Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
ಇತ್ತೀಚಿನ ದಿನಗಳಲ್ಲಿ ಸಾಕು ಪ್ರಾಣಿಗಳ ಜೊತೆ ಮನುಷ್ಯ ಸಾಕಷ್ಟು ಬಾಂಧವ್ಯ ಬೆಳೆಸಿಕೊಳ್ಳುತ್ತಿದ್ದಾನೆ, ನಾಯಿ, ಬೆಕ್ಕುಗಳು ಬರೀ ಸಾಕು ಪ್ರಾಣಿಗಳಾಗಿರದೆ ಮನೆಯ ಸದಸ್ಯರೇ ಅನ್ನುವಂತಾಗಿವಿದೆ. ನಾಯಿಯನ್ನು ವಾಕಿಂಗ್ ಕರೆದುಕೊಂಡು ಹೋಗುವುದು, ಆಟವಾಡುವುದು, ಅವಕ್ಕೂ ಸ್ನಾನ, ಕೇರಿಂಗ್ ಎಲ್ಲಾ ನೋಡಬಹುದು.
ಆದರೆ ಇಲ್ಲೊಬ್ಬರು ತಮ್ಮ ಮುದ್ದಿನ ನಾಯಿಗೆ ಬೆಂಗಳೂರಿನ ಮೊದಲ ಮಳೆಯನ್ನು ತೋರಿಸಿ ಸಂಭ್ರಮಿಸಿದ್ದಾರೆ. ಸುದೀರ್ಘ ವಿರಾಮದ ಬಳಿಕ ಬೆಂಗಳೂರಿನ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಿತ್ತು, ಮಕ್ಕಳು ಕೂಡ ಮಳೆಯಲ್ಲೇ ಕುಣಿದು ಸಂಭ್ರಮಿಸಿದ್ದ ವಿಡಿಯೋಗಳು ವೈರಲ್ ಆಗಿದ್ದವು.

ಸಾಮಾಜಿಕ ಮಾಧ್ಯಮದಲ್ಲಿ ಬೆಂಗಳೂರಿನ ವ್ಯಕ್ತಿಯೊಬ್ಬರು ತಮ್ಮ ಮುದ್ದಿನ ನಾಯಿಗೆ ಮಳೆಯನ್ನು ತೋರಿಸುತ್ತಿರುವ ವಿಡಿಯೋ ಹಂಚಿಕೊಂಡಿದ್ದು ಸಖತ್ ವೈರಲ್ ಆಗುತ್ತಿದೆ. ವಿಡಿಯೋ ನೋಡಿದ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿಡಿಯೋದಲ್ಲಿ ಏನಿದೆ?
ವೈರಲ್ ಆಗಿರುವ ವಿಡಿಯೋದಲ್ಲಿ, ಒಬ್ಬ ವ್ಯಕ್ತಿ ತನ್ನ ಸಾಕುಪ್ರಾಣಿಗಳೊಂದಿಗೆ ಬಾಲ್ಕನಿಯಲ್ಲಿ ನಿಂತು ಮಳೆಯನ್ನು ತೋರಿಸುವುದನ್ನು ನೋಡಬಹುದು. ನಾಯಿಯನ್ನು ಎತ್ತಿಕೊಂಡು ಮಳೆಯನ್ನು ತೋರಿಸುತ್ತಿದ್ದು, ಮೊದಲ ಮಳೆಯ ಖುಷಿಯನ್ನು ಅನುಭವಿಸುತ್ತಿದ್ದಾರೆ.
ನಾಯಿಯು ಮಳೆಗೆ ಹೆದರಿಕೊಂಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಬಳಿಕ ನಾಯಿ ಮಳೆಯನ್ನು ನೋಡುವುದನ್ನು ವಿಡಿಯೋದಲ್ಲಿ ಕಾಣಬಹುದು. ನಾಯಿಗೆ ಮಾಲೀಕರು ಟಿಂಗು ಎಂದು ಹೆಸರಿಟ್ಟಿದ್ದು, "ಟಿಂಗುವಿನ ಮೊದಲ ಮಳೆಯ ಅನುಭವ" ಎಂದು ವಿಡಿಯೋ ಮೇಲೆ ಶಿರ್ಷಿಕೆಯನ್ನು ನೋಡಬಹುದಹು.
ಇನ್ಸ್ಟಾಗ್ರಾಂ ಹ್ಯಾಂಡಲ್ @oscar_wonderpup ನಲ್ಲಿ ಈ ಸುಂದರ ವಿಡಿಯೋ ಹಂಚಿಕೊಳ್ಳಲಾಗಿದೆ. ಕೊನೆಗೂ ಬೆಂಗಳೂರಿನಲ್ಲಿ ಮಳೆ ಬಂದಿದೆ ಎಂದು ಅವರು ಬರೆದುಕೊಂಡಿದ್ದಾರೆ.
ಏಪ್ರಿಲ್ 20 ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಇದುವರೆಗೂ ಪೋಸ್ಟ್ಗೆ 41,000 ಕ್ಕೂ ಹೆಚ್ಚು ಲೈಕ್ಗಳು ಬಂದಿವೆ. ಸಾಕಷ್ಟು ಮಂದಿ ಕಾಮೆಂಟ್ ಮಾಡುವ ಮೂಲಕ ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಾಣಿ ಪ್ರಿಯರು ಹೃದಯ ಎಮೋಜಿಗಳೊಂದಿಗೆ ತುಂಬಿದ್ದಾರೆ ಮತ್ತು ಹಲವಾರು ಜನರು ಇಂತಹ ಹೃದಯಸ್ಪರ್ಶಿ ದೃಶ್ಯಗಳು ಬೆಂಗಳೂರಿನಲ್ಲಿ ಸಾಕಷ್ಟು ಸಾಮಾನ್ಯವಾಗಿದೆ ಎಂದು ಹೇಳಿದ್ದಾರೆ.
"ಅಂತಿಮವಾಗಿ ಬೆಂಗಳೂರು ಬೆಂಗಳೂರಾಗಿದೆ ... ಓಸ್ಕು ಮತ್ತು ಟಿಂಗು ಅವರ ವೀಡಿಯೊ ಅದನ್ನು ಹೆಚ್ಚು ಸಂತೋಷಪಡಿಸಿದೆ" ಎಂದು ವ್ಯಕ್ತಿಯೊಬ್ಬರು ಹೇಳಿದ್ದಾರೆ. "ಎರಡೂ ತುಂಬಾ ಮುದ್ದಾಗಿದೆ" ಎಂದು ಮತ್ತೊಬ್ಬರು ಹೇಳಿದ್ದಾರೆ.
ಎರಡು ದಿನ ಬೆಂಗಳೂರಿನ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾದ ಬಳಿಕ ಬಿಸಿಲು ಮತ್ತೆ ಹೆಚ್ಚಾಗಿದೆ. ಮೇ ಮೊದಲ ವಾರ ನಗರದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ










Click it and Unblock the Notifications