Bengaluru Property Prices: ಶೀಘ್ರದಲ್ಲೇ ಹೆಚ್ಚಾಗಲಿದೆ ಬೆಂಗಳೂರಿನ ಆಸ್ತಿ ಬೆಲೆಗಳು: ಅಂಕಿಅಂಶ, ಕಾರಣ, ವಿವರ ತಿಳಿಯಿರಿ
ಬೆಂಗಳೂರು, ಸೆಪ್ಟೆಂಬರ್ 21: ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ಕರ್ನಾಟಕ ಸರ್ಕಾರವು ಆಸ್ತಿಗಳ ಮಾರ್ಗಸೂಚಿ ದರದಲ್ಲಿ ( Guidance value ) ಹೆಚ್ಚಳವನ್ನು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರಾಪರ್ಟಿ ದರಗಳು ಶೀಘ್ರದಲ್ಲೇ ಹೆಚ್ಚಾಗಲಿವೆ. 'ಮಾರ್ಗಸೂಚಿ ದರ' ಎಂಬುದು ಸ್ಥಳ ಮತ್ತು ಆಸ್ತಿ ಪ್ರಕಾರವನ್ನು ಅವಲಂಬಿಸಿ ಸರ್ಕಾರವು ನಿಗದಿಪಡಿಸಿದ ಕನಿಷ್ಠ ಮಾರಾಟ ಬೆಲೆಯಾಗಿದೆ.
ಪರಿಷ್ಕೃತ ಮಾರ್ಗಸೂಚಿ ದರ ಸರಾಸರಿ ಶೇಕಡಾ 25 ರಿಂದ 30 ರಷ್ಟು ಹೆಚ್ಚಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ನೋಂದಣಿ ಇಲಾಖೆಯು ಕಾನೂನಿನ ಪ್ರಕಾರ, ಪ್ರತಿ ವರ್ಷ ಮಾರ್ಗಸೂಚಿ ದರವನ್ನು ಪರಿಷ್ಕರಿಸಬೇಕು ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಆದರೆ, ಕಳೆದ ಐದು ವರ್ಷಗಳಿಂದ ಮಾರ್ಗಸೂಚಿ ದರವನ್ನು ಪರಿಷ್ಕರಿಸಿಲ್ಲ. ಇದು ಕಪ್ಪುಹಣದ ವಹಿವಾಟಿಗೂ ಕಾರಣವಾಗುತ್ತದೆ. ಮಾರ್ಗದರ್ಶಿ ಮೌಲ್ಯವನ್ನು ಪರಿಷ್ಕರಿಸದಿರುವುದು ಕೂಡ ಪರೋಕ್ಷವಾಗಿ ಕಪ್ಪುಹಣದ ವಹಿವಾಟಿಗೆ ಅವಕಾಶ ಮಾಡಿಕೊಟ್ಟಿದೆ. ಹಾಗಾಗಿ ಅಕ್ಟೋಬರ್ 1ರಿಂದ ಹೊಸ ಮಾರ್ಗಸೂಚಿ ಮೌಲ್ಯ ಜಾರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಮಾರ್ಗಸೂಚಿ ಮೌಲ್ಯದ ಪರಿಷ್ಕರಣೆ ಕುರಿತು ವಿವರಿಸಿದ ಸಚಿವರು, ಮಾರುಕಟ್ಟೆ ದರ ಮತ್ತು ಮಾರ್ಗಸೂಚಿ ದರವು ಸಮಾನವಾಗಿರುವ ಪ್ರದೇಶಗಳಲ್ಲಿ ಮಾರ್ಗಸೂಚಿ ಮೌಲ್ಯವನ್ನು ಶೇಕಡಾ 10 ರಷ್ಟು ಹೆಚ್ಚಿಸಲಾಗಿದೆ. ಮಾರುಕಟ್ಟೆ ದರವು ಮಾರ್ಗಸೂಚಿ ಮೌಲ್ಯಕ್ಕಿಂತ 200 ಪಟ್ಟು ಹೆಚ್ಚಿರುವ ಪ್ರದೇಶಗಳಲ್ಲಿ, ಪರಿಷ್ಕೃತ ದರವನ್ನು ಶೇ.20 ರಿಂದ ಶೇ.25 ರಷ್ಟು ಹೆಚ್ಚಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪ್ರದೇಶದಲ್ಲಿನ ಮಾರುಕಟ್ಟೆ ದರವು ಮಾರ್ಗಸೂಚಿ ಮೌಲ್ಯಕ್ಕಿಂತ 500 ಪಟ್ಟು ಹೆಚ್ಚಾಗಿದೆ. 'ರಾಷ್ಟ್ರೀಯ ಹೆದ್ದಾರಿಯಲ್ಲಿನ ಜಮೀನಿಗೆ ಮಾರ್ಗಸೂಚಿ ಮೌಲ್ಯ 5ರಿಂದ 10 ಲಕ್ಷ ಇದ್ದರೆ, ಮಾರುಕಟ್ಟೆ ಬೆಲೆ 10 ಕೋಟಿ ರೂ.ಗೂ ಅಧಿಕವಾಗಿದೆ. ಅಂತಹ ಪ್ರದೇಶಗಳಲ್ಲಿ ಹೊಸ ಮಾರ್ಗದರ್ಶಿ ಮೌಲ್ಯವನ್ನು ಶೇ 50 ರಷ್ಟು ಹೆಚ್ಚಿಸಲಾಗಿದೆ' ಎಂದು ಅವರು ತಿಳಿಸಿದ್ದಾರೆ.

ಅಲ್ಲದೆ, ಮಾರ್ಗಸೂಚಿ ಮೌಲ್ಯವು ಮಾರುಕಟ್ಟೆ ದರಕ್ಕಿಂತ ಹೆಚ್ಚಿದ್ದರೆ, ಅಂತಹ ಪ್ರದೇಶಗಳಲ್ಲಿ ಮಾರ್ಗದರ್ಶಿ ಮೌಲ್ಯವನ್ನು ಕಡಿಮೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಮಾರ್ಗಸೂಚಿ ಮೌಲ್ಯವನ್ನು ಪ್ರತಿ ಪ್ರದೇಶಕ್ಕೆ 0 ರಿಂದ 50 ಪ್ರತಿಶತಕ್ಕೆ ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಅಕ್ಟೋಬರ್ 1 ರಂದು, ಮೊದಲ ಹಂತವಾಗಿ, ಬೆಂಗಳೂರಿನಲ್ಲಿ ಪರಿಷ್ಕೃತ ದರವನ್ನು ಜಾರಿಗೆ ತರಲಾಗುವುದು. ಪ್ರತಿ ಜಿಲ್ಲೆಯಲ್ಲಿ ಚರ್ಚಿಸಿ ಹಂತಹಂತವಾಗಿ ಹೊಸ ಮಾರ್ಗಸೂಚಿ ಮೌಲ್ಯವನ್ನು ಜಾರಿಗೊಳಿಸಲಾಗುವುದು ಎಂದು ಕೃಷ್ಣಾ ಬೈರೇಗೌಡ ಹೇಳಿದರು.

ಮಾರ್ಗಸೂಚಿ ಮೌಲ್ಯ ಮತ್ತು ಮಾರುಕಟ್ಟೆ ಬೆಲೆಯ ನಡುವೆ ಅಜಗಜಾಂತರ ವ್ಯತ್ಯಾಸ ಇರಬಾರದು ಎಂಬ ಕಾನೂನಿದೆ ಎಂದು ತಿಳಿಸಿದ ಸಚಿವರು, ಈ ನ್ಯೂನತೆಯನ್ನು ಸರಿಪಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಮಾರ್ಗಸೂಚಿ ಮೌಲ್ಯ ಪರಿಷ್ಕರಣೆ ಬಗ್ಗೆ ಯಾರಾದರೂ ಆಕ್ಷೇಪಣೆಗಳನ್ನು ಹೊಂದಿದ್ದರೆ, ಅದನ್ನು ಸಹ ಸಲ್ಲಿಸಬಹುದು. ಅಧಿಕಾರಿಗಳು ಅದನ್ನು ಗಮನದಲ್ಲಿಟ್ಟುಕೊಂಡು ಹೊಸ ಮಾರ್ಗದರ್ಶಿ ಮೌಲ್ಯವನ್ನು ಜಾರಿಗೆ ತರುತ್ತಾರೆ ಎಂದು ತಿಳಿಸಿದ್ದಾರೆ.
ಇತ್ತೀಚಿನ ವರದಿಯ ಪ್ರಕಾರ, ಬೆಂಗಳೂರಿನ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಯೋಜನೆಯು ವರ್ಷದ ಮಧ್ಯದ ವೇಳೆಗೆ ಪೂರ್ಣವಾಗಿ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ. ಮುಂದಿನ ಎರಡು ವರ್ಷಗಳಲ್ಲಿ ವೈಟ್ಫೀಲ್ಡ್ನಲ್ಲಿ ಕಚೇರಿ ಸ್ಥಳಗಳ ಬಾಡಿಗೆಗಳು ಸುಮಾರು 8 ರಿಂದ 10 ಪ್ರತಿ ಶತದಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಉತ್ತರ ಬೆಂಗಳೂರಿನ ಪಾಪರ್ಟಿ ದರಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru Rent: ಬೆಂಗಳೂರು ಬಾಡಿಗೆ, ಅಡ್ವಾನ್ಸ್ ದುಬಾರಿ: ದೆಹಲಿ, ಮುಂಬೈನಲ್ಲಿ ಇಷ್ಟಿಲ್ಲ, ನಾರ್ಥಿ ಯುವತಿ ವೈರಲ್ ವಿಡಿಯೋ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Property Sale: ಬೆಂಗಳೂರು ದಕ್ಷಿಣ ನಗರ ಪಾಲಿಕೆ: 42 ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಆಸ್ತಿಗಳ ಹರಾಜು












Click it and Unblock the Notifications