Rain Alert: ಬೇಸಿಗೆ ಮಳೆಗೆ ಬೆಂಗಳೂರಿನ ಕೆಲವೆಡೆ ಸಂಚಾರ ಅಸ್ತವ್ಯಸ್ತ, ಮಾ.21ರವರೆಗೂ ಮಳೆ
ಬೆಂಗಳೂರು; ಬೆಂಗಳೂರಿನಾದ್ಯಂತ ವರ್ಷದ ಮೊದಲ ಪೂರ್ವ ಮುಂಗಾರು (Pre Monsoon Rain) ಮಳೆಗೆ ಅಲ್ಲಲ್ಲಿ ಜನ ಜೀವನ ಅಸ್ತವ್ಯಸ್ತವಾಯಿತು. ವಾಹನ ಸವಾರರು ಹಲವು ಕಡೆಗಳಲ್ಲಿ ರಸ್ತೆಯಲ್ಲೇ ನಿಲ್ಲುವಂತಾಯಿತು. ಬೇಸಿಗೆ ವೇಳೆ ಅಲಿಕಲ್ಲು ಸಹಿತ ಸುರಿದ ಮಳೆಗೆ ಬೆಂಗಳೂರಿನ ಇಳೆ ತಂಪಾಯಿತು. ಅದರೆ ಮಳೆ ನೀರು ಸರಾಗವಾಗಿ ಚರಂಡಿ ಸೇರಿದೇ ರಸ್ತೆ ಮೇಲೆ ನಿಂತು ಕಿರಿ ಕಿರಿ ಉಂಟು ಮಾಡಿತು. ರಾತ್ರಿಯಿಡಿ ಬೆಂಗಳೂರು ಸಂಚಾರ ಪೊಲೀಸರು ವಾಹನ ಸವಾರರಿಗೆ ಎಚ್ಚರಿಕೆ ನೀಡಿದರು. ರಸ್ತೆಗಳ ಬ್ಲಾಕ್, ವಾಹನಗಳ ನಿಧಾನಗತಿ ಸಂಚಾರ ಕುರಿತು ಮಾಹಿತಿ ನೀಡಿದರು.
ನಗರದ ಅಂಜನಾಪುರ, ಗೊಟ್ಟಿಗೆರೆ, ಉತ್ತರಹಳ್ಳಿ, ರಾಜ ರಾಜೇಶ್ವರಿ ನಗರ, ಹೆಬ್ಬಾಳ, ಜೆ.ಪಿ.ನಗರ, ಕೆಂಗೇರಿ, ನಾಗವಾರ, ಕಮ್ಮನಹಳ್ಳಿ, ಸಂಜಯನಗರ ಸೇರಿದಂತೆ ನಗರ ಹಲವೆಡೆ ಗುಡುಗು ಮಿಂಚು ಸಹಿತ ವರ್ಷದ ಮೊದಲ ಮಳೆ (Bengaluru Rains) ಆಯಿತು. ಪೂರ್ವ ಮುಂಗಾರು ಮಳೆ ನಗರದಲ್ಲಿ ಮುಂದುವರಿಯುವ ಮುನ್ಸೂಚನೆ ಇದೆ. ಮಂಗಳವಾರ ನಗರದಲ್ಲಿ ಸುರಿದ ಮಳೆಗೆ ಅಲ್ಲಲ್ಲಿ ಸಂಚಾರ ಅಡಚಣೆ ಉಂಟಾಯಿತು. ನಗರದ ವಿವಿಧ ನಡೆಯುತ್ತಿರುವ ರಾಜಕಾಲುವೆ ಕಾಮಗಾರಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮಾಹಿತಿ ನೀಡಿದೆ.

ಹಲವೆಡೆ ರಸ್ತೆ ಸಂಚಾರದಲ್ಲಿ ಅಡಚಣೆ, ವೇಗಕ್ಕೆ ಬ್ರೇಕ್
ನಗರದ ಸಿಬಿಐ ಮೇಲ್ಸೇತುವೆ ಬಳಿ ಮಳೆ ನೀರು ನಿಂತಿರುವುದರಿಂದ ಏರ್ಪೋರ್ಟ್ ರಸ್ತೆಯ ಕಡೆಗೆ ನಿಧಾನಗತಿಯ ಸಂಚಾರ ಕಂಡು ಬಂತು. ನಗರದಿಂದ ಯಲಹಂಕ, ಏರ್ಪೋರ್ಟ್, ದೇವನಹಳ್ಳಿ ಕಡೆಗೆ ತೆರಳುವ ಕಾರು, ಟ್ಯಾಕ್ಸಿ, ಬಸ್ ಹಾಗೂ ಬೈಕ್ ಸವಾರರು ಪರಾಡಿದ್ದು ಕಂಡು ಬಂತು.
ಯಲಹಂಕ ಕಾಫಿ ಡೇ ಬಳಿ ಮಳೆ ನೀರು ನಿಂತ ಪರಿಣಾಮ ಏರ್ಪೋರ್ಟ್ ರಸ್ತೆಯ ಕಡೆಗೆ ಸಾಗುವ ವಾಹನ ಸವಾರರು, ಪ್ರಯಾಣಿಕರಿಗೆ ತೊಂದರೆ ಆಯಿತು. ರಾಣಿ ಸರಳ ದೇವಿ ಕಾಲೇಜ್ ಮುಂಭಾಗ ಮರದ ಕಾಯಿಗಳು ರಸ್ತೆಗೆ ಬಿದ್ದು ಮಳೆ ನೀರಿಗೆ ದ್ವಿಚಕ್ರ ವಾಹನಗಳು ಸ್ಕಿಡ್ ಆಗುತ್ತಿರುವುದರಿಂದ ಟಿ ಮರಿಯಪ್ಪ ರಸ್ತೆ ಯಿಂದ ಮಾಧವನ್ ಪಾರ್ಕ್ ಕಡೆಗೆ ಸಂಚಾರ ಸಮಸ್ಯೆ ಉಂಟಾಯಿತು.
ಯಲಹಂಕ ಹಳೆ ರೈಲು ನಿಲ್ದಾಣದ ಬಳಿ ಮಳೆ ನೀರು ನಿಂತಿತ್ತು. ಇಬ್ಬಲೂರು ರಸ್ತೆ ಜಂಕ್ಷನ್ ಬಳಿ ವಾಟರ್ಲಾಗಿಂಗ್ ಸಮಸ್ಯೆ ಕಂಡು ಬತು. ಗಂಟೆಗಳ ಕಾಲ ಮಳೆ ನೀರು ನಿಂತ ಕಾರಣ, ವಾಹನ ಸವಾರರು ಅದರಲ್ಲಿಯೇ ನಿಧಾನವಾಗಿ ಸಾಗಿದರು. ಹಲವರು ಜಿಬಿಎ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದರು.
ಮಳೆಗೆ ಸಂಚಾರ ಕಿರಿಕಿರಿ, ಮಾ.21ರವರೆಗೂ ಮಳೆ
ಅದೇ ರೀತಿ ರೈಲ್ವೆ ಅಂಡರ್ ಬ್ರಿಡ್ಜ್, ಮೇಲ್ಸೇತುವೆ, ಪ್ರಮುಖ ಜಂಕ್ಷನ್, ಅಂಡರ್ಪಾಸ್ಗಳಲ್ಲಿ ಮಳೆ ನೀರು ಒಳಚರಂಡಿ ಸೇರಿ ಮುಂದೆ ಸಾಗದೇ ರಸ್ತೆ ಮೇಲೆ ಉಕ್ಕಿ ಹರಿಯಿತು. ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ಕೆಲವೆಡೆ ಕಂಡು ಬಂತು. ರಾತ್ರಿ 9 ಗಂಟೆ ಹೊತ್ತಿಗೆ ಹೆಮ್ಮೆಗೆಪುರದಲ್ಲಿ 24 ಮಿಲಿ ಮೀಟರ್, ಗೊಲ್ಲಹಳ್ಳಿಯಲ್ಲಿ 22.5 ಮಿಲಿ ಮೀಟರ್, ಬ್ಯಾಟರಾಯನಪುರ 16.5 ಮಿಲಿ ಮೀಟರ್, ಚೌಡೇಶ್ವರಿ 14.5ಮಿಲಿ ಮೀಟರ್, ಜಕ್ಕೂರು 12.5ಮಿಲಿ ಮೀಟರ್ ಮತ್ತು ಜಕ್ಕೂರು-2 12 ಮಿಲಿ ಮೀಟರ್ ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ವರದಿ ಮಾಹಿತಿ ನೀಡಿದೆ.
ಮುಂದಿನ ಎರಡು ದಿನ ನಗರದಲ್ಲಿ ಹಗಲು ಒಣಹವೆ ಕಂಡು ಬರಲಿದ್ದು, ಸಂಜೆ ಹೊತ್ತಿಗೆ ಮಳೆ ಜಮಾಯಿಸಲಿದೆ. ಬಿಸಿಲು ಕಡಿಮೆ ಅಗಲಿದೆ. ಮಾರ್ಚ್ 21ರವರೆಗೂ ಗುಡುಗು ಸಹಿತ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ













Click it and Unblock the Notifications