Bengaluru Rains: ನಗರದ 44 ವಾರ್ಡ್ಗಳಲ್ಲಿ ಮಳೆ ಸಿಂಚನ, ನಾಳೆ ಭರ್ಜರಿ ಮಳೆ ಸಾಧ್ಯತೆ
ಬೆಂಗಳೂರು, ಜುಲೈ 03: ಬೆಂಗಳೂರಲ್ಲಿ ಬುಧವಾರ ಮಧ್ಯಾಹ್ನ ಜುಲೈ ತಿಂಗಳ ಮೊದಲ ಮಳೆಯ ಸಿಂಚನವಾಯಿತು. ಇದರೊಂದಿಗೆ ಬೆಂಗಳೂರು ಬಿಸಿಲಿಗೂ ಸಾಕ್ಷಿ ಆಯಿತು. ನೋಡ ನೋಡುತ್ತಿದ್ದಂತೆ ಬಿಬಿಎಂಪಿ ವ್ಯಾಪ್ತಿಯ ಸುಮಾರು 44 ವಾರ್ಡ್ಗಳಲ್ಲಿ ಜಿಟಿ ಜಿಟಿ ಮಳೆ ಆಯಿತು. ನಾಳೆ ಗುರುವಾರ ನಗರದ ವಿವಿಧ ಬಡಾವಣೆಗಳಲ್ಲಿ ಭರ್ಜರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು KSNDMC ಮಾಹಿತಿ ನೀಡಿದೆ.
ರಾಜ್ಯದ ಕರಾವಳಿಗೆ ಹತ್ತಿರದಲ್ಲಿ ಅರಬ್ಬಿ ಸಮುದ್ರದಲ್ಲಿ ವೈಪರಿತ್ಯಗಳು ಉಂಟಾದ ಹಿನ್ನೆಲೆಯಲ್ಲಿ ಮುಂಗಾರು ಚುರುಕುಗೊಂಡಿದೆ. ಕೆಲವು ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ, ಬೆಂಗಳೂರು ನಗರದಲ್ಲೂ ಕೃಪೆ ತೋರಿದ್ದಾರೆ. ಮುಂದಿನ ದಿನಗಳಲ್ಲಿ ಉತ್ತಮವಾಗಿ ಮಳೆ ಸುರಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ.

ವಿವಿಧ ಬಡಾವಣೆಗಳಲ್ಲಿ ಬಿದ್ದ ಮಳೆ ವಿವರ
ಬುಧವಾರ ಮಧ್ಯಾಹ್ನ ಬೆಂಗಳೂರಿನ ಕೋರಮಂಗಲ, ಕೋಣನಕುಂಟೆ, ಹೆಮ್ಮಿಗೆಪುರ, ಜ್ಞಾನಭಾರತಿ, ಆರ್ಆರ್ ನಗರ, ಸುಧಾಮ್ನಗರ, ಮಹಾದೇವಪುರ ವಲಯದ ಹಲವು ಬಡಾವಣೆಗಳು, ವರ್ತೂರು, ಬೆಳ್ಳಂದೂರು, ಓಕಳಿಪುರಂ, ರಾಜಕುಮಾರ್ ರಸ್ತೆ, ವಿಜಯನಗರ, ಗಿರಿನಗರ, ದೀಪಾಂಜಲಿ ನಗರ, ಹಂಪಿನಗರ, ನಾಯಂಡಹಳ್ಳಿ, ಚಾಮರಾಜಪೇಟೆ ಸೇರಿದಂತೆ ಅನೇಕ ಬಡಾವಣೆಗಳಲ್ಲಿ ದಿಢೀರ್ ಮಳೆ ಬಂತು ಮಳೆ ಬಂದು ನಿಂತ ಕೆಲವೇ ಕ್ಷಣಗಳಲ್ಲಿ ಕಣ್ಣಿಗೆ ಕುಕ್ಕುವಂತಹ ಬಿಸಲಿನ ದರ್ಶನವಾಯಿತು. ನಂತರ ಮೋಡ ಕವಿದ ಮಬ್ಬು ವಾತವರಣ ಮರೆಯಾಗಿ ಎಂದಿನಂತೆ ಸಹಜ ವಾತಾವರಣ ನಿರ್ಮಾಣವಾಯಿತು. ಒಂದಷ್ಟು ಕಡೆಗಳಲ್ಲಿ ಜೋರು ಮಳೆ ದಾಖಲಾಗಿದೆ. ಉಳಿದಂತೆ ಎಲ್ಲಿಯೂ ಹೇಳಿಕೊಳ್ಳುವಂತಹ ದಾಖಲೆಯ ಮಳೆ ಆಗಿಲ್ಲ.
ಆಗಾಗ ಬಂದ ಜಿಟಿ ಜಿಟಿ ಮಳೆಗೆ ರಸ್ತೆಯಲ್ಲಿ ಅಲ್ಲಲ್ಲಿ ನೀರು ನಿಂತಿದ್ದ ಬಿಟ್ಟರೆ ಎಲ್ಲಿಯೂ ತೊಂದರೆ ಆಗಿಲ್ಲ. ಇಂದು ತಡರಾತ್ರಿ ಕೆಲವು ಬಡಾವಣೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಉಳಿದಂತೆ ನಾಳೆ ಗುರುವಾರ ಜೋರು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ವರದಿ ಮಾಡಿದೆ.
ನಗರದಲ್ಲಿ ಜುಲೈ 09ರವರೆಗೆ ಹಗುರ ಮಳೆ
ಬೆಂಗಳೂರಿನಲ್ಲಿ ಮುಂದಿನ ಜುಲೈ 09ರವರೆಗೆ ಆಗಾಗ ಮಳೆಯ ದರ್ಶನವಾಗಲಿದೆ. ಈ ಪೈಕಿ ನಾಳೆ ಗುರುವಾರ ಜುಲೈ 04ರಂದು ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ. ಇನ್ನೂ ಅವಧಿಯಲ್ಲಿ ನಗರದಲ್ಲಿ ಗರಿಷ್ಠ ತಾಪಮಾನ 30ರಿಂದ 27 ಡಿಗ್ರಿ ಸೆಲ್ಸಿಯಸ್ ಕಂಡು ಬಂದರೆ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಕಂಡು ಬರಲಿದೆ.

ರಾಜ್ಯದ ಕರಾವಳಿಗೆ ಭಾರೀ ಮಳೆ
ಕರ್ನಾಟಕದಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆ ಮುನ್ಸೂಚನೆ ಇದೆ. ಮಲೆನಾಡಿನ ಜಿಲ್ಲೆಗಳಲ್ಲಿ ಅಬ್ಬರಿಸುತ್ತಿದ್ದ ಮುಂಗಾರು ಮಳೆಯ ಆರ್ಭಟ ಇಳಿಕೆ ಆಗಿದೆ. ತಕ್ಕ ಮಟ್ಟಿಗೆ ಸಾಧಾರಣ ಮಳೆ ಆಗಲಿದೆ. ಉತ್ತರ ಕರ್ನಾಟಕದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications