Bengaluru weather: ಬೆಂಗಳೂರಿನಲ್ಲಿ ಭಾನುವಾರ ಸುರಿದ ಲಘು ಮಳೆ, ಜುಲೈ 6ರವರೆಗಿನ ಹವಾಮಾನ ವರದಿ
ಬೆಂಗಳೂರು, ಜೂನ್ 30: ಬೆಂಗಳೂರಿನಲ್ಲಿ ಭಾನುವಾರವು ಮುಂಗಾರು ಮಳೆ ಮುಂದುವರಿದಿದ್ದು, ಕೆಲವೆಡೆ ಜೋರು ಮಳೆ ಸುರಿದಿದೆ. ಇಡೀ ದಿನ ಬಿಸಿಲಿನ ದರ್ಶನ ಅಪರೂಪವಾಗಿತ್ತು. ಆಗಾಗ ಬಂದ ಜಡಿ ಮಳೆಗೆ ವಾಹನ ಸವಾರರು, ತೊಂದರೆ ಅನುಭವಿಸಿದರು.
ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಇದೇ ರೀತಿಯ ವಾತಾವರಣ ಎರಡು ವಾರದಿಂದ ಮುಂದುವರಿದಿದೆ. ಆಗಾಗ ಹಗುರ ಮಳೆ ಸಹಿತ ಬಿಸಿಲಿನ ದರ್ಶನವು ಆಗುತ್ತಿದೆ. ಇಂದು ಭಾನುವಾರ ಸಂಜೆ ವಿಜಯನಗರ, ದೀಪಾಂಜಲಿನಗರ, ನಾಯಂಡಹಳ್ಳಿ, ಹಂಪಿನಗರ, ಚಂದ್ರಾಲೇಔಟ್, ಮೆಜೆಸ್ಟಿಕ್ ಸುತ್ತಮುತ್ತ, ಚಾಮರಾಜಪೇಟೆ, ಹೆಬ್ಬಾಳ, ಕೋರಮಂಗಲ ಹಾಗೂ ಇನ್ನಿತರ ಬಡಾವಣೆಗಳಲ್ಲಿ ಲಘು ಮಳೆ ಉಂಟಾಯಿತು.

ಆಗಾಗ ಬರುತ್ತಿದ್ದ ಮಳೆಗೆ ಜನರು ಮಳೆಯಿಂದ ರಕ್ಷಿಸಿಕೊಳ್ಳಲು ಮೇಲ್ಸೇತುವೆ ಕೆಳಗೆ, ಮೆಟ್ರೋ ವಯಾಡಕ್ಟ ಕೆಳಗೆ ನಿಂತಿದ್ದು ಕಂಡು ಬಂತು. ಕೆಲವು ರಸ್ತೆಗಳ ಮೇಲೆ ನೀರು ನಿಂತು, ಕೆಲವೆಡೆ ಸಿಗ್ನಲ್ಗಳಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಯಿತು.
ಸಂಜೆ ವೇಳೆ ರಸ್ತೆ ಅಕ್ಕಪಕ್ಕದ ವ್ಯಾಪಾರಕ್ಕೆ ಹೊಡೆತ ಬಿದ್ದಿದ್ದು, ಜಿಟಿ ಜಿಟಿ ಮಳೆಗೆ ಗ್ರಾಹಕರು ಇಲ್ಲದೇ ಅಂಗಡಿ ಮುಂಗಟ್ಟುಗಳು ಬಣಗುಡಿದವು. ರಜಾದಿನವಾದ್ದರಿಂದ ಇಂದು ಮೋಜು ಮಸ್ತಿಗೆ ಪ್ಲಾನ್ ಮಾಡಿಕೊಂಡಿದ್ದವರಿಗೆ ಮಳೆ ನಿರಾಸಿ ತಂದೊಡ್ಡಿತು.
ಜುಲೈ 06 ರವರೆಗೆ ಮಳೆಯ ದರ್ಶನ
ಮುಂದಿನ ಒಂದು ವಾರ ಬೆಂಗಳೂರಿನಲ್ಲಿ ಜೋರು ಮಳೆ ಸುರಿಯುವ ಸಾಧ್ಯತೆ ಇದೆ. ಜುಲೈ 06 ರವರೆಗೆ ನಗರದಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಬರಲಿದೆ. ಕೆಲವೆಡೆ ಧಾರಾಕಾರವಾಗಿ ಮಳೆ ಅಬ್ಬರಿಸಲಿದ್ದು, ಮೋಡ ಕವಿದ ವಾತಾವರಣ ಕಂಡು ಬರಲಿದೆ.
ರಾಜ್ಯದ ಈ ಜಿಲ್ಲೆಗಳಿಗೂ ಭಾರೀ ಮಳೆ
ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ಕಾಲ ಅತ್ಯಧಿಕ ಮಳೆ ಬರಲಿದೆ. ಈ ಪೈಕಿ ಮುಂದಿನ 48 ಗಂಟೆ ಕರಾವಳಿಯ ಮೂರು ಜಿಲ್ಲೆ ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಿಗೆ ಭಾರೀ ಮಳೆ ಬರುವ ಹಿನ್ನೆಲೆಯಲ್ಲಿ ಒಟ್ಟು ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಈ ಆರು ಜಿಲ್ಲೆಗಳು ಬಿಟ್ಟು ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣೆ, ಕೆಲವೊಮ್ಮೆ ಧಾರಾಕಾರ ಮಳೆ ಬರುವ ನಿರೀಕ್ಷೆ ಇದೆ. ರಾಜ್ಯಾದ್ಯಂತ ಮುಂಗಾರು ಚುರುಕಿದ್ದು, ದಕ್ಷಿಣ ಒಳನಾಡು, ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಉತ್ತರ ಕರ್ನಾಟಕದಲ್ಲಿ ಒಂದೆರಡು ಕಡೆ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications