Get Updates
Get notified of breaking news, exclusive insights, and must-see stories!

Bengaluru Rain: ಬೆಂಗಳೂರಿನಲ್ಲಿ ತಾಪಮಾನ ಕುಸಿತ: ಸುಡುಬಿಸಿಲಿಗೆ ಬ್ರೇಕ್ ಹಾಕಿದ ವರ್ಷದ ಮೊದಲ ಮಳೆ, ತಂಪಾದ ಸಿಲಿಕಾನ್ ಸಿಟಿ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸತತವಾಗಿ ಕಾಡುತ್ತಿದ್ದ ಸುಡುಬಿಸಿಲು ಮತ್ತು ಅತಿಯಾದ ತಾಪಮಾನದಿಂದ ಕಂಗೆಟ್ಟಿದ್ದ ಬೆಂಗಳೂರು ಜನತೆಗೆ ವರುಣದೇವ ತಂಪೆರೆದಿದ್ದಾನೆ. ನಗರದಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಸುಡುತ್ತಿದ್ದ ಧಗೆಯಿಂದಾಗಿ ಕಾದಿದ್ದ ರಸ್ತೆಗಳು ಈಗ ತಂಪಾಗಿವೆ. ಬೆಳಿಗ್ಗೆಯಿಂದಲೇ ಬಿಸಿಲಿನ ತಾಪ 34-35 ಡಿಗ್ರಿ ಸೆಲ್ಸಿಯಸ್‌ ಆಸುಪಾಸಿನಲ್ಲಿದ್ದರೂ, ಸಂಜೆಯ ವೇಳೆಗೆ ದಿಢೀರ್ ಆಗಿ ಬದಲಾದ ಹವಾಮಾನದಿಂದಾಗಿ ತಾಪಮಾನದಲ್ಲಿ ಗಣನೀಯ ಕುಸಿತ ಕಂಡುಬಂದಿದೆ. ಮಳೆಯ ನಂತರ ಬೀಸುತ್ತಿರುವ ತಣ್ಣನೆಯ ಗಾಳಿಯು ನಗರವಾಸಿಗಳಿಗೆ ಹಿತವಾದ ಅನುಭವ ನೀಡುತ್ತಿದೆ.

ಕೆಲವೆಡೆ ಆಲಿಕಲ್ಲು ಸಹಿತ ಮಳೆಯ ಅಬ್ಬರ

ನಗರದ ಹಲವೆಡೆ ಮಂಗಳವಾರ ತಡರಾತ್ರಿವರೆಗೆ ಮಳೆ ಸುರಿದಿದೆ. ದೇವನಹಳ್ಳಿ, ವೈಟ್‌ಫೀಲ್ಡ್, ಎಲೆಕ್ಟ್ರಾನಿಕ್ ಸಿಟಿ ಮತ್ತು ಯಲಹಂಕ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಬಿದ್ದ ಆಲಿಕಲ್ಲುಗಳ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಜನರು ಈ ಅಪರೂಪದ ಹವಾಮಾನವನ್ನು ಸಂಭ್ರಮಿಸುತ್ತಾ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ರಸ್ತೆಗಳ ಮೇಲೆ ಮಂಜು ಮುಸುಕಿದಂತೆ ಆಲಿಕಲ್ಲುಗಳು ಹರಡಿಕೊಂಡಿದ್ದವು. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ "ಮಿನಿ ಕಾಶ್ಮೀರ" ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಸಖತ್ ವೈರಲ್ ಆಗುತ್ತಿವೆ.

Bengaluru Rain

ಮಳೆಗೆ ಅಸಲಿ ಕಾರಣವೇನು?

ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದ ಮೇಲ್ಭಾಗದಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯಗಳ ನಡುವೆ ಗಾಳಿಯ ದಿಕ್ಕಿನಲ್ಲಿ ಉಂಟಾದ ಅಸಮತೋಲನವೇ ಈ ದಿಢೀರ್ ಮಳೆಗೆ ಮುಖ್ಯ ಕಾರಣ. ಎರಡು ಸಮುದ್ರಗಳ ತೇವಾಂಶಭರಿತ ಗಾಳಿಯು ಒಂದಕ್ಕೊಂದು ಸಂಧಿಸಿದ ಪರಿಣಾಮ ಮೋಡಗಳ ರಚನೆಯಾಗಿ, ಬೆಂಗಳೂರಿನಲ್ಲಿ ಗುಡುಗು, ಮಿಂಚು ಮತ್ತು ಆಲಿಕಲ್ಲು ಸಹಿತ ಮಳೆ ಸುರಿಯುತ್ತಿದೆ ಎಂದು ಹವಾಮಾನ ಇಲಾಖೆ ವಿವರಿಸಿದೆ.

ಇದು ಮುಂಗಾರು ಪೂರ್ವ (Pre-monsoon) ಮಳೆಯ ಆರಂಭಿಕ ಲಕ್ಷಣವಾಗಿದ್ದು, ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇದೇ ರೀತಿಯ ಮೋಡ ಕವಿದ ವಾತಾವರಣ ಮತ್ತು ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.

Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?

ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹವಾಮಾನದಲ್ಲಿ ಏರಿಳಿತ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 33 ಡಿಗ್ರಿ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್‌ ಆಸುಪಾಸಿನಲ್ಲಿ ದಾಖಲಾಗುವ ಸಾಧ್ಯತೆಯಿದೆ. ಮಾರ್ಚ್ 19ರ ಗುರುವಾರ ಬೆಳಗಿನ ಅವಧಿಯವರೆಗೆ ನಗರದ ಕೆಲವು ಭಾಗಗಳಲ್ಲಿ ಹಗುರವಾದ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ಆಲಿಕಲ್ಲು ಮಳೆಯ ಅಬ್ಬರವಿರುವುದರಿಂದ, ಬೆಂಗಳೂರಿನಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ನಾಗರಿಕರು ಹೊರಗಡೆ ಹೋಗುವಾಗ ಮುನ್ನೆಚ್ಚರಿಕೆ ವಹಿಸುವುದು ಉತ್ತಮ.

Bengaluru Rain

ಜಿಬಿಎ ಎಚ್ಚರಿಕೆ

ಸಿಲಿಕಾನ್ ಸಿಟಿಯಲ್ಲಿ ಅಕಾಲಿಕ ಗುಡುಗು ಸಹಿತ ಮಳೆ ಮತ್ತು ಬಲವಾದ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ತುರ್ತು ಎಚ್ಚರಿಕೆ ಪ್ರಕಟಣೆಯನ್ನು ಹೊರಡಿಸಿದೆ. ನಗರದಲ್ಲಿ ಬೀಸುತ್ತಿರುವ ವೇಗದ ಗಾಳಿಯಿಂದಾಗಿ ಮರಗಳು ಧರೆಗುರುಳುವ ಮತ್ತು ದೊಡ್ಡ ಕೊಂಬೆಗಳು ಮುರಿದು ಬೀಳುವ ಅಪಾಯ ಹೆಚ್ಚಾಗಿದೆ ಎಂದು ಎಚ್ಚರಿಸಿದೆ. ಮಳೆ ಅಥವಾ ಗಾಳಿ ಬೀಸುವ ಸಮಯದಲ್ಲಿ ರಸ್ತೆ ಬದಿಯ ದೊಡ್ಡ ಮರಗಳ ಕೆಳಗೆ ಆಶ್ರಯ ಪಡೆಯಬೇಡಿ. ಹಳೆಯ ಮರಗಳು ಅಥವಾ ದುರ್ಬಲವಾದ ಕೊಂಬೆಗಳು ಯಾವುದೇ ಕ್ಷಣದಲ್ಲಿ ಬೀಳುವ ಸಾಧ್ಯತೆಯಿರುತ್ತದೆ. ಗಾಳಿ-ಮಳೆಯ ವೇಳೆ ಮರಗಳ ಕೆಳಗೆ ಅಥವಾ ಹಳೆಯ ಕಟ್ಟಡಗಳ ಹತ್ತಿರ ವಾಹನಗಳನ್ನು ನಿಲುಗಡೆ ಮಾಡಬೇಡಿ. ಇದು ವಾಹನಗಳಿಗೆ ಹಾನಿಯಾಗುವುದಲ್ಲದೆ ಪ್ರಾಣಾಪಾಯಕ್ಕೂ ಕಾರಣವಾಗಬಹುದು ಎಂದು ಎಚ್ಚರಿಸಿದೆ.

ಗಾಳಿಗೆ ಮರದ ಕೊಂಬೆಗಳು ಬಿದ್ದು ವಿದ್ಯುತ್ ತಂತಿಗಳು ತುಂಡಾಗಿರುವ ಸಾಧ್ಯತೆಯಿರುತ್ತದೆ. ಆದ್ದರಿಂದ ವಿದ್ಯುತ್ ಕಂಬಗಳು ಮತ್ತು ಟ್ರಾನ್ಸ್‌ಫಾರ್ಮರ್‌ಗಳ ಬಳಿ ಓಡಾಡುವಾಗ ಹೆಚ್ಚಿನ ಜಾಗರೂಕತೆ ವಹಿಸಿ. ಮಳೆಯಿಂದಾಗಿ ಶಿಥಿಲಗೊಂಡಿರುವ ಕಟ್ಟಡಗಳ ಗೋಡೆ ಅಥವಾ ಸಜ್ಜುಗಳು ಬೀಳುವ ಸಂಭವವಿರುವುದರಿಂದ ಅಂತಹ ಜಾಗಗಳಿಂದ ದೂರವಿರಿ. ಮರಗಳು ಬಿದ್ದಲ್ಲಿ ಅಥವಾ ಯಾವುದೇ ತುರ್ತು ಪರಿಸ್ಥಿತಿ ಎದುರಾದಲ್ಲಿ ಸಾರ್ವಜನಿಕರು ತಕ್ಷಣವೇ ಸಹಾಯವಾಣಿ ಅಥವಾ ಆಯಾ ವಲಯದ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಕೋರಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+