Get Updates
Get notified of breaking news, exclusive insights, and must-see stories!

Bengaluru Rain: ಸೋಮವಾರದ ಮಳೆಗೆ ರಾಜಧಾನಿ ರಸ್ತೆಗಳು ಜಲಾವೃತ: ಇಂದೂ ಕೂಡ ವ್ಯಾಪಕ ಮಳೆ ಸಾಧ್ಯತೆ

ಬೆಂಗಳೂರು, ಜೂನ್ 13: ಸೋಮವಾರ ಸಂಜೆ ಬೆಂಗಳೂರು ನಗರದಲ್ಲಿ ವ್ಯಾಪಕ ಮಳೆಯಾಗಿದ್ದು, ಹಲವು ರಸ್ತೆಗಳು ಜಲಾವೃತಗೊಂಡು, ವಾಹನ ಸವಾರರು ಪರದಾಡುವಂತಾಯಿತು. ನಗರದ ಹಲವು ಭಾಗಗಳಲ್ಲಿ ಸಂಜೆ ಮಳೆಯಾದ ಕಾರಣ ಟ್ರಾಫಿಕ್ ಸಮಸ್ಯೆಯಿಂದಾಗಿ ಜನ ಹೈರಾಣಾದರು.

ಕಳೆದ 24 ಗಂಟೆಯಲ್ಲಿ ಮಹದೇವಪುರದ ರಾಮಮೂರ್ತಿ ನಗರದಲ್ಲಿ 94 ಮಿ.ಮೀ. ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ. ಕೆಲವು ಗಂಟೆಗಳ ಮಳೆಗೆ ಬೆಂಗಳೂರು ರಸ್ತೆಗಳು ಕೆರೆಗಳಂತಾಗಿದ್ದವು, ಹಲವು ಭಾಗಗಳಲ್ಲಿ ಅಂಡರ್ ಪಾಸ್‌ಗಳಲ್ಲಿ ನೀರು ತುಂಬಿದ್ದರಿಂದ ಸುಗಮ ಸಂಚಾರಕ್ಕೆ ಭಾರಿ ತೊಂದರೆಯಾತ್ತು. ಶಾಂತಿ ನಗರ, ಕೋರಮಂಗಲ, ಲಾಲ್ ಬಾಗ್, ವಿಲ್ಸನ್ ಗಾರ್ಡನ್, ಆಡುಗೋಡಿ, ಮಾರತಹಳ್ಳಿ, ಲಗ್ಗೆರೆ, ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ ಭಾಗದಲ್ಲಿ ಉತ್ತಮ ಮಳೆಯಾಗಿದೆ.

 Bengaluru Rain: Many Roads And underpasses Are Waterlogged, Moderate Rain Is Expected On Tuesday

ನಗರದ ಹೊರವರ್ತುಲ ರಸ್ತೆಯ ಕಾಡು ಬೀಸನಹಳ್ಳಿ ಕೆಳ ಸೇತುವೆಯಲ್ಲಿ ನೀರು ತುಂಬಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆಯಿಂಟಾದ ಕಾರಣ ಟ್ರಾಫಿಕ್ ಸಮಸ್ಯೆ ತೀವ್ರವಾಗಿತ್ತು. ವೈಟ್‌ಫೀಲ್ಡ್ ಮುಖ್ಯರಸ್ತೆಯಲ್ಲಿ ನೀರು ತುಂಬಿಕೊಂಡ ಕಾರಣ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯುಂಟಾಗಿತ್ತು.

ವರ್ತೂರು ಕೋಟು, ವೈಟ್‌ಫೀಲ್ಡ್‌ನ ನೆಕ್ಸಸ್ ಮಾಲ್ ರಸ್ತೆಗಳಲ್ಲಿ ಕೂಡ ನೀರು ತುಂಬಿದ್ದರಿಂದ ವಾಹನ ಸವಾರರು ಪರದಾಡಿದರು. ಸಂಜೆ ವೇಳೆ ಮಳೆ ಬಂದಿದ್ದರಿಂದ ಜನರಿಗೆ ರಸ್ತೆ ಗುಂಡಿಗಳ ಭಯ ಕೂಡ ಕಾಡಿತ್ತು, ರಸ್ತೆಗಳಲ್ಲಿ ನೀರು ತುಂಬಿದ್ದರಿಂದ ಎಲ್ಲೆಲ್ಲಿ ಗುಂಡಿಗಳಿವೆ ಎನ್ನುವುದು ತಿಳಿಯದೇ ಜೀವ ಕೈಯಲ್ಲಿಡಿದು ವಾಹನ ಸಂಚಾರ ಮಾಡಿದರು.

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ, ಫೋಟೊ ಹಂಚಿಕೆ

ಸೋಮವಾರದ ಮಳೆಯಿಂದ ನಗರದಲ್ಲಿ ಉಂಟಾದ ಹಲವು ಸಮಸ್ಯೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದು, ಬಿಬಿಎಂಪಿ, ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವೈಜ್ಞಾನಿಕ ಕಾಮಗಾರಿ, ಯೋಜನೆಗಳೇ ಇಂತಹ ಸಮಸ್ಯೆಗೆ ಕಾರಣ, ಪ್ರತಿ ವರ್ಷ ಮಳೆಗಾಲದಲ್ಲಿ ಸಮಸ್ಯೆಯಾಗುತ್ತಿದ್ದರು, ಶಾಶ್ವತ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಹಲವು ಕಡೆಗಳಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಲಾಗಿದೆ. ಕಳೆದ ಬಾರಿ ಮಳೆಯಿಂದ ಪ್ರವಾಹ ಸ್ಥಿತಿ ಉಂಟಾದ ಬಳಿಕ ಎಚ್ಚೆತ್ತಿದ್ದ ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ್ದರು, ನಂತರು ಕಾಮಗಾರಿ ನಿಲ್ಲಿಸಲಾಗಿತ್ತು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮತ್ತೆ ರಾಜಕಾಲುವೆ ತೆರವಿಗೆ ಮುಂದಾಗಿದ್ದು, ಶೀಘ್ರದಲ್ಲೇ ತೆರವು ಕಾರ್ಯಾಚರಣೆ ಮಾಡುವುದಾಗಿ ಹೇಳಿದ್ದಾರೆ.

ಇಂದೂ ಕೂಡ ಮಳೆ ಸಾಧ್ಯತೆ

ಇನ್ನು ಮಂಗಳವಾರ ಕೂಡ ಬೆಂಗಳೂರು ನಗರದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನಗಳ ಕಾಲ ನಗರದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಬೀಳಲಿದೆ ಎಂದು ತಿಳಿಸಿದೆ.

ಸಂಜೆ ವೇಳೆಗೆ ಮಳೆ ಆರಂಭವಾಗುವ ಸಾಧ್ಯತೆ ಹೆಚ್ಚಾಗಿದ್ದು, ದ್ವಿಚಕ್ರ ವಾಹನ ಸವಾರರು ಆದಷ್ಟು ಬೇಗ ಮನೆ ಸೇರಿಕೊಳ್ಳುವುದು ಉತ್ತಮವಾಗಿದೆ. ಇನ್ನು ಅಂಡರ್ ಪಾಸ್‌ಗಳಲ್ಲಿ ಬಹಳ ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಮನವಿ ಮಾಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+