Bengaluru Property: ಬೆಂಗಳೂರಿನ ಈ ಭಾಗದಲ್ಲಿ ಭೂಮಿಗೆ ಬಂಗಾರದ ಬೆಲೆ, ಬಾಡಿಗೆಯೂ ಏಕಾಏಕಿ ಹೆಚ್ಚಳ!
engaluru Property: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಭೂಮಿ ಬೆಲೆ ಹೆಚ್ಚಳವಾಗುತ್ತಿದೆ. ದೆಹಲಿ ಹಾಗೂ ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳ ಜನ ಬೆಂಗಳೂರಿಗೆ ಬಂದು ಶಾಶ್ವತವಾಗಿ ನೆಲೆಸುವ ಪ್ಲ್ಯಾನ್ ಮಾಡಿಕೊಳ್ಳುತ್ತಿರುವುದು ಭೂಮಿ ಬೆಲೆ ಇನ್ನಷ್ಟು ಹೆಚ್ಚಳವಾಗು ಸಾಧ್ಯತೆ ಇದೆ. ಇದರ ನಡುವೆ ಭಾರತದಿಂದ ಅಮೇರಿಕಾಗೆ ಹೋಗಿ ಈಗ ಹಿಂದಿರುಗುತ್ತಿರುವವರು (Non-Resident Indian) ಬೆಂಗಳೂರಿನ ಪ್ರಮುಖ ಪ್ರದೇಶದಲ್ಲಿ ಭೂಮಿ ಮತ್ತು ಪ್ರಾಪರ್ಟಿ ಖರೀದಿ ಮಾಡುವುದಕ್ಕೆ ಮುಂದಾಗುತ್ತಿದ್ದಾರೆ. ಈ ಕಾರಣಕ್ಕೆ ಬೆಂಗಳೂರಿನ ಪ್ರಮುಖ ಪ್ರದೇಶದಲ್ಲಿ ಭೂಮಿ ಬೆಲೆ ಹೆಚ್ಚಳವಾಗುತ್ತಿದೆ.
ಬೆಂಗಳೂರು ಮಹಾನಗರದ ಕೆಲವು ಪ್ರದೇಶಗಳಲ್ಲಿ ಭೂಮಿಗೆ ಬಂಗಾರದ ಬೆಲೆ ಇದೆ. ಇದೀಗ ಅಮೇರಿಕಾದಲ್ಲಿ ಇರುವ ಭಾರತೀಯರು ಉದ್ಯೋಗ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಹೀಗಾಗಿ, ಬೆಂಗಳೂರಿನ ರಿಯಲ್ ಎಸ್ಟೇಟ್ಮೇಲೆ ಹೂಡಿಕೆ ಮಾಡುವುದಕ್ಕೆ ಎನ್ಆರ್ಐಗಳು ಮುಂದಾಗಿದ್ದಾರೆ. ಬೆಂಗಳೂರು ನಗರ ಪ್ರದೇಶದಲ್ಲಿ ಭೂಮಿ / ಪ್ರಾಪರ್ಟಿ ಖರೀದಿ ಮಾಡುವುದರಿಂದ ದೀರ್ಘಕಾಲದಲ್ಲಿ ಲಾಭ ತರಲಿದೆ ಎಂದು ಅಂದಾಜಿಸಲಾಗಿದೆ. ಈ ಭಾಗದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವೂ ಇರುವುದು ಸಹಜವಾಗಿಯೇ ಭೂಮಿ ಬೆಲೆ ಹೆಚ್ಚಳಕ್ಕೆ ಪೂರಕವಾಗಿದೆ.

ಬೆಂಗಳೂರು ಉತ್ತರ ಭಾಗದಲ್ಲಿ ಬೇಡಿಕೆ
ಇನ್ನು ಬೆಂಗಳೂರಿನ ಉತ್ತರ ಭಾಗದಲ್ಲಿ ರಿಯಲ್ ಎಸ್ಟೇಟ್ ವಹಿವಾಟು ಹೆಚ್ಚು ನಡೆಯುತ್ತಿದೆ. ಈ ಭಾಗದಲ್ಲಿ ಭೂಮಿ ಬೆಲೆ ವಿವಿಧ ಪ್ರದೇಶಗಳಿಗೆ ಹೋಲಿಕೆ ಮಾಡಿದರೆ ಮಧ್ಯಮ ಹಂತದಲ್ಲಿದ್ದು ಬೇಡಿಕೆ ಹೆಚ್ಚಳವಾಗಿದೆ. ಯಲಹಂಕ ಭಾಗದಲ್ಲಿ 3 BHK ಮತ್ತು 2 BHKಗೆ ಬೇಡಿಕೆ ಹೆಚ್ಚಳವಾಗಿದೆ. ವಿಮಾನ ನಿಲ್ದಾಣ ಸಂಪರ್ಕ, ಜಾಗತಿಕ ವ್ಯವಹಾರ ಬೆಳವಣಿಗೆ, ಪ್ರೀಮಿಯಂ ಫ್ಲಾಟ್ಗಳು ಇಲ್ಲಿವೆ. ಈ ಭಾಗದಲ್ಲಿ ಬಾಡಿಗೆ ಮನೆಗಳ ಬೇಡಿಕೆ ಹಾಗೂ ಬಾಡಿಗೆ ಹೆಚ್ಚಾಗುತ್ತಿರುವುದು ಸಹ ಹೂಡಿಕೆದಾರರನ್ನು ಆಕರ್ಷಿಸಿದೆ.
ಆಸ್ತಿ ಮೌಲ್ಯ ಹೆಚ್ಚಳ: ಬೆಂಗಳೂರು ಉತ್ತರ ಭಾಗದಲ್ಲಿ ಆಸ್ತಿಗಳ ಮೌಲ್ಯ ಹೆಚ್ಚಾಗಿದೆ. ಶೇ 28ರಿಂದ 32% ಆಸ್ತಿ ಮೌಲ್ಯ ಬೆಳವಣಿಗೆ ಕಂಡಿದೆ. ಉತ್ತರ ಬೆಂಗಳೂರು ಭಾರತದ ವೇಗವಾಗಿ ಬೆಳೆಯುತ್ತಿರುವ ಹೂಡಿಕೆ ಪರಿಸರ ವ್ಯವಸ್ಥೆ ಹೊಂದಿದೆ. ಈ ವಲಯದಲ್ಲಿ ಹೂಡಿಕೆ ಮಾಡಲು NRIಗಳು ಉತ್ಸುಕರಾಗಿದ್ದಾರೆ ಎಂದು Trade Brains ವರದಿ ಮಾಡಿದೆ. ಡಾಲರ್ನ ಮುಂದೆ ರೂಪಾಯಿ ಮೌಲ್ಯ ಕುಸಿಯುತ್ತಿರುವುದು, ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಜಾರಿ ಮಾಡುತ್ತಿರುವ ಕೆಲವೊಂದು ಪ್ರಮುಖ ಬದಲಾವಣೆಗಳು ಎನ್ಆರ್ಐಗಳ ಮೇಲೆ ಪ್ರಭಾವ ಬೀರುತ್ತಿದೆ.
ಉತ್ತರ ಬೆಂಗಳೂರಿನ ಈ ಭಾಗದಲ್ಲಿ ಭೂಮಿ ಬೆಲೆ ಹೆಚ್ಚಳ
ಇನ್ನು ಬೆಂಗಳೂರಿನ ಉತ್ತರ ಭಾಗದ ಐದಕ್ಕೂ ಹೆಚ್ಚು ಪ್ರದೇಶಗಳಲ್ಲಿ ಭೂಮಿ ಮತ್ತು ಪ್ರಾಪರ್ಟಿಗಳ ಬೆಲೆ ಹೆಚ್ಚಳವಾಗಿದೆ. ಹೆಬ್ಬಾಳ, ಜಕ್ಕೂರು, ದೇವನಹಳ್ಳಿ, ಯಲಹಂಕ ಹಾಗೂ ಥಣಿಸಂದ್ರ ಪ್ರದೇಶಗಳಲ್ಲಿ ರಿಯಲ್ ಎಸ್ಟೇಟ್ಗೆ ಬೂಸ್ಟ್ ಸಿಕ್ಕಿದೆ. ಈ ಪ್ರದೇಶಗಳಲ್ಲಿ ಬಾಡಿಗೆ ಬೆಲೆಯು ಶೇ 3 ರಿಂದ 5% ರಷ್ಟು ಏರಿಕೆ ಕಂಡಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications