ಸ್ವಚ್ಛತೆಯಲ್ಲಿ ಬೆಂಗಳೂರಿಗೆ 43ನೇ ರ್ಯಾಂಕಿಂಗ್: ಮೋಹನ್ ದಾಸ್ ಪೈ ಆಕ್ರೋಶ
ಬೆಂಗಳೂರು, ಅಕ್ಟೋಬರ್ 04: ರಾಷ್ಟ್ರ ಮಟ್ಟದ ಸ್ವಚ್ಛ ಸರ್ವೇಕ್ಷಣಾ ಸ್ವಚ್ಛತಾ ಶ್ರೇಯಾಂಕ ಪಟ್ಟಿಯ ಕಸಮುಕ್ತ ನಗರ ವಿಭಾಗದಲ್ಲಿ ಕರ್ನಾಟಕ ರಾಜಧಾನಿ ಬೆಂಗಳೂರು 45ರಲ್ಲಿ 43ನೇ ಸ್ಥಾನ ಪಡೆದಿರುವುದಕ್ಕೆ ಉದ್ಯಮಿ ಟಿವಿ ಮೋಹನ್ ದಾಸ್ ಪೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೊಂದು ನಾಚಿಕೆ ಗೇಡಿನ ಸಂಗತಿ ಎಂದು ಹೇಳಿದ್ದಾರೆ.
ಈ ಕುರಿತು ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಮೋಹನ್ ದಾಸ್ ಪೈ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸತೋಷ್ ಮತ್ತು ಬೆಂಗಳೂರು ಸಂಸದರಾದ ಪಿ.ಸಿ. ಮೋಹನ್ ಮ ಹಾಗೂ ತೇಜಸ್ವಿ ಸೂರ್ಯ, 'ನಮ್ಮ ಶಾಸಕರು ಮತ್ತು ಸಂಸದರು ನಮ್ಮನ್ನು ವಿಫಲಗೊಳಿಸಿದ್ದಾರೆ. ಅನೇಕ ಶಾಸಕರು ಭ್ರಷ್ಟರಾಗಿದ್ದಾರೆ.

ಬೆಂಗಳೂರಿನ ಸಂಚಾರ ದಟ್ಟಣೆಯಲ್ಲಿ ಮನುಷ್ಯನ ಪ್ರೀತಿಯನ್ನು ಕಂಡುಕೊಳ್ಳುವ ಈ ಕಥೆ ಇಂಟರ್ನೆಟ್ನಲ್ಲಿ ಹೃದಯಗಳನ್ನು ಗೆಲ್ಲುತ್ತಿದೆ.
ಸದ್ಯಕ್ಕೀಗ ಬೆಂಗಳೂರಿನಲ್ಲಿ ವಿದ್ಯುತ್ ದರ ದುಬಾರಿಯಾಗಿದೆ. ಎಲ್ಲವು ದುಬಾರಿಯಾಗಿದೆ. ಭಾರತದ ಏಕೈಕ ಜಾಗತಿಕ ಹಾಗೂ ಶ್ರೀಮಂತ ನಗರವಾಗಿರುವ ಬೆಂಗಳೂರು ಕಸದ ನಗರವಾಗಿದೆ. ಈ ಸಂಗತಿ ಕಂಡು ನಾವು ನಾಚಿಕೆಪಡುತ್ತೇವೆ ಎಂದು ಅವರು ಹೇಳಿದ್ದಾರೆ.
ಬಿಜೆಪಿ ವಿರುದ್ಧ ಪೈ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಬಸವರಾಜ ಬೊಮ್ಮಾಯಿ ಮತ್ತು ಬಿ.ಎಲ್. ಸಂತೋಷ್ ಅವರನ್ನು ಉದ್ದೇಶಿಸಿ ಮಾತನಾಡಿದ್ದರು. ಸರ್ ನಮಗೆ ತುರ್ತು ಸುಧಾರಣೆಗಳು ಮತ್ತು ಕಠಿಣ ಕ್ರಮಗಳು ಬೇಕು. ಈ ವಿಭಾಗದಲ್ಲಿ ಹಿಂದಿನ ವರ್ಷದ ಶ್ರೇಯಾಂಕಗಳಿಗೆ ಹೋಲಿಸಿದರೆ, ಬೆಂಗಳೂರಿನ ಸ್ಥಾನವು ಶೇ. 15 ರಷ್ಟು ಕುಸಿತ ಕಂಡು ಬಂದಿದೆ ಎಂದರು.

ಶ್ರೇಯಾಂಕಗಳ ಕುರಿತು ಪ್ರತಿಕ್ರಿಯಿಸಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಶೇಷ ಆಯುಕ್ತ ಹರೀಶ್ ಕುಮಾರ್ ಅವರು, ಇತರ ನಗರಗಳಿಗಿಂತ ಬೆಂಗಳೂರು ನಗರ ಪ್ರದೇಶಗಳ ಸವಾಲುಗಳು ವಿಭಿನ್ನವಾಗಿವೆ. ಅಲ್ಲದೇ ದೊಡ್ಡ ನಗರಗಳನ್ನು ಸಣ್ಣ ನಗರ ಕೇಂದ್ರಗಳೊಂದಿಗೆ ಸಮೀಕರಿಸುವುದು ಸಮರ್ಥನೀಯವಲ್ಲ ಎಂದು ಹೇಳಿದರು.
ಈ ಶ್ರೇಯಾಂಕ ಪಟ್ಟಿ ಸಂಬಂಧ ಹಿಂದಿನ ವರ್ಷದಲ್ಲಿ 10,000 ಜನರಿಂದ ಪ್ರತಿಕ್ರಿಯೆ ಪಡೆಯಲಾಗಿತ್ತು ಮತ್ತು ಈಗ ಅದನ್ನು 5 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಕೇಂದ್ರ ಸರ್ಕಾರ ಮತ್ತು ಬಿಬಿಎಂಪಿ ನೇಮಿಸಿರುವ ಸಲಹೆಗಾರರ ನಡುವೆ ವಿವಾದವಿದೆ ಎಂದು ಹೇಳಿದ್ದರು. ಈ ಮಧ್ಯೆ ನಗರಕ್ಕೆ ಬಂದ ಈ ಸ್ಥಾನವನ್ನು ಬಿಬಿಎಂಪಿ ಗಂಭೀರವಾಗಿ ಪರಿಗಣಿಸಲಿದೆ, ಮುಂದಿನ ನಡೆ ಬಗ್ಗೆ ಆಲೋಚಿಸಲಿದೆ ಪಾಲಿಕೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?











Click it and Unblock the Notifications