Get Updates
Get notified of breaking news, exclusive insights, and must-see stories!

Bengaluru Propert: ಬಿ - ಖಾತಾದಿಂದ ಎ - ಖಾತಾ ಪರಿವರ್ತನೆ ಈಗ ಇನ್ನಷ್ಟು ಸುಲಭ, ಹೊಸ ಬದಲಾವಣೆ ಏನು ?

Bengaluru Propert: ಬೆಂಗಳೂರಿನ ಆಸ್ತಿದಾರರಿಗೆ ಹಾಗೂ ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಮಾಡಿಕೊಳ್ಳಬೇಕು ಎಂದು ಕಾಯುತ್ತಿರುವವರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದೆ. ರಾಜ್ಯ ಕಂದಾಯ ಇಲಾಖೆಯು ಆಸ್ತಿದಾರರಿಗೆ ಗುಡ್‌ನ್ಯೂಸ್ ಕೊಟ್ಟಿದೆ. ಈಚೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹೊಸ ಆದೇಶವೊಂದನ್ನು ಮಾಡಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮಿತಿಯಲ್ಲಿ ಪ್ರಕಟವಾದ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಬರುವ ಪ್ರದೇಶಗಳಲ್ಲಿ ಪ್ರತ್ಯೇಕ ಭೂ ಪರಿವರ್ತನೆಯ ಅಗತ್ಯವನ್ನು ತೆಗೆದುಹಾಕಿದ್ದಾರೆ. ಇದು ಬಿ ಖಾತಾದಿಂದ ಎ ಖಾತಾ ಪರಿವರ್ತನೆಯಲ್ಲೂ ಭಾರೀ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದೆ.

ಡೆವಲಪರ್‌ಗಳಾದ ಭೂಮಾಲೀಕರು ಈಗ ಮಾಸ್ಟರ್ ಪ್ಲಾನ್‌ಗೆ ಅನುಗುಣವಾಗಿ ಯೋಜನೆ ಅನುಮೋದನೆಗೆ ನೇರವಾಗಿ ಅರ್ಜಿ ಸಲ್ಲಿಸಬಹುದು ಮತ್ತು ಯೋಜನಾ ಅನುಮೋದನೆ ಪ್ರಕ್ರಿಯೆಯ ಭಾಗವಾಗಿ ಭೂ ಪರಿವರ್ತನೆಯನ್ನು ಸ್ವಯಂಚಾಲಿತವಾಗಿ ಮಾಡಲಾಗುತ್ತದೆ. ಮಾಸ್ಟರ್ ಪ್ಲಾನ್ ನಿಬಂಧನೆಗಳ ಅಡಿಯಲ್ಲಿ ಅಸ್ತಿತ್ವದಲ್ಲಿರುವ ವೈಯಕ್ತಿಕ ಆಸ್ತಿ ಮಾಲೀಕರಿಗೆ ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆಯನ್ನು ಸಹ ಇದೀಗ ಹೊಸ ತಿದ್ದುಪಡಿಯಲ್ಲಿ ಅನುಮತಿ ನೀಡಲಾಗಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಮಾಡಿಕೊಳ್ಳುವುದಕ್ಕೆ ಕಾಯುತ್ತಿರುವ ಲಕ್ಷಾಂತರ ಜನ ಬಿ ಖಾತಾ ಸೈಟ್ ಮಾಲೀಕರಿಗೆ ಗಮನಾರ್ಹ ಪರಿಹಾರವನ್ನು ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.

Bengaluru Property Real Estate Boost Automatic Land Conversion Master Plan Simplified Easy B-Khata to A-Khata

ಇನ್ನು ಆಸ್ತಿಗಳ ಪರಿವರ್ತನೆ ಹಾಗೂ ಬಿ ಖಾತಾದಿಂದ ಎ ಖಾತಾ ಪ್ರಕ್ರಿಯೆಯಲ್ಲಿ ಆಡಳಿತಾತ್ಮಕ ಪ್ರಕ್ರಿಯೆಯನ್ನು ಸುಗಮಗೊಳಿಸಲು ಈ ಬದಲಾವಣೆಯನ್ನು ಮಾಡಲಾಗಿದೆ. ಯೋಜಿತ ಅಭಿವೃದ್ಧಿಯನ್ನು ಉತ್ತೇಜಿಸಲು ಮತ್ತು ವ್ಯವಹಾರ ಸುಲಭ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಮಾಸ್ಟರ್ ಪ್ಲಾನ್ ಪ್ರದೇಶಗಳಲ್ಲಿ ಸ್ವಯಂ-ಪರಿವರ್ತನೆಯನ್ನು ಪರಿಚಯಿಸಿದೆ.

ಈ ಹಿಂದೆ ಡೀಮ್ಡ್ ಪರಿವರ್ತನೆ ಎಂಬ ಪರಿಕಲ್ಪನೆಯ ಹೊರತಾಗಿಯೂ, ಮಾಸ್ಟರ್ ಪ್ಲಾನ್ ವ್ಯಾಪ್ತಿಗೆ ಬರುವ ಭೂಮಿಗಳಿಗೆ ಸಹ ಪ್ರತ್ಯೇಕ ಪರಿವರ್ತನೆ ಮಾಡಿಕೊಳ್ಳುವ ಅವಶ್ಯಕತೆ ಇತ್ತು. ಇದು ವಿಳಂಬವಾಗುತ್ತಿತ್ತು. ಅಲ್ಲದೇ ರಿಯಲ್ ಎಸ್ಟೇಟ್‌ನ ಮೇಲೂ ಪರಿಣಾಮ ಬೀರಿತ್ತು. ಹಳೆಯ ಪ್ರಕ್ರಿಯೆಯಲ್ಲಿ ನಾಲ್ಕರಿಂದ ಆರು ತಿಂಗಳು ಆಗುತ್ತಿತ್ತು. ಹೀಗಾಗಿ, ಇದೀಗ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಬರುವ ಪ್ರದೇಶಗಳಲ್ಲಿ ಪ್ರತ್ಯೇಕ ಭೂ ಪರಿವರ್ತನೆಯ ಅಗತ್ಯವನ್ನು ತೆಗೆದುಹಾಕಲಾಗಿದೆ.

ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಹೇಗೆ ಅನುಕೂಲ

ಇನ್ನು ರಾಜ್ಯ ಸರ್ಕಾರದ ಈ ಹೊಸ ಸುಧಾರಣೆಯಿಂದ ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ಸಹಾಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಕಾನೂನುಬದ್ಧ ಮತ್ತು ಹೆಚ್ಚು ಕೈಗೆಟುಕುವ ಭೂ ಅಭಿವೃದ್ಧಿಯನ್ನು ಸುಗಮಗೊಳಿಸುತ್ತದೆ. ಇದರಿಂದ ಡೆವಲಪರ್‌ಗಳು ಮತ್ತು ಸಾರ್ವಜನಿಕ ಸೈಟ್ ಖರೀದಿದಾರರಿಗೆ ಪ್ರಯೋಜನವಾಗಲಿದೆ. ಸ್ವಯಂ-ಪರಿವರ್ತನೆ ನಿಬಂಧನೆಯು ಬಿ ಖಾತಾ ಆಸ್ತಿಗಳನ್ನು ಎ ಖಾತಾ ಆಗಿ ಪರಿವರ್ತಿಸಲು ಕಾನೂನು ಅವಕಾಶವನ್ನು ಕಲ್ಪಿಸುತ್ತದೆ. ಹಿಂದೆ ಅನಧಿಕೃತ ಸೈಟ್‌ಗಳನ್ನು ಖರೀದಿಸಿದ ಲಕ್ಷಾಂತರ ಆಸ್ತಿ ಮಾಲೀಕರಿಗೆ ಇದರಿಂದ ಸಹಾಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Bengaluru Propert: ಆಸ್ತಿದಾರರಿಗೆ ಅನುಕೂಲ

ಬೆಂಗಳೂರಿನಲ್ಲಿ ಲಕ್ಷಾಂತರ ಬಿ ಖಾತಾ ಆಸ್ತಿಗಳಿವೆ. ಈ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡಿಕೊಳ್ಳುವುದಕ್ಕೆ ರಾಜ್ಯ ಸರ್ಕಾರವು ಅವಕಾಶ ನೀಡಿತ್ತಾದರೂ, ಬಿ ಖಾತಾದಿಂದ ಎ ಖಾತಾ ಪರಿವರ್ತನೆಯಲ್ಲಿ ಕೆಲವೊಂದು ಕಾನೂನು ತೊಡಕುಗಳು ಎದುರಾಗಿದ್ದವು. ಇದೀಗ ರಾಜ್ಯ ಕಾಂಗ್ರೆಸ್‌ ಸರ್ಕಾರವು ನಿಯಮಗಳಲ್ಲಿ ಕೆಲವೊಂದು ಸಡಿಲಿಕೆಯನ್ನು ಮಾಡಿದೆ.

ಖಾತಾ ಆಸ್ತಿಯ ದೃಢೀಕರಣದ ಮುದ್ರೆಯಾಗಿ ಕಾರ್ಯನಿರ್ವಹಿಸುತ್ತದೆ. ಇದು ಕಾನೂನುಬದ್ಧ ಮಾಲೀಕತ್ವವನ್ನು ಸಾಬೀತುಪಡಿಸುತ್ತದೆ ಮತ್ತು ಬ್ಯಾಂಕ್ ಸಾಲಗಳನ್ನು, ವಿಶೇಷವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಂತಹ ಸಾರ್ವಜನಿಕ ಬ್ಯಾಂಕ್‌ಗಳಿಂದಲೂ ಸಾಲ ವಹಿವಾಟಿಗೆ ಅವಕಾಶ ಕಲ್ಪಿಸುತ್ತದೆ. ಮುಖ್ಯವಾಗಿ ಆಸ್ತಿ ಮೌಲ್ಯಗಳನ್ನು ಹೆಚ್ಚಿಸುತ್ತದೆ. ಕಂದಾಯ ಇಲಾಖೆಯು ಇ-ಖಾತಾ ಮತ್ತು ಡಿಜಿಟಲೀಕರಿಸಿದ ಭೂ ದಾಖಲೆಗಳೊಂದಿಗೆ ಸ್ವಯಂ-ಪರಿವರ್ತನೆಯನ್ನು ಸೇರಿಸಲು ಸಹ ಮುಂದಾಗಿದೆ ಎಂದು ಹೇಳಲಾಗಿದೆ. ಹೀಗಾಗಿ ಈ ಎಲ್ಲಾ ಬದಲಾವಣೆಗಳಿಂದ ಆಸ್ತಿದಾರರಿಗೆ ಭಾರೀ ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+