Bengaluru Rain Alert: ಗುಡುಗು ಸಹಿತ ಮಳೆ, ಬಿರುಗಾಳಿ ಸಾಧ್ಯತೆ- 198 ಪ್ರವಾಹ ಪೀಡಿತ ಏರಿಯಾಗಳ ಮೇಲೆ ಗಮನ
ಬೆಂಗಳೂರು, ಜೂನ್ 15: ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಈ ಮಳೆಯು ವಾರವಿಡೀ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತನ್ನ ಇತ್ತೀಚಿನ ಮುನ್ಸೂಚನೆಯಲ್ಲಿ ತಿಳಿಸಿದೆ. ನಗರದಲ್ಲಿ ಬಲವಾದ ಮೇಲ್ಮೈ ಗಾಳಿಯೂ ಕಾಣಿಸುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
'ನಗರದಲ್ಲಿ ಸಂಜೆ ವೇಳೆಗೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮೇಲ್ಮೈ ಗಾಳಿಯು ಸಾಂದರ್ಭಿಕ ಗಾಳಿಯೊಂದಿಗೆ ಪ್ರಬಲವಾಗಿ ಬೀಸಬಹುದು. ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ' ಎಂದು ಬೆಂಗಳೂರಿನ ಪ್ರಾದೇಶಿಕ ಹವಾಮಾನ ಕೇಂದ್ರವು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಿಗೆ ಮುನ್ಸೂಚನೆ ನೀಡಿದೆ.

ಗುರುವಾರದಂದು ಗರಿಷ್ಠ ತಾಪಮಾನವು ಸುಮಾರು 32 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ. ಮುಂದಿನ 7 ದಿನಗಳ ನಂತರ ಮಳೆ ಪ್ರಮಾಣ ಕಡಿಮೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಬುಧವಾರ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ ಕನಿಷ್ಠ ತಾಪಮಾನ 20 ಡಿಗ್ರಿಗೆ ಇಳಿಯಲಿದೆ.
ನಗರದಲ್ಲಿ 198 ಪ್ರವಾಹ ಪೀಡಿತ ಏರಿಯಾಗಳು
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದಲ್ಲಿ ಮುಂಗಾರು ಪರಿಹಾರ ಕ್ರಮಗಳನ್ನು ಬುಧವಾರ ಪರಿಶೀಲಿಸಿತು. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪೌರಾಡಳಿತ ಮಂಡಳಿಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ವಿವಿಧ ಮುಂಗಾರು ಪೂರ್ವ ಸಿದ್ಧತೆ ಉಪಕ್ರಮಗಳ ಕುರಿತು ಚರ್ಚಿಸಿದರು.

ತ್ವರಿತ ಪ್ರವಾಹಕ್ಕೆ ಗುರಿಯಾಗುವ 198 ಪ್ರದೇಶಗಳನ್ನು ಬಿಬಿಎಂಪಿ ಗುರುತಿಸಿದೆ. ಬಿಬಿಎಂಪಿಯು 118 ಸ್ಥಳಗಳಲ್ಲಿ ಶಾಶ್ವತ ಪರಿಹಾರಗಳನ್ನು ಒದಗಿಸಿದೆ ಎಂದು ಆಯುಕ್ತರು ತಿಳಿಸಿದರು.
'ನಗರದಲ್ಲಿ 198 ಪ್ರವಾಹ ಪೀಡಿತ ಪ್ರದೇಶಗಳಿದ್ದು, ಈ ಪೈಕಿ 118 ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಕಲ್ಪಿಸಲಾಗಿದೆ. ಉಳಿದ 80 ಸ್ಥಳಗಳಲ್ಲಿ ತಾತ್ಕಾಲಿಕ ಪರಿಹಾರ ಕಂಡುಬಂದಿದ್ದು. ಈ ಎಲ್ಲ ಸೂಕ್ಷ್ಮಗಳನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ' ಎಂದು ಪರಿಶೀಲನಾ ಸಭೆಯ ನಂತರ ಗಿರಿ ನಾಥ್ ಹೇಳಿದರು.
ಅಂಡರ್ಪಾಸ್ಗಳಲ್ಲಿ ಸಿಸಿಟಿವಿ, ವಿದ್ಯುತ್ ದೀಪಗಳು ಮತ್ತು ಮೀಟರ್ ಗೇಜ್ಗಳನ್ನು ಅಳವಡಿಸಿ ಮಳೆ ನೀರಿನ ಪ್ರಮಾಣವನ್ನು ಮೇಲ್ವಿಚಾರಣೆ ಮಾಡಲು ಮತ್ತು ಅಗತ್ಯವಿದ್ದರೆ ತಕ್ಷಣದ ಕ್ರಮಗಳನ್ನು ಪ್ರಾರಂಭಿಸಲು ಪೌರಕಾರ್ಮಿಕರಿಗೆ ಸೂಚಿಸಲಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 53 ಅಂಡರ್ಪಾಸ್ಗಳು ಬರುತ್ತಿದ್ದು, ಈಗಾಗಲೇ 41 ಕೆಳ ಸೇತುವೆಗಳಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ. ಉಳಿದ 12 ಅಂಡರ್ ಬ್ರಿಡ್ಜ್ಗಳಲ್ಲಿ ಕೂಡಲೇ ಅಗತ್ಯ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಯುಕ್ತರು ತಿಳಿಸಿದರು.
-
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ











Click it and Unblock the Notifications