Bengaluru Rain: ಮೊದಲ ಮಳೆಗೆ ನಗರದಲ್ಲಿ ಹಲವು ಅವಾಂತರ; ಬಿಬಿಎಂಪಿ ವಿರುದ್ಧ ಆಕ್ರೋಶ
ಆರು ತಿಂಗಳ ಸುದೀರ್ಘ ಕಾಯುವಿಕೆ ನಂತರ ಅಂತೂ ಇಂತು ಬೆಂಗಳೂರಿನಲ್ಲಿ ಉತ್ತಮವಾಗಿ ಮಳೆಯಾಗಿದೆ. ತೀರಾ ಹೆಚ್ಚು ಮಳೆಯಾಗದಿದ್ದರೂ, ವಾತಾವರಣ ತಂಪಾಗುವಂತೆ ಮಳೆಯಾಗಿದ್ದು, ಜನರಲ್ಲಿ ನೆಮ್ಮದಿ ತರಿಸಿದೆ.
ಆದರೆ ಆರು ತಿಂಗಳು ಮಳೆ ಬಿಡುವು ಕೊಟ್ಟಿದ್ದರೂ ಬಿಬಿಎಂಪಿ ಮಾತ್ರ ನಗರದಲ್ಲಿ ಮಳೆಯಾದರೆ ಆಗುವ ಸಮಸ್ಯೆಗಳನ್ನು ಬಗೆಹರಿಸುವ ಗೋಜಿಗೆ ಹೋಗಿಲ್ಲ. ಸಾಧಾರಣ ಮಳೆಗೆ ನಗರದ ಹಲವು ಕಡೆ ರಸ್ತೆಗಳು ಜಲಾವೃತವಾಗಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ.

ಹಲವು ಕಡೆಗಳಲ್ಲಿ ಅಂಡರ್ ಪಾಸ್ಗಳಲ್ಲಿ ನೀರು ತುಂಬಿಕೊಂಡಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಇಷ್ಟು ಸಮಯ ಸಿಕ್ಕರೂ ಸಮಸ್ಯೆ ಸರಿಪಡಿಸಲು ಮುಂದಾಗದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಕ್ಸ್ನಲ್ಲಿ ಬೆಂಗಳೂರು ವೆದರ್ ಮ್ಯಾನ್ ಎನ್ನುವ ಬಳಕೆದಾರರು ನೀರು ತುಂಬಿಕೊಂಡಿರುವ ಚಿತ್ರವನ್ನು ಹಂಚಿಕೊಂಡು ಬಿಬಿಎಂಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
Not so Dear BBMP
— Karnataka Weather (@Bnglrweatherman) May 3, 2024
You had 6 months without #BengaluruRains but still you chose to sleep as usual. You didn't clear the drains, repair the roads resulting in traffic jams & flooded roads with normal rains in Bengaluru
We are experiencing hell to travel, which should have been a… pic.twitter.com/DXfXi6cUeZ
ನಾವು ಅನುಭವಿಸುತ್ತೇವೆ ನೀವು ಮಲಗಿ
ಪ್ರೀತಿಯ ಬಿಬಿಎಂಪಿ, ಬೆಂಗಳೂರಿನಲ್ಲಿ ಮಳೆ ಇಲ್ಲದೆ ನೀವು 6 ತಿಂಗಳು ಕಳೆದಿದ್ದೀರಿ ಆದರೆ ನೀವು ಎಂದಿನಂತೆ ಕೆಲಸ ಮಾಡುವ ಬದಲು ಮಲಗಿ ಕಾಲ ಕಳೆದಿದ್ದಾರೆ. ಚರಂಡಿಗಳನ್ನು ತೆರವುಗೊಳಿಸಲಿಲ್ಲ, ರಸ್ತೆಗಳನ್ನು ದುರಸ್ತಿ ಮಾಡಲಿಲ್ಲ, ಇದರಿಂದಾಗಿ ಸಾಮಾನ್ಯ ಮಳೆಗೂ ಟ್ರಾಫಿಕ್ ಜಾಮ್ ಮತ್ತು ರಸ್ತೆಗಳು ಜಲಾವೃತಗೊಂಡಿವೆ, ನಾವು ಪ್ರಯಾಣಿಸಲು ನರಕವನ್ನು ಅನುಭವಿಸುತ್ತಿದ್ದೇವೆ, ಇದು ಮಳೆಯ ಸಮಯದಲ್ಲಿ ಸುಂದರವಾದ ಅನುಭವವಾಗಬೇಕಿತ್ತು. ನಿಮಗೆ ಧನ್ಯವಾದಗಳು, ನಾವು ನಾಗರಿಕರು ತೊಂದರೆ ಅನುಭವಿಸುವಾಗ ನಿದ್ದೆ ಮಾಡಿ ಎಂದು ಹೇಳಿದ್ದಾರೆ.
ಮಳೆಯಿಂದ ಎಲ್ಲೆಲ್ಲಿ ಸಮಸ್ಯೆ?
ಕೆ ಆರ್ ಪುರ ತೂಗು ಸೇತುವೆ ಡಿವೈಡರ್ ಮೇಲೆ ಇಟ್ಟಿರುವ ಕುಂಡಗಳು ಮಳೆಯಿಂದಾಗಿ ಒಡೆದು ರಸ್ತೆ ಮೇಲೆ ಬಿದ್ದಿದ್ದು, ಇದರಿಂದ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಟ್ರಾಫಿಕ್ ಪೊಲೀಸರು ತಕ್ಷಣ ಮಣ್ಣಿನ ಕುಂಡಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.
ಹೊರ ವರ್ತೂಲ ರಸ್ತೆಯ ಹೊರಮಾವು ಅಂಡರ್ ಪಾಸ್ ನಲ್ಲಿ ನೀರು ತುಂಬಿಕೊಂಡು ಸಮಸ್ಯೆ ಉಂಟಾಗಿತ್ತು. ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಸಂಚಾರ ಪೊಲೀಸ್ ಸಿಬ್ಬಂದಿ ಅಭಿಲಾಷ್ ಮಳೆ ನೀರು ಚರಂಡಿಗೆ ಹೋಗುವಂತೆ ಮಾಡುವ ಮೂಲಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ರಾಮಮೂರ್ತಿ ನಗರ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ ಚರಂಡಿಯಲ್ಲಿ ಮಣ್ಣು ಹಾಗೂ ಕಸ ತುಂಬಿರುವುದರಿಂದ ಅನೇಕ ಕಡೆಗಳಲ್ಲಿ ಚರಂಡಿಗೆ ನೀರು ಹೋಗದೆ, ರಸ್ತೆಯಲ್ಲಿ ನೀರು ನಿಂತ ಕಾರಣ ಹೊರಮಾವು ಕಡೆಯಿಂದ ರಾಮಮೂರ್ತಿನಗರ ಕಡೆಗೆ ವಾಹನಗಳ ಸಂಚಾರ ನಿಧಾನವಾಗಿತ್ತು.
ಬಿನ್ನಿಮಿಲ್ ಜಂಕ್ಷನ್ ಬಳಿ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿತ್ತು.
-
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್












Click it and Unblock the Notifications