E-Khata: ಬೆಂಗಳೂರಿನಲ್ಲಿ 21% ಕುಸಿತ ಕಂಡ ಆಸ್ತಿ ನೋಂದಣಿ; ಕಾರಣವೇನು?
ಬೆಂಗಳೂರು ಮಹಾನಗರದಲ್ಲಿ ರಿಯಲ್ ಎಸ್ಟೇಟ್ ಇಂದು ದೊಡ್ಡ ಉದ್ಯಮವಾಗಿದೆ. ಪ್ರತಿ ತಿಂಗಳು ಸಾವಿರಾರು ಕೋಟಿ ರೂಪಾಯಿ ಆಸ್ತಿಗಳ ಮಾರಾಟ ವಹಿವಾಟು ನಡೆಯುತ್ತದೆ. ಆಸ್ತಿ ಖರೀದಿಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇ-ಖಾತೆ ಸೇವೆಯನ್ನು ಜಾರಿಗೆ ತಂದಿದೆ. ಆರಂಭದಲ್ಲಿ ಇದರಿಂದ ಒಂದಷ್ಟು ಸಮಸ್ಯೆಗಳಾಗಿದ್ದು, ಆಸ್ತಿ ನೋಂದಣಿಯಲ್ಲಿ ಕುಸಿತ ಕಂಡುಬಂದಿದೆ.
ಅಕ್ಟೋಬರ್ ತಿಂಗಳಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 5667 ಆಸ್ತಿ ನೋಂದಣಿಗಳನ್ನು ಮಾಡಲಾಗಿದೆ ಎಂದು ಅಂಕಿ ಅಂಶಗಳು ತಿಳಿಸಿದೆ. ಸೆಪ್ಟೆಂಬರ್ ತಿಂಗಳಿನಲ್ಲಿ 7167 ಆಸ್ತಿಗಳನ್ನು ನೋಂದಣಿ ಮಾಡಿದ್ದು ಅಕ್ಟೋಬರ್ ತಿಂಗಳಿನಲ್ಲಿ 21% ಕುಸಿತವಾಗಿದೆ ಎಂದು ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ (ಐಜಿಆರ್) ವರದಿ ತಿಳಿಸಿದೆ.

ಇ-ಖಾತೆ ಸೇವೆಯನ್ನು ಜಾರಿಗೆ ತರಲು ಬಿಬಿಎಂಪಿ ಆರಂಭಿಸಿರುವುದೇ ಆಸ್ತಿ ನೋಂದಣಿ ಕಡಿಮೆಯಾಗಲು ಕಾರಣವಾಗಿದೆ. ಇ-ಖಾತಾ ವ್ಯವಸ್ಥೆಯಿಂದ ಖರೀದಿದಾರರಿಗೆ ಆಸ್ತಿ ದಾಖಲೆಗಳನ್ನು ನೋಂದಾಯಿಸುವ ಪ್ರಕ್ರಿಯೆಯಲ್ಲು ಹಲವು ಸವಾಲುಗಳು ಎದುರಾಗುತ್ತಿವೆ.
ಏನಿದು ಇ-ಖಾತೆ?
ಇ-ಖಾತಾ ಸಾಂಪ್ರದಾಯಿಕ ಖಾತೆ ವ್ಯವಸ್ಥೆಯ ಎಲೆಕ್ಟ್ರಾನಿಕ್ ಆವೃತ್ತಿ. ಅಕ್ಟೋಬರ್ ತಿಂಗಳಿನಿಂದ ಬೆಂಗಳೂರಿನಲ್ಲಿ ಬಿಬಿಎಂಪಿ ಜಾರಿಗೆ ತಂದಿದೆ. ಆನ್ಲೈನಲ್ಲಿ ಈ ಡಿಜಿಟಲ್ ದಾಖಲೆಯುವ ಲಭ್ಯವಿರಲಿದ್ದು ಆಸ್ತಿ ಮಾಲೀಕರು ಕಚೇರಿಗಳಿಗೆ ಭೇಟಿ ನೀಡದೆಯೇ ತಮ್ಮ ಖಾತೆಗೆ ಅರ್ಜಿ ಸಲ್ಲಿಸಲು, ಡೌನ್ಲೋಡ್ ಮಾಡಲು ಮತ್ತು ಪರಿಶೀಲನೆ ಮಾಡಲು ಅನುವು ಮಾಡಿಕೊಡುತ್ತದೆ.
2023ರ ಅಕ್ಟೋಬರ್ ತಿಂಗಳಿಗೆ ಹೋಲಿಕೆ ಮಾಡಿದರೆ 2024ರ ಅಕ್ಟೋಬರ್ ನಲ್ಲಿ ಬೆಂಗಳೂರಿನಲ್ಲಿ ಆಸ್ತಿಗಳ ನೋಂದಣಿ ಸಂಖ್ಯೆ 12.8% ರಷ್ಟು ಕಡಿಮೆಯಾಗಿದೆ. ಆಗಸ್ಟ್ 2024ರಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 7,753 ಆಸ್ತಿ ನೋಂದಣಿಗಳಾಗಿದೆ. ಜುಲೈ 2024 ರಲ್ಲಿ 7,333 ಆಸ್ತಿಗಳು ನೋಂದಣಿಯಾಗಿವೆ.
ಆಸ್ತಿ ನೋಂದಣಿ ಕುಸಿಯಲು ಕಾರಣವೇನು?
ಬೆಂಗಳೂರಿನಲ್ಲಿ ಆಸ್ತಿ ನೋಂದಣಿ ಕಡಿಮೆಯಾಗಲು ಹಲವು ಕಾರ್ಯಾಚರಣೆಗಳು ಅಡ್ಡಿಯಾಗಿರುವುದು ಕಾರಣವಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. "ಬಿಬಿಎಂಪಿ ಇ-ಖಾತಾ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಆಸ್ತಿ ನೋಂದಣಿ ಪ್ರಕ್ರಿಯೆಯನ್ನು ಸುಲಭವಾಗಿಸಲು ಈ ವ್ಯವಸ್ಥೆ ಜಾರಿ ಮಾಡಿದ್ದರೂ, ಸರ್ವರ್ ವಿಳಂಬ ಸೇರಿದಂತೆ ಹಲವು ಸಮಸ್ಯೆಗಳು ಉಂಟಾಗಿದ್ದು, ಸಬ್ ರಿಜಿಸ್ಟ್ರಾರ್ ಕಛೇರಿಗಳಲ್ಲಿ ಆಸ್ತಿ ನೋಂದಣಿಗೆ ಸಮಸ್ಯೆಯಾಗಿದೆ" ಎಂದು ಸ್ಕ್ವೇರ್ ಯಾರ್ಡ್ಸ್ನ ಸಂಶೋಧನಾ ಮುಖ್ಯಸ್ಥೆ ರೇಣುಕಾ ಕುಲಕರ್ಣಿ ತಿಳಿಸಿರುವುದಾಗಿ ಹೆಚ್ಟಿ ವರದಿ ಮಾಡಿದೆ.
ಆಸ್ತಿ ನೋಂದಣಿ ಕುಸಿದಿರುವುದು ಕೇವಲ ತಾತ್ಕಾಲಿಕವಾಗಿದೆ. ಇ-ಖಾತಾ ವ್ಯವಸ್ಥೆಯಲ್ಲಿ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿದರೆ, ಮುಂದಿನ ದಿನಗಳಲ್ಲಿ ಆಸ್ತಿ ನೋಂದಣಿ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿದೆ ಎಂದು ರೇಣುಕಾ ಕುಲಕರ್ಣಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
-
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ












Click it and Unblock the Notifications