Bengaluru Rain: ಮಂಗಳೂರು, ಧಾರವಾಡ, ಬೆಳಗಾವಿ, ಚಿಕ್ಕಮಗಳೂರಿನಲ್ಲಿ ಮಳೆ ಆಯ್ತು ಬೆಂಗಳೂರಿನಲ್ಲಿ ಯಾವಾಗ?
ಬೆಂಗಳೂರು ಮಾರ್ಚ್ 24: ರಾಜ್ಯದ ಹಲವೆಡೆ ಮಳೆರಾಯ ಧರೆಗಿಳಿದು ತಂಪೆರೆದಿದ್ದಾನೆ. ಹಲವು ಜಿಲ್ಲೆಗಳು ಬಿರು ಬಿಸಿಲಿಗೆ ಮಳೆರಾಯ ಕೃಪೆಯಿಂದ ಕೊಂಚ ತಣ್ಣಗಾಗಿವೆ. ಆದರೆ ಅದ್ಯಾಕೋ ಬೆಂಗಳೂರೀಗರ ಮೇಲೆ ವರುಣ ಮುನಿಸಿಕೊಂಡಂತೆ ಕಾಣಿಸುತ್ತಿದೆ. ಬೆಂಗಳೂರಿನಲ್ಲಿ ನಿರೀಕ್ಷಿಸಿದಂತೆ ಈ ತಿಂಗಳು ಮಳೆಯೇ ಆಗಿಲ್ಲ.
ಹೌದು.. ಹವಾಮಾನ ಇಲಾಖೆ ಮಾರ್ಚ್ ತಿಂಗಳಲ್ಲಿ ಹಲವು ಬಾರಿ ಬೆಂಗಳೂರಿನಲ್ಲಿ ಮಳೆಯನ್ನು ನಿರೀಕ್ಷಿಸಿತ್ತು. ಆದರೆ ನಿರೀಕ್ಷೆಯಂತೆ ಒಂದೇ ಒಂದು ಭಾಗದಲ್ಲಿ ನಗರ ಮಳೆಯನ್ನು ಕಂಡಿಲ್ಲ. ನೀರಿನ ಬಿಕ್ಕಟ್ಟಿನ ನಡುವೆ ಮಳೆರಾಯನ ಮುನಿಸು ಸಿಲಿಕಾನ್ ಸಿಟಿ ಮಂದಿಗೆ ಆತಂಕ ಹೆಚ್ಚಿಸಿದೆ.

ಜನವರಿಯಿಂದ ನಗರದಲ್ಲಿ ತಾಪಮಾನ ಹೆಚ್ಚಾಗಿದೆ. ಎರಡು ತಿಂಗಳಲ್ಲಿ ಉದ್ಯಾನ ನಗರಿ ಬಿಸಿಲಿಗೆ ಬಸವಳಿದು ಹೋಗಿದೆ. ಹೀಗಾಗಿ ಮಾರ್ಚ್ ತಿಂಗಳಲ್ಲಿ ವರ್ಷದ ಮೊದಲ ಮಳೆಯಾಗುವ ನಿರೀಕ್ಷೆ ಇತ್ತು. ಆದರೆ ಮಾರ್ಚ್ ತಿಂಗಳ ಅಂತ್ಯದಲ್ಲಿರುವಾಗಲೂ ಮಳೆಯಾಗುವ ಯಾವ ಲಕ್ಷಗಳು ಕಾಣಿಸುತ್ತಿಲ್ಲ.
ಕಳೆದ ಒಂದು ವಾರದಿಂದ ಮಂಗಳೂರು, ಧಾರವಾಡ, ಬೆಳಗಾವಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳು ಭರ್ಜರಿ ಮಳೆಯನ್ನು ಕಂಡಿವೆ. ಆದರೆ ಬೆಂಗಳೂರು ಮಾತ್ರ ಕುಡಿಯುವ ನೀರಿನ ಬಿಕ್ಕಟ್ಟಿನ ನಡುವೆ ಮಳೆಯ ಅಭಾವವನ್ನೂ ಎದುರಿಸುತ್ತಿದೆ. ಮಾರ್ಚ್ ಪೂರ್ಣಗೊಳ್ಳಲು ಒಂದು ವಾರವಷ್ಟೇ ಬಾಕಿ ಇದ್ದು, ಈ ವಾರವಾದರೂ ಮಳೆ ಬರುತ್ತಾ ಅಂತ ಜನ ಕಾತುರದಿಂದ ಕಾಯುತ್ತಿದ್ದಾರೆ.
ಜೊತೆಗೆ ಮಾರ್ಚ್ ಕೊನೆ ವಾರದಲ್ಲಿ ಹೋಳಿ ಹಬ್ಬವನ್ನೂ ಆಚರಿಸಲಾಗುತ್ತದೆ. ಇದಕ್ಕೆ ನೀರಿನ ಬಿಕ್ಕಟ್ಟು ಎದುರಾಗಿದ್ದು ವರುಣ ಕೃಪೆ ತೋರುವ ನಂಬಿಕೆಯಿಂದ ಹೋಳಿ ಆಡಲು ಜನ ಸಜ್ಜಾಗಿದ್ದಾರೆ. ಹಾಗಾದರೆ ಬೆಂಗಳೂರಿನಲ್ಲಿ ಮಳೆ ಯಾವಾಗ ಬರುತ್ತದೆ? ಹವಾಮಾನ ಇಲಾಖೆ ಹೇಳುವುದೇನು? ದೇಶದ ಯಾವ ಭಾಗದಲ್ಲಿ ಮಳೆಯಾಗಲಿದೆ ಎಂದು ಈಗ ತಿಳಿಯೋಣ.

ದೇಶದ ಯಾವ ಭಾಗದಲ್ಲಿ ಮಳೆ
ಮಾರ್ಚ್ 24 ರಿಂದ 29 ರವರೆಗೆ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದ ಪ್ರತ್ಯೇಕ ಸ್ಥಳಗಳಲ್ಲಿ ಲಘುವಾಗಿ ಸಾಧಾರಣ ಮಳೆ ಮತ್ತು ಮಿಂಚು ಸಹ ಸಂಭವಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ (IMD)ಯಿಂದ ತಿಳಿದು ಬಂದಿ. ಮಾರ್ಚ್ 25 ಮತ್ತು 26 ರ ನಡುವೆ ಅರುಣಾಚಲ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಬಿಹಾರ, ಜಾರ್ಖಂಡ್ ಮತ್ತು ಮೇಘಾಲಯದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಬಹುದು.
ಬೆಂಗಳೂರಿನಲ್ಲಿ ಮಳೆ ಯಾವಾಗ?
ಮಾರ್ಚ್ 26ರವರೆಗೂ ರಾಜ್ಯದ ಹಲವೆಡೆ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅದರಲ್ಲೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ತುಮಕೂರಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ. ಕೆಲ ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗುತ್ತಿದ್ದು ಮೂರು ದಿನಗಳ ಕಾಲ ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Summer Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಬೇಕಾದ ಸಲಹೆಗಳು ಇಲ್ಲಿವೆ, ಪಾಲಿಸಿ -
Bengaluru Weather: ಬೆಂಗಳೂರಲ್ಲಿ ಬೇಸಿಗೆ ಆರಂಭದಲ್ಲೇ 40 ಡಿಗ್ರಿಯತ್ತ ತಾಪಮಾನ: ಉರಿ ಬಿಸಿಲು, ಸೆಕೆಯಿಂದ ಹೈರಾಣಾದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications