Bengaluru Property: ಬೆಂಗಳೂರಲ್ಲಿ ಆಸ್ತಿ ಮೌಲ್ಯದ ದುಪ್ಪಟ್ಟು: ಈ ಯೋಜನೆ ಭೂಸ್ವಾಧೀನ ಕಷ್ಟ: ಡಿಸಿಎಂ ಡಿಕೆಶಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಹೆಚ್ಚಾಗುತ್ತಿದ್ದು. ಇದೀಗ ಬೆಂಗಳೂರಿನ ವಿವಿಧ ಭಾಗದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಕಂಟ್ರೋಲ್ ಮಾಡುವುದಕ್ಕೆ ಕರ್ನಾಟಕ ಸರ್ಕಾರವು ಮಹತ್ವದ ಯೋಜನೆಯೊಂದನ್ನು ರೂಪಿಸಿಕೊಂಡಿದೆ. ಬೆಂಗಳೂರಿನ ಟ್ರಾಫಿಕ್ ಜಾಮ್ ಕಂಟ್ರೋಲ್ ಮಾಡುವುದಕ್ಕೆ ಅಧ್ಯಯನ ನಡೆಸಿ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಹೇಳಲಾಗಿದ್ದು, ಟನಲ್ ರಸ್ತೆ ಉತ್ತಮ ಆಯ್ಕೆಯಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಬೆಂಗಳೂರು ನಗರ ಪ್ರದೇಶದಲ್ಲಿ ರಸ್ತೆಗಳ ಅಗಲೀಕರಣದ ಅವಶ್ಯಕತೆ ಇದೆ. ಆದರೆ ಯಾವುದೇ ಕಟ್ಟಡ ಕೆಡವಲು ಆಗುವುದಿಲ್ಲ. ಕರ್ನಾಟಕ 2013ರ ಕಾಯ್ದೆ ಅನುಸಾರ ಆಸ್ತಿ ಮೌಲ್ಯದ ದುಪ್ಪಟ್ಟು ಪರಿಹಾರ ನೀಡಬೇಕಾಗುತ್ತದೆ. ಈಗ ಬೆಂಗಳೂರಿನ ಆಸ್ತಿ ಮೌಲ್ಯ ಹೆಚ್ಚಾಗಿದೆ. ಹೀಗಾಗಿ ಪರ್ಯಾಯ ಆಯ್ಕೆಗಳನ್ನು ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಅಪಾರ್ಟ್ಮೆಂಟ್ ಅಸೋಸಿಯೇಷನ್ಗಳೊಂದಿಗೆ ಈಚೆಗೆ ಸಭೆ ನಡೆಸಿದ್ದು ಸಭೆಯ ನಂತರ ಕೆಲವೊಂದು ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರಿನ ಸಮಸ್ಯೆ ನಿವಾರಿಸಿ, ನಗರದ ಸ್ವರೂಪ ಬದಲಿಸಲು ಹಾಗೂ ಅನೇಕ ಯೋಜನೆ ಕೈಗೊಂಡಿದ್ದೇವೆ. ಬಹಳ ಅಧ್ಯಯನ ಮಾಡಿದ ನಂತರ 2 ಟನಲ್ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಬರೋಬ್ಬರಿ 130 ಕಿ.ಮೀ ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಯನ್ನು ಬರೋಬ್ಬರಿ 26 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸುತ್ತಿದ್ದೇವೆ. ಯಾರು ಏನೇ ಟೀಕೆ ಮಾಡಿದರೂ ನಾವು ಈ ಯೋಜನೆ ಮಾಡಿಯೇ ಮಾಡುತ್ತೇವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರು ಈ ಯೋಜನೆ ಮುಂದುವರಿಸುವಂತೆ ನನಗೆ ಹೇಳಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಟನಲ್ ರೋಡ್ ಯೋಜನೆಯ ಬಗ್ಗೆ ಮಾತನಾಡಿದ್ದು, ಈ ಯೋಜನೆಗೆ ರಾಜ್ಯ ಬಿಜೆಪಿ ನಾಯಕರು ವಿರೋಧಿಸಿರುವುದನ್ನು ಪರೋಕ್ಷವಾಗಿ ಉಲ್ಲೇಖ ಮಾಡಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಅವರು ಬೆಂಗಳೂರಿಗೆ ಯಾಕೆ ಟನಲ್ ರೋಡ್ ಯೋಜನೆ ಬೇಡ ಎಂದು ಹೇಳಿದ್ದರು. ಇದೀಗ ಟನಲ್ ರೋಡ್ ಯೋಜನೆಯನ್ನು ಜಾರಿ ಮಾಡಿಯೇ ಸಿದ್ಧ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಪುನರುಚ್ಚರಿಸಿದ್ದಾರೆ.
ಬೆಂಗಳೂರಲ್ಲಿ ಭೂಸ್ವಾಧೀನ ಕಷ್ಟ
ಬೆಂಗಳೂರಿನಲ್ಲಿ ಈಗಾಗಲೇ ಭೂಮಿ / ಆಸ್ತಿ ಬೆಲೆಯು ಹೆಚ್ಚಳವಾಗಿದೆ. ಹೀಗಾಗಿ, ಪರ್ಯಾಯ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಕಂಟ್ರೋಲ್ ಮಾಡುವ ಉದ್ದೇಶದಿಂದ ಸಾಕಷ್ಟು ಅಧ್ಯಯನ ನಡೆಸಿದ ನಂತರ ಟನಲ್ ರಸ್ತೆ ಉತ್ತಮ ಆಯ್ಕೆಯಾಗಿದೆ ಎಂದು ನಾವು ಪರಿಗಣಿಸಿದ್ದೇವೆ. ರಸ್ತೆ ಅಗಲೀಕರಣಕ್ಕೆ ಇಂದಿನ ತುರ್ತು ಅವಶ್ಯಕವಾಗಿದೆ. ಆದರೆ ನಾವು ಯಾವುದೇ ಕಟ್ಟಡ ಕೆಡವಲು ಆಗುವುದಿಲ್ಲ. 2013ರ ಕಾಯ್ದೆ ಅನ್ವಯ ಆಸ್ತಿ ಮೌಲ್ಯದ ದುಪ್ಪಟ್ಟು ಪರಿಹಾರ ನೀಡಬೇಕು. ಈಗ ಬೆಂಗಳೂರಿನ ಆಸ್ತಿ ಮೌಲ್ಯ ಹೆಚ್ಚಾಗಿದೆ ಎಂದಿದ್ದಾರೆ.
ಒಟ್ಟಾರೆ ಭೂಸ್ವಾಧೀನ ಪ್ರಕ್ರಿಯೆ ಕಷ್ಟವಾಗಿರುವುದರಿಂದ ಇದಕ್ಕೆ ಪರ್ಯಾಯ ಮಾರ್ಗ ಕಂಡುಕೊಂಡಿರುವುದಾಗಿ ಹೇಳಿದ್ದಾರೆ.
-
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications