್ರಿಯೆಗೆ ಒಳಪಡಿಸಲು ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ಆಯುಕ್ತರಾದ ಕೆ.ಎನ್ ರಮೇಶ್ ಅವರು ತಿಳಿಸಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications