Bengaluru Rain: ಬೆಂಗಳೂರಿಗೆ ಆಗಸ್ಟ್ 14ರವರೆಗೆ ವ್ಯಾಪಕ ಮಳೆ ಮುನ್ಸೂಚನೆ
ಬೆಂಗಳೂರು, ಆಗಸ್ಟ್ 08: ಬೆಂಗಳೂರಿನಲ್ಲಿ ವಿವಿಧ ಬಡಾವಣೆಗಳಲ್ಲಿ ಗುರುವಾರ ಮಟ ಮಟ ಮಧ್ಯಾಹ್ನವೇ ಜೋರು ಮಳೆಯ ಆಗಮನವಾಯಿತು. ನೋಡ ನೋಡುತ್ತಿದ್ದಂತೆ ಜಿಟಿ ಜಿಟಿ ಮಳೆ ಸುರಿಯಿತು. ಈ ಮೂಲಕ ಬೆಂಗಳೂರಿನಲ್ಲೂ ಮುಂಗಾರು ಮಳೆ ಚುರುಕುಗೊಳ್ಳುವ ಮುನ್ಸೂಚನೆ ನೀಡಿದೆ. ನಗರದಲ್ಲಿ ಇನ್ನೂ ಒಂದು ವಾರಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಗುರುವಾರ ಮಾತ್ರವಲ್ಲದೇ, ನೆನ್ನೆ ಬುಧವಾರ ನಗರದ ಹಲವು ಕಡೆಗಳಲ್ಲಿ ಉತ್ತಮ ಮಳೆ ಆಗಿದೆ. ಹೀಗಾಗಿ ವಾತಾವರಣ ತಂಪಿನಿಂದ ಕೂಡಿದೆ. ನೆನ್ನೆ ಹೆರೋಹಳ್ಳಿಯಲ್ಲಿ12 ಮಿಲಿ ಮೀಟರ್ ಮಳೆ, ಹೆಚ್ ಗೊಲ್ಲಹಳ್ಳಿ ಮತ್ತು ಚಾಮರಾಜಪೇಟೆಯಲ್ಲಿ ತಲಾ 10.5 ಮಿಲಿ ಮೀಟರ್ ಮಳೆ ಆಗಿದೆ. ಉಳಿದೆಡೆ ಹಗುರ ಮಳೆ ದಾಖಲಾಗಿದೆ.

ಕಳೆದ 48 ಗಂಟೆಯಿಂದ ನಗರದಲ್ಲಿ ಚಳಿಯ ವಾತಾವರಣದಲ್ಲಿ ಏರಿಕೆ ಆಗಿದ್ದು, ತಾಪಮಾನದಲ್ಲಿ ಇಳಿಕೆ ಆಗಿದೆ. ಗುರುವಾರ ಮಧ್ಯಾಹ್ನ ಕೋರಮಂಗಲ, ಮಡಿವಾಳ, ಡೈರಿ ವೃತ್ತ, ದೊಮ್ಮಲೂರು, ಇಂದಿರಾನಗರ, ಎಂಜಿ ರಸ್ತೆ, ಹೆಬ್ಬಾಳ, ಯಲಹಂಕ, ಹಳೆ ಮದ್ರಾಸ್ ರಸ್ತೆ, ಯಲಚೇನಹಳ್ಳಿ, ರಾಗಿಗುಡ್ಡ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹಲವು ಕಡೆಗಳಲ್ಲಿ ಹಗುರ ಮಳೆ ಸುರಿದಿದೆ.
ಹವಾಮಾನ ಇಲಾಖೆ ಪ್ರಕಾರ, ಆಗಸ್ಟ್ 14ರವರೆಗೆ ಸಿಲಿಕಾನ್ ಸಿಟಿಯಲ್ಲಿ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ. ನಿತ್ಯ ಕೆಲ ಕಾಲ ಬಿಸಿಲಿನ ದರ್ಶನವಾದರೂ ಇಡೀ ದಿನ ತೇವಭರಿತ ಗಾಳಿ ಬೀಸಲಿದೆ. ಆಗಾಗ ತುಂತುರು ಮಳೆ ಬಂದು ಹೋಗಲಿದೆ. ಮಳೆ ಮಧ್ಯಾಹ್ನ ಇಲ್ಲವೇ ಸಂಜೆ, ಕೆಲವೊಮ್ಮೆ ತಡರಾತ್ರಿ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಮಳೆಗೆ ಬಂದಾಗೆಲ್ಲ ವಾಟರ್ಲಾಗಿಂಗ್ ಸಮಸ್ಯೆ ಉಲ್ಬಣ
ನಗರದಲ್ಲಿ ಕಳೆದ ಸೋಮವಾರ ಸುರಿದ ಭಾರೀ ಮಳೆಗೆ ಅನೇಕ ಕಡೆಗಳಲ್ಲಿ ವಾಟರ್ಲಾಗಿಂಗ್ ಸಮಸ್ಯೆ ಉಂಟಾಯಿತು. ರಸ್ತೆ ಪಕ್ಕದಲ್ಲಿ ಸರಾಗವಾಗಿ ಮಳೆ ನೀರು ಹರಿದು ಹೋಗದೇ ಅಲ್ಲಲ್ಲಿಯೇ ರಸ್ತೆಗಳ ಮೇಲೆ ನಿಂತ ಪರಿಣಾಮ ವಾಹನ ಸವಾರರು ಭಯದಲ್ಲಿಯೇ ಸಂಚರಿಸಬೇಕಾಯಿತು.
ಕೇವಲ ಹತ್ತು ನಿಮಿಷ ಮಳೆಗೆ ನಗರದ ಪ್ರಮುಖ ರಸ್ತೇಗಳೆ ಜಲಾವೃತಗೊಳ್ಳತ್ತವೆ. ರಸ್ತೆಗೆ ಬಿದ್ದ ಮಳೆ ನೀರು ಸರಾಗವಾಗಿ ರಾಜಕಾಲುವೆಗೆ ಹರಿದು ಹೋಗುತ್ತಿಲ್ಲ. ಇದೆಲ್ಲ ನಿರ್ವಹಿಸಬೇಕಾದ ಬಿಬಿಎಂಪಿ ಏನು ಮಾಡುತ್ತಿದೆ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ರಾಜ್ಯದ ವಿವಿಧೆಡೆ ಮಳೆ ಮುಂದುವರಿಕೆ
ಅರಬ್ಬಿ ಸಮುದ್ರದಲ್ಲಿನ ಹವಾಮಾನದಲ್ಲಿ ಬದಲಾವಣೆಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ಮಲೆನಾಡು ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆ ಮುಂದುವರಿದಿದೆ. ಹಾವೇರಿ, ಬೆಳಗಾವಿ, ಧಾರವಾಡ, ವಿಜಯಪುರ ಸೇರಿದಂತೆ ಒಂದಷ್ಟು ಜಿಲ್ಲೆಗಳಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಮಳೆ ಸುರಿಯುತ್ತಿದೆ. ನದಿಗಳು ಭರ್ತಿಯಾಗಿದ್ದು, ಕೆಲವೆಡೆ ಪ್ರವಾಹ ಭೀತಿ, ಸಂಕಷ್ಟಗಳು ಮುಂದುವರಿದಿವೆ.
ಮುಂದಿನ ಮೂರು ದಿನ ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಜೋರು ಮಳೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಹಲವೆಡೆ ಸಾಧಾರಣ ಮಳೆ ಮುಂದುವರಿಯಲಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು












Click it and Unblock the Notifications