Bengaluru: ಕೆಆರ್ ಪುರಂನಲ್ಲಿ ಸರಿಯಾಗಿರುವ ಕಾಂಕ್ರಿಟ್ ರಸ್ತೆಗಳಿಗೆ ಮರು ಡಾಂಬರೀಕರಣ, ಸಾರ್ವಜನಿಕರ ಹಣ ಪೋಲು
ಬೆಂಗಳೂರು, ಏಪ್ರಿಲ್, 04: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕಾರಣಿಗಳು ಮತದಾರರನ್ನು ಸೆಳೆಯಲು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಇನ್ನು ಕೆಲವೆಡೆ ರಸ್ತೆಗಳು ಸರಿಯಾಗಿದ್ದರೂ ಕೂಡ ಅಭಿವೃದ್ಧಿ ಹೆಸರಿನಲ್ಲಿ ಮತ್ತೆ ಡಾಂಬರೀಕರಣ ಮಾಡಲು ಹೊರಟಿದ್ದಾರೆ. ಅದು ಜನರ ಹಣದಲ್ಲಿಯೇ ಸರಿಯಾಗಿರುವ ರಸ್ತೆಗಳನ್ನೇ ಒಡೆದು ತಾವೇ ಅಭಿವೃದ್ಧಿ ಮಾಡಿರುವುದಾಗಿ ರಾಜಕಾರಣಿಗಳು ಕೊಚ್ಚಿಕೊಳ್ಳುವುದು ಹಲವು ಕಡೆ ನಡೆಯುತ್ತಿದೆ. ಹೀಗೆ ಅಭಿವೃದ್ಧಿ ಹೆಸರಿನಲ್ಲಿ ಜನರ ಹಣವನ್ನು ಪೋಲು ಮಾಡುತ್ತಿದ್ದಾರೆ. ಇದೀಗ ಇಂತಹದ್ದೇ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ.
ಕೆ.ಆರ್.ಪುರಂನ ಜಗದೀಶ್ ನಗರದಲ್ಲಿನ ಮೂರು ಕಾಂಕ್ರಿಟ್ ರಸ್ತೆಗಳು ಸುಸ್ಥಿತಿಯಲ್ಲಿವೆ. ಆದರೂ ಕೂಡ ಬಿಬಿಎಂಪಿ ಚೆನ್ನಾಗಿರುವ ಈ ಮೂರು ರಸ್ತೆಗಳನ್ನು ಕಿತ್ತು ಮರು ಡಾಂಬರೀಕರಣ ಮಾಡಲು ಹೊರಟಿದ್ದು, ಇದು ಸ್ಥಳೀಯ ನಿವಾಸಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಇಂಜಿನಿಯರ್ಗಳ ವಿರುದ್ಧ ಆಕ್ರೋಶ
ಜಗದೀಶ್ ನಗರದಲ್ಲಿನ ಸರಿಯಾಗಿರುವ 4ನೇ ಮುಖ್ಯ ರಸ್ತೆಯನ್ನು ಬಿಬಿಎಂಪಿ ಒಡೆಯುವ ಮೂಲಕ ನೂತನ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದೆ. ಇದಕ್ಕೆ ಇಲ್ಲಿನ ನಿವಾಸಿಗಳು ಪ್ರತಿಕ್ರಿಯಿಸಿದ್ದು, ಸರಿಯಾಗಿರುವ ರಸ್ತೆಯನ್ನು ಹೊಡೆದು ನಮ್ಮ ಹಣವನ್ನು ಸುಮ್ಮನೆ ಪೋಲು ಮಾಡುತ್ತಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿಗಳು ಮತ್ತು ಇಂಜಿನಿಯರ್ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಬಿಎಂಪಿ ಅಧಿಕಾರಿಗಳಿಗೆ ಕ್ಲಾಸ್
ಬಿಬಿಎಂಪಿಯು ಸುಮಾರು ಒಂದು ಕಿಲೋ ಮೀಟರ್ಗೂ ಹೆಚ್ಚು ವ್ಯಾಪ್ತಿಯ ರಸ್ತೆಯನ್ನು ಒಡೆಯಲು ಯೋಜನೆಯನ್ನು ರೂಪಿಸಿದೆ. ಮತ್ತೊಂದೆಡೆ ಕೆಲವೊಂದು ಪ್ರದೇಶದಲ್ಲಿನ ಹದಗೆಟ್ಟಿರುವ ರಸ್ತೆಗಳನ್ನು ಮಾತ್ರ ದುರಸ್ಥಿಗೊಳಿಸಿಲ್ಲ. ಹದಗೆಟ್ಟಿರುವ ರಸ್ತೆಗಳನ್ನು ಸರಿಪಡಿಸುವಂತೆ ಜನರು ಮನವಿ ಸಲ್ಲಿಸಿದರೂ ಕೂಡ ಅಧಿಕಾರಿಗಳು ಮಾತ್ರ ಕ್ಯಾರೆ ಅಂದಿರಲಿಲ್ಲ. ಆದರೆ ಇದೀಗ ಜಗದೀಶ್ ನಗರದಲ್ಲಿ ಸರಿಯಾಗಿರುವ ರಸ್ತೆಯನ್ನೇ ದುರಸ್ಥಿ ಮಾಡಲು ಹೊರಟಿರುವ ಬಿಬಿಎಂಪಿ ಅಧಿಕಾರಿಗಳಿಗೆ ಜನರು ಕ್ಲಾಸ್ ತೆಗೆದುಕೊಂಡಿದ್ದಾರೆ.
ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಡಿಎಚ್ ಅವರು ಜಗದೀಶ್ ನಗರದ ಉಸ್ತುವಾರಿ ಎಂಜಿನಿಯರ್ಗಳನ್ನು ಸಂಪರ್ಕಿಸಿದಾಗ ಈ ವೇಳೆ ಅವರು ಇಲ್ಲಸಲ್ಲದ ಕಾರಣ ಹೇಳಿ ಜಾರಿಕೊಳ್ಳಲು ಪ್ರಯತ್ನಿಸಿದ್ದಾರೆ. ನಂತರ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ಬಿ) ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿಜಯ್ ಕುಮಾರ್ ಪ್ರತಿಕ್ರಿಯಿಸಿ, ಈ ಪ್ರದೇಶದಲ್ಲಿ ರಸ್ತೆಯನ್ನು ಅಗೆಯುವ ಕಾಮಗಾರಿ ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಆದರೆ ಈ ರಸ್ತೆಗಳಲ್ಲಿ ಅಂತಹ ಕಾಮಗಾರಿಯನ್ನು ಕೈಗೊಂಡಿಲ್ಲ ಎನ್ನುವುದು ಇಲ್ಲಿನ ಜನರ ಆರೋಪವಾಗಿದೆ.

ನಂತರ ಕಾಂಕ್ರಿಟ್ ಹಾಕಲು ರಸ್ತೆಯನ್ನು ಅಗೆಯಲಾಗುತ್ತಿದೆ ಎಂದು ಸಹಾಯಕ ಇಂಜಿನಿಯರ್ ಕೆಶವಮೂರ್ತಿ ಡಿಎಚ್ಒಗೆ ತಿಳಿಸಿದ್ದಾರೆ. ಹೀಗೆ ಸಾರ್ವಜನಿಕರ ಹಣ ಪೋಲು ಮಾಡುತ್ತಿರುವ ಸ್ಥಳೀಯ ಇಂಜಿನಿಯರ್ಗಳ ವಿರುದ್ಧ ಉನ್ನತ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅಲ್ಲಿನ ನಿವಾಸಿಗಳು ಒತ್ತಾಯಿಸಿದ್ದಾರೆ.
ಈ ಮೂರು ರಸ್ತೆಗಳು ಉತ್ತಮ ಸ್ಥಿತಿಯಲ್ಲಿವೆ. ಆದರೂ ಇಂಜಿನಿಯರ್ಗಳು ಅವುಗಳನ್ನು ಒಡೆಯುತ್ತಿದ್ದಾರೆ. ಹೀಗೆ ಸಂಪೂರ್ಣವಾಗಿ ಜನರ ಹಣವನ್ನು ವ್ಯರ್ಥ ಮಾಡುತ್ತಿದ್ದಾರೆ. ಅಲ್ಲದೆ ಇದರಿಂದ ನಮಗೆ ತೊಂದರೆಯೂ ಆಗುತ್ತಿದೆ ಎಂದು ಅಲ್ಲಿನ ನಿವಾಸಿಯೊಬ್ಬರು ಅಸಮಾಧಾನ ಹೊರಹಾಕಿದ್ದಾರೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಆಗಿ ಬದಲಾದ ಪೆರಿಫೆರಲ್ ರಿಂಗ್ ರೋಡ್: 2029ರ ವೇಳೆಗೆ ನಗರದ ಟ್ರಾಫಿಕ್ಗೆ ಸಿಗಲಿದೆ ಮುಕ್ತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications