ಬೆಂಗಳೂರಿಗರಿಗೆ ಸಿಹಿಸುದ್ದಿ: ಜನರ ಮನವಿಗೆ ಸ್ಪಂದಿಸಿದ ಸರ್ಕಾರ ಪಾರ್ಕ್ಗಳ ಸಮಯ ವಿಸ್ತರಣೆ
ಬೆಂಗಳೂರು, ಜೂನ್. 11: ಬೆಂಗಳೂರಿನ ಎಲ್ಲಾ ಉದ್ಯಾನವನಗಳು ಬೆಳಗ್ಗೆ 5 ರಿಂದ ರಾತ್ರಿ 10 ರವರೆಗೆ ತೆರೆದಿರುತ್ತವೆ ಎಂದು ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ ಕೆ ಶಿವಕುಮಾರ್ ಜೂನ್ 11 ರಂದು ಘೋಷಿಸಿದ್ದಾರೆ.
ಜನದಟ್ಟಣೆಯಿಂದ ಕೂಡಿರುವ ಟೆಕ್ ಹಬ್ನಲ್ಲಿರುವ 1,200 ಸಾರ್ವಜನಿಕ ಉದ್ಯಾನವನಗಳು ಇನ್ನು ಮುಂದೆ ಬೆಳಗ್ಗೆ 5 ರಿಂದ ರಾತ್ರಿ 10 ರವರೆಗೆ ಸಾರ್ವಜನಿಕರಿಗೆ ತೆರೆದಿರುತ್ತವೆ. ಈ ಮೊದಲು, ಉದ್ಯಾನವನಗಳು ಪ್ರತಿದಿನ ಬೆಳಗ್ಗೆ 5 ರಿಂದ ರಾತ್ರಿ 8 ರವರೆಗೆ ಸಾರ್ವಜನಿಕರಿಗೆ ತೆರೆದಿರುತ್ತಿದ್ದವು. ನಿರ್ವಹಣೆ ಕಾರ್ಯವನ್ನು ಕೈಗೊಳ್ಳುವಾಗ ಬೆಳಗ್ಗೆ 10 ರಿಂದ ಮಧ್ಯಾಹ್ನ 1:30 ರವರೆಗೆ ಮುಚ್ಚಿರುತ್ತಿದ್ದವು.

ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿಕೆ ಶಿವಕುಮಾರ್, "ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿರ್ವಹಿಸುವ ಎಲ್ಲಾ ಉದ್ಯಾನವನಗಳು ಬೆಳಗ್ಗೆ 5 ರಿಂದ ರಾತ್ರಿ 10 ರವರೆಗೆ ಸಾರ್ವಜನಿಕರಿಗೆ ತೆರೆದಿರುತ್ತವೆ. ಈ ಹಿಂದೆ, ಸಮಯವು ಬೆಳಗ್ಗೆ 5 ರಿಂದ 10 ರವರೆಗೆ ಇತ್ತು. ನಂತರ ಮಧ್ಯಾಹ್ನ 1:30 ರಿಂದ ರಾತ್ರಿ 8 ಗಂಟೆಗೆ ಇತ್ತು. ಎಲ್ಲಾ ಜವಾಬ್ದಾರಿಯುತ ನಾಗರಿಕರು ನಮ್ಮ ಉದ್ಯಾನವನಗಳನ್ನು ಅಡ್ಡುಕಟ್ಟಾಗಿ ಇಟ್ಟುಕೊಳ್ಳಲು ಬಿಬಿಎಂಪಿಯೊಂದಿಗೆ ಸಹಕರಿಸಬೇಕೆಂದು ನಾನು ಒತ್ತಾಯಿಸುತ್ತೇನೆ" ಎಂದು ಹೇಳಿದ್ದಾರೆ.
ಎಲ್ಲಾ ಪಾರ್ಕ್ಗಳು ಬಿಬಿಎಂಪಿ ಅಡಿಯಲ್ಲಿ ಬಂದರೂ ಕೂಡ, ನಗರದ ಎರಡು ದೊಡ್ಡ ಉದ್ಯಾನವನಗಳಾದ ಕಬ್ಬನ್ ಪಾರ್ಕ್ ಮತ್ತು ಲಾಲ್ಬಾಗ್ ರಾಜ್ಯ ತೋಟಗಾರಿಕಾ ಇಲಾಖೆಯ ಅಡಿಯಲ್ಲಿ ಬರುತ್ತವೆ. ಹೀಗಾಗಿ ಎರಡು ಕಡೆ ಅದರದ್ದೇ ಆದ ಪ್ರತ್ಯೇಕ ಸಮಯವನ್ನು ಹೊಂದಿವೆ.

"ಬೆಂಗಳೂರು 1200 ಕ್ಕೂ ಹೆಚ್ಚು ಉದ್ಯಾನವನಗಳನ್ನು ಹೊಂದಿದೆ. ಇದು ದೇಶದಲ್ಲೇ ಅತಿ ಹೆಚ್ಚು ಉದ್ಯಾನವನಗಳನ್ನು ಹೊಂದಿರುವ ಪ್ರದೇಶಗಳಲ್ಲಿ ಒಂದಾಗಿದೆ. ಪ್ರತಿಯೊಂದು ವಾರ್ಡ್ನಲ್ಲಿಯೂ ಉದ್ಯಾನವನವಿದೆ. ನಾಗರಿಕರು ಈ ಸ್ಥಳಗಳನ್ನು ವಾಕಿಂಗ್, ಜಾಗಿಂಗ್, ವ್ಯಾಯಾಮ, ಸಾಮಾಜಿಕವಾಗಿ ಮತ್ತು ಮುಖ್ಯವಾಗಿ ಆಶ್ರಯಕ್ಕಾಗಿ ಬಳಸುತ್ತಾರೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಲ್ಲಿ ಹೊರಾಂಗಣ ಕೆಲಸಗಾರರಿಗೆ ದಿನವಿಡೀ ಉದ್ಯಾನವನಗಳನ್ನು ತೆರೆದಿಡಲು ಸಾರ್ವಜನಿಕ ಬೇಡಿಕೆಯಿದೆ" ಎಂದು ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ದಿನವಿಡೀ ಎಲ್ಲಾ ಉದ್ಯಾನವನಗಳನ್ನು ತೆರೆಯುವಂತೆ ನಾಗರಿಕ ಗುಂಪುಗಳು ಬಿಬಿಎಂಪಿ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿವೆ. ನಿರ್ವಹಣೆಯ ಕಾರಣಗಳನ್ನು ಉಲ್ಲೇಖಿಸಿ, ಉದ್ಯಾನವನಗಳನ್ನು ಮಧ್ಯಾಹ್ನದ ಸಮಯದಲ್ಲಿ (10 am-1:30 pm) ಮುಚ್ಚಲಾಯಿತು. ಆದರೆ, ಬೇಸಿಗೆಯ ತಿಂಗಳುಗಳಲ್ಲಿ ಈ ಹಸಿರು ಉದ್ಯಾನವನಗಳು ಸಾರ್ವಜನಿಕ ವಿಶ್ರಾಂತಿಗಾಗಿ ಪ್ರಮುಖವಾಗಿವೆ ಎಂದು ನಾಗರಿಕ ಗುಂಪುಗಳು ಮತ್ತು ಸಂಘಟನೆಗಳು ಮನವಿ ಮಾಡಿವೆ.
"ಕಳೆದ ವರ್ಷ ಬಿಬಿಎಂಪಿ 1 ಲಕ್ಷ ಸಸಿಗಳನ್ನು ನೆಟ್ಟು 50 ಸಾವಿರ ಸಾರ್ವಜನಿಕರಿಗೆ ವಿತರಿಸಿತ್ತು. 250 ಶಾಲೆಗಳು ಮತ್ತು ಅವರ ವಿದ್ಯಾರ್ಥಿಗಳು 52,000 ಸಸಿಗಳನ್ನು ನೆಟ್ಟರು. ಮಕ್ಕಳು ತಮ್ಮ ಸಸ್ಯದ ಆರೋಗ್ಯವನ್ನು ಮೇಲ್ವಿಚಾರಣೆ ಮಾಡಲು ವೆಬ್ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಲಾಗಿದೆ. ಈ ವರ್ಷ ಹೆಚ್ಚು ಶಾಲೆಗಳು ಮತ್ತು ಮಕ್ಕಳನ್ನು ಒಳಗೊಂಡಂತೆ 2 ಲಕ್ಷ ಸಸಿಗಳನ್ನು ನೆಡಲು ಯೋಜಿಸಿದ್ದೇವೆ. 250 ಶಾಲೆಗಳು ಈಗಾಗಲೇ ಒಪ್ಪಿಗೆ ನೀಡಿದ್ದು, 75,000 ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಉಳಿದವುಗಳನ್ನು ಪೊಲೀಸರು ಮತ್ತು ಸಾರ್ವಜನಿಕರ ನೆರವಿನೊಂದಿಗೆ ಮಾಡಲಾಗಿದೆ. 25,000 ಸಸಿಗಳನ್ನು ವಿತರಿಸಲಾಗಿದ್ದು, ಇನ್ನೂ 25,000 ಸಸಿಗಳನ್ನು ಶೀಘ್ರದಲ್ಲೇ ವಿತರಿಸಲಾಗುವುದು" ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ











Click it and Unblock the Notifications