Bengaluru Property: ಆಂಧ್ರ ಪ್ರದೇಶ ಸರ್ಕಾರ ಮಾದರಿಗೆ ಮುಂದಾದ ಕರ್ನಾಟಕ ಸರ್ಕಾರ!
Bengaluru Property: ಬೆಂಗಳೂರು ಅಭಿವೃದ್ಧಿಯ ವೇಗದಲ್ಲಿದೆ. ಬೆಂಗಳೂರಿಗೆ ಹೈದರಾಬಾದ್, ವಿಶಾಖಪಟ್ಟಣಂ, ಚೆನ್ನೈ, ಮುಂಬೈ, ಪುಣೆ ಹಾಗೂ ದೆಹಲಿ ಸೇರಿದಂತೆ ವಿವಿಧ ಪ್ರಮುಖ ನಗರಗಳು ಬೆಂಗಳೂರಿಗೆ ಪೈಪೋಟಿ ನೀಡುತ್ತಿವೆ. ಅದರಲ್ಲೂ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಪೈಪೋಟಿ ನೀಡುತ್ತಿರುವುದರಲ್ಲಿ ಹಾಗೂ ಬೆಂಗಳೂರಿನ ಹೂಡಿಕೆಗಳನ್ನು ಆಕರ್ಷಿಸುವ ನಗರಗಳಲ್ಲಿ ಆಂಧ್ರಪ್ರದೇಶದ ವಿಶಾಖಪಟ್ಟಣಂ ಮುಂಚೂಣಿಯಲ್ಲಿದೆ. ಇದೀಗ ಈ ವಿವಿಧ ನಗರಗಳಿಗೆ ಪೈಪೋಟಿ ನೀಡಲು ಆಸ್ತಿ ಬೆಲೆ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಅದರ ವಿವರ ನೋಡೋಣ.
ಬೆಂಗಳೂರು ನಗರವು ವೇಗವಾಗಿ ಬೆಳೆಯುತ್ತಿದೆ. ಆದರೆ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ವಿವಿಧ ನಗರಗಳ ಪೈಪೋಟಿಯೂ ಹೆಚ್ಚಳವಾಗುತ್ತಿದೆ. ಇದಕ್ಕೆ ಕರ್ನಾಟಕ ಸರ್ಕಾರವು ಇದೀಗ ಮಾಸ್ಟರ್ ಪ್ಲ್ಯಾನ್ವೊಂದನ್ನು ಮಾಡಿಕೊಂಡಿದೆ. ಮೊದಲ ಮೂರರಿಂದ ಐದು ವರ್ಷಗಳವರೆಗೆ ಬಂಡವಾಳ ಮತ್ತು ನಿರ್ವಹಣಾ ವೆಚ್ಚ ಎರಡನ್ನೂ ಕಡಿಮೆ ಮಾಡುವ ಮೂಲಕ, ಹೊಸ ತಂತ್ರಜ್ಞಾನ ಕ್ಲಸ್ಟರ್ಗಳ ರಚನೆಯನ್ನು ವೇಗಗೊಳಿಸಲು ರಾಜ್ಯ ಸರ್ಕಾರವು ಮುಂದಾಗಿದೆ.

ಕರ್ನಾಟಕವು ತನ್ನ ಕರಡು ಐಟಿ ನೀತಿ 2025-30 ರ ಅಡಿಯಲ್ಲಿ ಬೆಂಗಳೂರಿನಿಂದ ಹೊರಗೆ ತಂತ್ರಜ್ಞಾನ ಹೂಡಿಕೆಗಳನ್ನು ಸ್ಥಳಾಂತರಿಸಲು ವ್ಯಾಪಕವಾದ ವೆಚ್ಚ-ಕಡಿತ ಪ್ರೋತ್ಸಾಹಕಗಳನ್ನು ಪ್ರಸ್ತಾಪಿಸಿದೆ. ಕಂಪನಿಗಳು ಟೈಯರ್ II ಮತ್ತು ಟೈಯರ್ III ನಗರಗಳಲ್ಲಿ (ಎರಡನೇ ಹಾಗೂ ಮೂರನೇ ಹಂತದ ನಗರಗಳಲ್ಲಿ) ಕಾರ್ಯಾಚರಣೆಗಳನ್ನು ಸ್ಥಾಪಿಸಿದರೆ ಬಾಡಿಗೆ, ಆಸ್ತಿ ತೆರಿಗೆ, ವಿದ್ಯುತ್ ಸುಂಕ ಮತ್ತು ಟೆಲಿಕಾಂ ವೆಚ್ಚಗಳ ಮರುಪಾವತಿಯನ್ನು ನೀಡಲಾಗುತ್ತದೆ ಎಂದು ಹೇಳಲಾಗಿದೆ. ಇದು ಹೆಚ್ಚು ಕಡಿಮೆ ಆಂಧ್ರಪ್ರದೇಶ ಬಳಸುತ್ತಿರುವ ಟ್ರಿಕ್ಸ್ಗಳಲ್ಲಿ ಒಂದಾಗಿದೆ. ಆಂಧ್ರಪ್ರದೇಶ ಸರ್ಕಾರವು ಉದ್ಯಮ ಮತ್ತು ಹೂಡಿಕೆಯನ್ನು ಆ ರಾಜ್ಯದಲ್ಲಿ ಆಕರ್ಷಿಸುವ ಉದ್ದೇಶದಿಂದ ಈ ರೀತಿಯ ಯೋಜನೆಗಳನ್ನು ರೂಪಿಸುತ್ತಿದೆ.
ಇನ್ನು ಈ ಹೊಸ ಕರಡಿನ ಪ್ರಕಾರ, ಬೆಂಗಳೂರಿನ ಹೊರಗಿನ ಜಿಲ್ಲೆಗಳಲ್ಲಿ ಸ್ಥಾಪಿಸಲಾದ ಐಟಿ ಮತ್ತು ಐಟಿ ಸೇವಾ ಘಟಕಗಳು 2 ಕೋಟಿ ರೂ.ಗಳವರೆಗೆ 50 ಪ್ರತಿಶತ ಬಾಡಿಗೆ ಮರುಪಾವತಿ, ಮೂರು ವರ್ಷಗಳವರೆಗೆ 30 ಪ್ರತಿಶತ ಆಸ್ತಿ ತೆರಿಗೆ ಮರುಪಾವತಿ ಮತ್ತು ಐದು ವರ್ಷಗಳವರೆಗೆ 100 ಪ್ರತಿಶತ ವಿದ್ಯುತ್ ಸುಂಕ ಮನ್ನಾಕ್ಕೆ ಅರ್ಹವಾಗಿರಲಿವೆ.
ರಾಜ್ಯವು ಟೆಲಿಕಾಂ ಮತ್ತು ಇಂಟರ್ನೆಟ್ ಶುಲ್ಕಗಳಲ್ಲಿ 25 ಪ್ರತಿಶತವನ್ನು ರೂ. 12 ಲಕ್ಷದವರೆಗೆ ಮರುಪಾವತಿ ಮಾಡುತ್ತದೆ. ಇದು ಸಣ್ಣ ಮತ್ತು ಮಧ್ಯಮ ಗಾತ್ರದ ಸಂಸ್ಥೆಗಳಿಗೆ ಕಾರ್ಯಾಚರಣೆಗೆ ಅನುಕೂಲವಾಗುವ ಮಾದರಿಯಲ್ಲಿ ಇದೆ. ಕರ್ನಾಟಕದ ಹೆಚ್ಚಿನ ಐಟಿ ಸಂಸ್ಥೆಗಳು ಬೆಂಗಳೂರಿನಲ್ಲಿ ಕೇಂದ್ರೀಕೃತವಾಗಿದ್ದು, ನಗರವು ರಾಜ್ಯ ಮತ್ತು ದೇಶಕ್ಕೆ ಗಮನಾರ್ಹ ಆದಾಯವನ್ನು ಗಳಿಸುತ್ತಿದ್ದರೂ, ಅದರ ಮೂಲಸೌಕರ್ಯವು ಹೆಚ್ಚುತ್ತಿರುವ ಬೇಡಿಕೆಗೆ ಅನುಗುಣವಾಗಿ ಕಾರ್ಯನಿರ್ವಹಿಸಲು ಕಷ್ಟವಾಗುತ್ತಿದೆ. ಅಲ್ಲದೇ ಬೆಂಗಳೂರಿನ ಮೇಲೆ ಒತ್ತಡ ಕಡಿಮೆ ಮಾಡುವುದು ಹಾಗೂ ಇನ್ನುಳಿದ ನಗರಗಳ ಅಭಿವೃದ್ಧಿಯ ದೃಷ್ಟಿಯಿಂದಲೂ ಈ ರೀತಿಯ ಯೋಜನೆಗಳನ್ನು ಕರ್ನಾಟಕ ಸರ್ಕಾರವು ರೂಪಿಸಿಕೊಳ್ಳುತ್ತಿದೆ ಎಂದು ಹೇಳಲಾಗಿದೆ.
-
Swachh Survey: ಬೆಂಗಳೂರು ಸ್ವಚ್ಛ ಸರ್ವೇಕ್ಷಣ 2025-26: 38 ಉದ್ಯಾನವನ, 11 ಮೈದಾನಗಳ ಸ್ವಚ್ಛತೆ: ರಾಜೇಂದ್ರ ಚೋಳನ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications