Bengaluru Rain: ಮಂಗಳೂರು, ಧಾರವಾಡ, ಬೆಳಗಾವಿ, ಚಿಕ್ಕಮಗಳೂರಿನಲ್ಲಿ ಮಳೆ ಆಯ್ತು ಬೆಂಗಳೂರಿನಲ್ಲಿ ಯಾವಾಗ?
ಬೆಂಗಳೂರು ಮಾರ್ಚ್ 24: ರಾಜ್ಯದ ಹಲವೆಡೆ ಮಳೆರಾಯ ಧರೆಗಿಳಿದು ತಂಪೆರೆದಿದ್ದಾನೆ. ಹಲವು ಜಿಲ್ಲೆಗಳು ಬಿರು ಬಿಸಿಲಿಗೆ ಮಳೆರಾಯ ಕೃಪೆಯಿಂದ ಕೊಂಚ ತಣ್ಣಗಾಗಿವೆ. ಆದರೆ ಅದ್ಯಾಕೋ ಬೆಂಗಳೂರೀಗರ ಮೇಲೆ ವರುಣ ಮುನಿಸಿಕೊಂಡಂತೆ ಕಾಣಿಸುತ್ತಿದೆ. ಬೆಂಗಳೂರಿನಲ್ಲಿ ನಿರೀಕ್ಷಿಸಿದಂತೆ ಈ ತಿಂಗಳು ಮಳೆಯೇ ಆಗಿಲ್ಲ.
ಹೌದು.. ಹವಾಮಾನ ಇಲಾಖೆ ಮಾರ್ಚ್ ತಿಂಗಳಲ್ಲಿ ಹಲವು ಬಾರಿ ಬೆಂಗಳೂರಿನಲ್ಲಿ ಮಳೆಯನ್ನು ನಿರೀಕ್ಷಿಸಿತ್ತು. ಆದರೆ ನಿರೀಕ್ಷೆಯಂತೆ ಒಂದೇ ಒಂದು ಭಾಗದಲ್ಲಿ ನಗರ ಮಳೆಯನ್ನು ಕಂಡಿಲ್ಲ. ನೀರಿನ ಬಿಕ್ಕಟ್ಟಿನ ನಡುವೆ ಮಳೆರಾಯನ ಮುನಿಸು ಸಿಲಿಕಾನ್ ಸಿಟಿ ಮಂದಿಗೆ ಆತಂಕ ಹೆಚ್ಚಿಸಿದೆ.

ಜನವರಿಯಿಂದ ನಗರದಲ್ಲಿ ತಾಪಮಾನ ಹೆಚ್ಚಾಗಿದೆ. ಎರಡು ತಿಂಗಳಲ್ಲಿ ಉದ್ಯಾನ ನಗರಿ ಬಿಸಿಲಿಗೆ ಬಸವಳಿದು ಹೋಗಿದೆ. ಹೀಗಾಗಿ ಮಾರ್ಚ್ ತಿಂಗಳಲ್ಲಿ ವರ್ಷದ ಮೊದಲ ಮಳೆಯಾಗುವ ನಿರೀಕ್ಷೆ ಇತ್ತು. ಆದರೆ ಮಾರ್ಚ್ ತಿಂಗಳ ಅಂತ್ಯದಲ್ಲಿರುವಾಗಲೂ ಮಳೆಯಾಗುವ ಯಾವ ಲಕ್ಷಗಳು ಕಾಣಿಸುತ್ತಿಲ್ಲ.
ಕಳೆದ ಒಂದು ವಾರದಿಂದ ಮಂಗಳೂರು, ಧಾರವಾಡ, ಬೆಳಗಾವಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳು ಭರ್ಜರಿ ಮಳೆಯನ್ನು ಕಂಡಿವೆ. ಆದರೆ ಬೆಂಗಳೂರು ಮಾತ್ರ ಕುಡಿಯುವ ನೀರಿನ ಬಿಕ್ಕಟ್ಟಿನ ನಡುವೆ ಮಳೆಯ ಅಭಾವವನ್ನೂ ಎದುರಿಸುತ್ತಿದೆ. ಮಾರ್ಚ್ ಪೂರ್ಣಗೊಳ್ಳಲು ಒಂದು ವಾರವಷ್ಟೇ ಬಾಕಿ ಇದ್ದು, ಈ ವಾರವಾದರೂ ಮಳೆ ಬರುತ್ತಾ ಅಂತ ಜನ ಕಾತುರದಿಂದ ಕಾಯುತ್ತಿದ್ದಾರೆ.
ಜೊತೆಗೆ ಮಾರ್ಚ್ ಕೊನೆ ವಾರದಲ್ಲಿ ಹೋಳಿ ಹಬ್ಬವನ್ನೂ ಆಚರಿಸಲಾಗುತ್ತದೆ. ಇದಕ್ಕೆ ನೀರಿನ ಬಿಕ್ಕಟ್ಟು ಎದುರಾಗಿದ್ದು ವರುಣ ಕೃಪೆ ತೋರುವ ನಂಬಿಕೆಯಿಂದ ಹೋಳಿ ಆಡಲು ಜನ ಸಜ್ಜಾಗಿದ್ದಾರೆ. ಹಾಗಾದರೆ ಬೆಂಗಳೂರಿನಲ್ಲಿ ಮಳೆ ಯಾವಾಗ ಬರುತ್ತದೆ? ಹವಾಮಾನ ಇಲಾಖೆ ಹೇಳುವುದೇನು? ದೇಶದ ಯಾವ ಭಾಗದಲ್ಲಿ ಮಳೆಯಾಗಲಿದೆ ಎಂದು ಈಗ ತಿಳಿಯೋಣ.

ದೇಶದ ಯಾವ ಭಾಗದಲ್ಲಿ ಮಳೆ
ಮಾರ್ಚ್ 24 ರಿಂದ 29 ರವರೆಗೆ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದ ಪ್ರತ್ಯೇಕ ಸ್ಥಳಗಳಲ್ಲಿ ಲಘುವಾಗಿ ಸಾಧಾರಣ ಮಳೆ ಮತ್ತು ಮಿಂಚು ಸಹ ಸಂಭವಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ (IMD)ಯಿಂದ ತಿಳಿದು ಬಂದಿ. ಮಾರ್ಚ್ 25 ಮತ್ತು 26 ರ ನಡುವೆ ಅರುಣಾಚಲ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಬಿಹಾರ, ಜಾರ್ಖಂಡ್ ಮತ್ತು ಮೇಘಾಲಯದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಬಹುದು.
ಬೆಂಗಳೂರಿನಲ್ಲಿ ಮಳೆ ಯಾವಾಗ?
ಮಾರ್ಚ್ 26ರವರೆಗೂ ರಾಜ್ಯದ ಹಲವೆಡೆ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅದರಲ್ಲೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ತುಮಕೂರಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ. ಕೆಲ ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗುತ್ತಿದ್ದು ಮೂರು ದಿನಗಳ ಕಾಲ ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವ ಮೊದಲು ತಿಳಿದುಕೊಳ್ಳಬೇಕಾದ ವಿಷಯಗಳು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications