Bengaluru Rain: ಬೆಂಗಳೂರಿನಲ್ಲಿ 33 ಮಿಮೀ ಮಳೆ- ಎಲ್ಲೆಲ್ಲಿ ಎಷ್ಟು ಮಳೆ?
ಬೆಂಗಳೂರು ಮೇ 22: ರಾಜ್ಯದಲ್ಲಿ ಕಳೆದ ದಿನ ಸುರಿದ ಭೀಕರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಗುಡುಗು, ಬಿರುಗಾಳಿ ಸಮೇತ ಸುರಿದ ಆನೆಕಲ್ ಮಳೆಗೆ ರಸ್ತೆಗಳು, ಮನೆಗಳು ಜಲಾವೃತವಾಗಿವೆ. ಕೆಲವಡೆ ಮನೆಗೋಡೆ, ಮರಗಳು, ವಿದ್ಯುತ್ ಕಂಬಗಳು ಕುಸಿದಿವೆ. ಇನ್ನೂ ಹಲವೆಡೆ ಅಂಡರ್ಪಾಸ್ಗಳಲ್ಲಿ ಮಳೆ ನೀರು ತುಂಬಿಕೊಂಡು ಅವಾಂತರ ಸೃಷ್ಟಿಯಾಗಿದೆ.
ಬೆಂಗಳೂರು 33 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಜೊತೆಗೆ ನಂದಿನ ಲೇಔಟ್ 48 ಮಿಮೀ, ಪುಲಕೇಶಿ ನಗರ 44 ಮಿಮೀ, ರಾಜಾಜಿನಗರ 37 ಮಿಮೀ, ಕುಶಾಲ್ ನಗರ 35 ಮಿಮೀ, ವಿದ್ಯಾರಣ್ಯಪುರ 25, ಕೆ ಆರ್ ಪುರ 36, ಕೊಟ್ಟೆಗಾರಪಾಳ್ಯ 33, ಚಾಮರಾಜಪೇಟೆ 28, ಬಸವನಪುರ 25, ನಾಯಂಡಳ್ಳಿ 20, ವಿವಿ ಪುರ 20, ಆಜನೇಯಪುರ 19 ಮಿಮೀ, ಆರ್ ಆರ್ ನಗರ 18 ಮಿಮಿಮೀ, ಕಾಟನ್ಪೇಟೆ 33 ಮಿಮೀ, ಸಂಪಗಿನಗರದಲ್ಲಿ 31ಮಿಮೀ, ವಿಜಯನಗರ 17 ಮಿಮೀ ಮಳೆಯಾಗಿದೆ.

ರಾಜಧಾನಿ ಬೆಂಗಳೂರಿನ ಹಲವು ಭಾಗಗಳಲ್ಲಿ ಇಂದು ಮಧ್ಯಾಹ್ನ ಮೂರು ಗಂಟೆ ವೇಳೆ ಭರ್ಜರಿ ಮಳೆಯಾಗಿದ್ದು, ಕೆಲ ಭಾಗಗಳಲ್ಲಿ ಅಲ್ಲಿಕಲ್ಲು ಸಹಿತ ಮಳೆ ಸುರಿದಿದೆ. ಏಕಾಏಕಿ ಸುರಿದ ಮಳೆಯಿಂದ ವಾಹನ ಸವಾರರು ಪರದಾಟ ನಡೆಸಿದ್ದು, ಕಪ್ಪು ಕಾರ್ಮೋಡಗಳು ಕವಿದು ಭರ್ಜರಿ ಮಳೆಯಾದ ಕಾರಣ ವಾಹನ ಸವಾರರು ದಾರಿ ಕಣದೆ ರಸ್ತೆಯಲ್ಲೇ ವಾಹನಗಳನ್ನು ನಿಲ್ಲಿಸುವಂತೆ ಆಗಿತ್ತು.
ಇನ್ನೂ ಬೆಂಗಳೂರಿನಲ್ಲಿ ಮಳೆ ಅವಾಂತರಕ್ಕೆ 55 ಮರಗಳು ಧರಗೆ ಉರುಳಿವೆ. ಆರ್ ಪಿಸಿ ಲೇಔಟ್, ಮಲ್ಲೇಶ್ವರಂ, ಕುಮಾರಸ್ವಾಮಿ ಲೇಔಟ್, ಸಂಪಂಗಿ ನಗರ ಸೇರೆದಂತೆ ಹಲವೆಡೆ ಮರಗಳು ನೆಲಕ್ಕಚ್ಚಿವೆ. ಇನ್ನೂ ಮುಂದಿನ ನಾಲ್ಕು ದಿನ ಬೆಂಗಳೂರಿನಲ್ಲಿ ಮಳೆ ಮುಂದುವರೆಯಲ್ಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು ಬಿಬಿಎಂಪಿ ರಕ್ಷಣ ಕಾರ್ಯಕ್ಕೆ ಮುಂದಾಗಿದೆ.
#WATCH | Karnataka: Heavy rain and hailstorm lashed Bengaluru city.
— ANI (@ANI) May 21, 2023
(Earlier visuals from Sadashiva Nagar) pic.twitter.com/31gtO537ka
ಇನ್ನೂ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಭಾರೀ ಮಳೆಯಿಂದಾಗಿ ಹಳೆಯ ಕಟ್ಟಡವೊಂದು ಕುಸಿದು ಬಿದ್ದಿದೆ. ಇದರಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
Karnataka | An old building collapsed in Vidyaranyapura in Bengaluru after heavy rains lashed the city. No casualties were reported.
— ANI (@ANI) May 21, 2023
(Photo: Civil defence dept) pic.twitter.com/0DbbIdxq5m
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜಧಾನಿ ಸೇರಿ ರಾಜ್ಯವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಬೆಂಗಳೂರಿನ ವಿಧಾನಸೌಧ, ಆನಂದ್ ರಾವ್, ಮೆಜೆಸ್ಟಿಕ್, ರೇಸ್ ಕೋರ್ಸ್, ಕೆಆರ್ ಸರ್ಕಲ್, ಟೌನ್ ಹಾಲ್, ಕಾರ್ಪೊರೇಷನ್, ಮೈಸೂರು ಬ್ಯಾಂಕ್ ಸರ್ಕಲ್ , ಜಯನಗರ, ಮಲ್ಲೇಶ್ವರ ಸೇರಿ ಹಲವೆಡೆ ಮಳೆಯಾಗಿದೆ.

ಬೆಂಗಳೂರಿನಲ್ಲಿ ನಿನ್ನೆ ಅಂಡರಪಾಸ್ನಲ್ಲಿ ಮಳೆ ನೀರು ತುಂಬಿಕೊಂಡು ವಾಹನ ಸವಾರರು ಪರದಾಡಿದ್ದಾರೆ. ಇದರಿಂದ ಕೆಆರ್ ಪುರ ಅಂಡರ್ಪಾಸ್ನಲ್ಲಿ ಮಳೆ ನೀರಿಗೆ ಸಿಲುಕಿ ಯುವತಿ ಸಾವನ್ನಪ್ಪಿದ್ದಾಳೆ. ಇದರಿಂದ ಎಚ್ಚತ್ತುಕೊಂಡ ಸರ್ಕಾರ ಅಪಾಯ ತಂದೊಡ್ಡುವ ಅಂಡರ್ಪಾಸ್ಗಳ ಪಟ್ಟಿಯನ್ನು ಬಿಬಿಎಂಪಿಗೆ ಕೇಳಿದೆ.
Karnataka | Trees uprooted in several localities of Bengaluru after heavy rain lashed the city. pic.twitter.com/ATt2PiJdBq
— ANI (@ANI) May 21, 2023
ಬೆಂಗಳೂರಿನಲ್ಲಿ ಮಳೆ ಬಂದರೆ ನೂರು ತುಂಬಿಕೊಳ್ಳುವ 20 ಅಂಡರ್ಪಾಸ್ಗಳನ್ನು ಬಿಬಿಎಂಪಿ ಪಟ್ಟಿ ಮಾಡಿದೆ. ಕೆಆರ್ ಪುರ ಅಂಡರ್ಪಾಸ್ ನಲ್ಲಿ ದುರಂತ ಸಾವು ಸಂಭವಿಸಿದ ನಂತರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೆಆರ್ ಪುರಗೆ ಬೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು.
ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆ ಮಳೆ ಅವಾಂತರ ಸೃಷ್ಟಿ ಮಾಡಿದೆ. ಮೈಸೂರಿನಲ್ಲಿ ಹುಣಸೂರು ತಾಲೂಕಿನಲ್ಲಿ ರೈತನೊಬ್ಬ ಸಾವನ್ನಪ್ಪಿದ್ದಾನೆ. ಮನೆ ಗೋಡೆ ಕುಸಿದು, ಮೈಸೂರು ಎಲ್ಲೆಡೆ ಮರಗಳು ಧರೆಗುರುಳಿವೆ.
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Rain Alert: ಬೇಸಿಗೆ ಮಳೆಗೆ ಬೆಂಗಳೂರಿನ ಕೆಲವೆಡೆ ಸಂಚಾರ ಅಸ್ತವ್ಯಸ್ತ, ಮಾ.21ರವರೆಗೂ ಮಳೆ -
Bengaluru Rain: ಬೆಂಗಳೂರಿನಲ್ಲಿ ತಾಪಮಾನ ಕುಸಿತ: ಸುಡುಬಿಸಿಲಿಗೆ ಬ್ರೇಕ್ ಹಾಕಿದ ವರ್ಷದ ಮೊದಲ ಮಳೆ, ತಂಪಾದ ಸಿಲಿಕಾನ್ ಸಿಟಿ












Click it and Unblock the Notifications