Bengaluru Rain: ಪ್ರವಾಹ, ಮಳೆ ಆವಾಂತರ ತಪ್ಪಿಸಲು ಹೊಸ ತಂತ್ರಜ್ಞಾನ ಅಳವಡಿಕೆ
ಬೆಂಗಳೂರು, ಮೇ 10: ಬೆಂಗಳೂರು ನಗರದಲ್ಲಿ ಮಳೆಯಿಂದಾಗಿ ಘಟಿಸುವ ಪ್ರವಾಹ, ಇನ್ನಿತರ ತುರ್ತು ಸಂದರ್ಭಗಳ ನಿರ್ವಹಣೆಗಾಗಿ ರಾಜಕಾಲುವೆಗಳಲ್ಲಿ ಹೊಸ ತಂತ್ರಜ್ಞಾನದ ಅಳವಡಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾಹಿತಿ ನೀಡಿದೆ.
ರಾಜಕಾಲುವೆಗಳಲ್ಲಿ ಹೊಸ ತಂತ್ರಜ್ಞಾನದ ಬಳಸಿಕೊಂಡು 124 ಕಡೆ ನೀರಿನ ಮಟ್ಟ ಅಳೆಯುವ ಸಂವೇದಕ (Water Level Sensor)ಗಳನ್ನು KSNDMC ವತಿಯಿಂದ ಅಳವಡಿಸಲಾಗಿದೆ. ಇನ್ನೂ ಪ್ರತಿಯೊಂದು ಸೆನ್ಸಾರ್ ಯಂತ್ರಕ್ಕೂ ಸೋಲಾರ್ ಅಳವಡಿಕೆ ಮಾಡಲಾಗಿದೆ.

ಈ ತಂತ್ರಜ್ಞಾನ ಅಳವಡಿಕೆಯಿಂದ ನಿತ್ಯ ಅಂತರ್ಜಾಲದ ಮೂಲಕ ಕೆಎಸ್ಎನ್ಡಿಎಂಸಿ ನಿಯಂತ್ರಣ ಕೊಠಡಿಗೆ ಕೂಡಲೇ ಮಾಹಿತಿ ತಿಳಿಯಲಿದೆ. ಅವರು ಪಾಲಿಕೆಯ ಇಂಟಿಗ್ರೇಟೆಡ್ ಕಮಾಂಡಿಂಗ್ ಕಂಟ್ರೋಲ್ ಸೆಂಟರ್ (ICCC)ಗೆ ಮಾಹಿತಿ ರವಾನೆ ಮಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೆನ್ಸಾರ್ ಅಳವಡಿಸಿರುವ ಕಡೆ ರಾಜಕಾಲುವೆಯಲ್ಲಿ ಹರಿಯುವ ನೀರಿನ ಮಟ್ಟವನ್ನು ಬಣ್ಣದ ಆಧಾರದಲ್ಲಿ ತಿಳಿಯಬಹುದಾಗಿದೆ. ಅದರಂತೆ ಹಸಿರು, ನೀಲಿ, ಕೆಂಪು ಹಾಗೂ ಕಪ್ಪು ಬಣ್ಣದಲ್ಲಿ ಗುರುತಿಸಲಾಗುತ್ತದೆ. ಹಸಿರು ಹಾಗೂ ನೀಲಿ ಬಣ್ಣವಿದ್ದರೆ ಯಾವುದೇ ಅಪಾಯವಿರುವುದಿಲ್ಲ.
ಕೆಂಪು ಬಣ್ಣವಿದ್ದರೆ ಅಪಾಯ ಎಂದರ್ಥ ಹಾಗೂ ಕಪ್ಪು ಬಣ್ಣಕ್ಕೆ ತಿರುಗಿದರೆ ಪ್ರವಾಹ ಉಂಟಾಗಲಿದೆ ಎಂಬ ಮಾಹಿತಿ ತಿಳಿಯಲಿದೆ. ಆ ಮಾಹಿತಿಗೆ ಅನುಗುಣವಾಗಿ ಪ್ರವಾಹ ಉಂಟಾಗುವ ಸ್ಥಳದ ಸುತ್ತಮುತ್ತಲಿನ ನಿವಾಸಿಗಳನ್ನು ಬೇರೆಡೆ ತೆರಳುವಂತೆ ಸೂಚನೆ ನೀಡಬಹುದು. ಇದರಿಂದ ಪ್ರವಾಹದಿಂದಾಗುವ ಅನಾಗುತಗಳನ್ನು ತಪ್ಪಿಸಬಹುದಾಗಿದೆ.

ಅರ್ಧ ಕೀಮಿಗೂ ಉದ್ದದ ರಾಜಕಾಲುವೆ
ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ 860 ಕಿ.ಮೀ ಉದ್ದದ ರಾಜಕಾಲುವೆ ಇದೆ. ಈ ಪೈಕಿ 581 ಕಿ.ಮೀ ಉದ್ದ ರಾಜಕಾಲುವೆಯನ್ನು ಆರ್.ಸಿ.ಸಿ ತಡೆಗೋಡೆಯಿಂದ ನಿರ್ಮಾಣ ಮಾಡಲಾಗಿದೆ. 199 ಕಿ.ಮೀ ಉದ್ದ ರಾಜಕಾಲುವೆಯ ಆರ್.ಸಿ.ಸಿ ತಡೆಗೋಡೆ ಕಾಮಗಾರಿಯು ಪ್ರಗತಿಯಲ್ಲಿದೆ. ಇನ್ನುಳಿದ 80 ಕಿ.ಮೀ ರಾಜಕಾಲುವೆಯು ಕಚ್ಚಾ ಡ್ರೈನ್ ಒಳಗೊಂಡಿರುತ್ತದೆ.
ರಾಜಕಾಲುವೆಗಳಲ್ಲಿ ಹೂಳೆತ್ತುವ ಕಾರ್ಯ ಪ್ರಗತಿ
ನಗರದಲ್ಲಿ ಪಕ್ಕಾ ಡ್ರೈನ್ 581 ಕಿ.ಮೀ ಉದ್ದದ ಆರ್.ಸಿ.ಸಿ ತಡೆಗೋಡೆ ನಿರ್ಮಿಸಿರುವ ರಾಜಕಾಲುವೆಯ ಭಾಗದಲ್ಲಿ ಹೂಳೆತ್ತುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆ. ಅದಲ್ಲದೆ ತೆಗೆಯುವಂತಹ ಹೂಳನ್ನು ಕೂಡಲೆ ತೆರವುಗೊಳಿಸುವ ಕೆಲಸ ಮಾಡಲಾಗುತ್ತಿದೆ.
ಸದ್ಯ ಮಳೆಗಾಲ ಆರಂಭವಾಗಿದ್ದು, ಸುರಿಯುವ ಮಳೆಗೆ ಬಿಬಿಎಂಪಿಯು ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಮಳೆಗಾಲದಲ್ಲಿ ಸಂಭವಿಸುವ ಅವಾಂತರಗಳನ್ನು ತಪ್ಪಿಸಲು ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಪ್ರವಾಹ ಸ್ಥಳಗಳಲ್ಲಿ ಶಾಸ್ವತ ಪರಿಹಾರ ಕ್ರಮ
ಬೆಂಗಳೂರಿನ 74 ಕಡೆ ಪ್ರವಾಹ ಪೀಡಿತ ಪ್ರದೇಶಗಳಿದ್ದು, ಸದರಿ ಸ್ಥಳಗಳಲ್ಲಿ ಶಾಶ್ವತ ಪರಿಹಾರಕ್ಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮಳೆಗಾಲದ ಹಿನ್ನೆಲೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.
ರಾಜಕಾಲುವೆ, ದ್ವಿತೀಯ ರಾಜಕಾಲುವೆ, ಚರಂಡಿಗಳಲ್ಲಿ ಹೂಳು ತೆಗೆಯುವ ಕಾರ್ಯವನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಜೊತೆಗೆ ರಸ್ತೆ ಬದಿಯ ಶೋಲ್ಡರ್ ಡ್ರೈನ್ ಗಳ ಬಳಿ ಇರುವ ತ್ಯಾಜ್ಯವನ್ನು ತೆರವುಗೊಳಿಸಿ ರಸ್ತೆ ಮೇಲೆ ನೀರು ನಿಲ್ಲದೆ ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಮಾಡಲಾಗಿದೆ. ಮುಖ್ಯ ರಸ್ತೆ, ಉಪನಗರ ರಸ್ತೆಗಳಲ್ಲಿ ಒಳಚರಂಡಿ ಸ್ವಚ್ಛಗೊಳಿಸಲಾಗಿದೆ. ಅನುಪಯುಕ್ತ ಕಟ್ಟಡ ತ್ಯಾಜ್ಯ ತೆರವು ಮಾಡಲಾಗುತ್ತಿದೆ ಎಂದು ಹೇಳಿದರು.
-
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ












Click it and Unblock the Notifications