Bengaluru Property: ಬೆಂಗಳೂರಿನ ಈ ಭಾಗದಲ್ಲಿ ಭೂಮಿ, ಆಸ್ತಿಗಳ ಬೆಲೆ ದಿಢೀರ್ ಇಳಿಕೆ: ರಿಯಲ್ ಎಸ್ಟೇಟ್ಗೆ ಶಾಕ್!
Bengaluru Property: ಬೆಂಗಳೂರಿನಲ್ಲಿ ಭೂಮಿ ಹಾಗೂ ಆಸ್ತಿಗೆ ಬಂಗಾರದ ಬೆಲೆ ಇದೆ. ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಮಿಗೆ ಬಂಗಾರದ ಬೆಲೆ ಇದೆ. ಆದರೆ ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿನ ಪ್ರಮುಖ ಪ್ರದೇಶಗಳಲ್ಲಿ ಭೂಮಿ ಬೆಲೆ ತುಸು ಇಳಿಕೆ ಕಾಣುತ್ತಿದೆ. ಅದರಲ್ಲೂ ಮುಖ್ಯವಾಗಿ ಎಲ್ಲಿ ಭೂಮಿ ಬೆಲೆ ಹೆಚ್ಚಳವಾಗಿತ್ತೋ ಆ ಭಾಗದಲ್ಲಿ ಇದೀಗ ಭೂಮಿ ಬೇಡಿಕೆ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ರಿಯಲ್ ಎಸ್ಟೇಟ್ದಾರರಿಗೆ ಸಂಕಷ್ಟ ಎದುರಾಗಿದೆ.
ಬೆಂಗಳೂರಿನಲ್ಲಿ ಮೊದಲಿನಿಂದಲೂ ಭೂಮಿಗೆ ಬಂಗಾರದ ಬೆಲೆ ಬಂದಿದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ವಿವಿಧ ಪ್ರಮುಖ ಕಾರಣಗಳಿಗೆ ಭೂಮಿಯ ಬೆಲೆ ಗಣನೀಯವಾಗಿ ಹೆಚ್ಚಳವಾಗುವುದಕ್ಕೆ ಪ್ರಾರಂಭವಾಗಿದೆ. ವೈಟ್ಫೀಲ್ಡ್, ಸರ್ಜಾಪುರ ರಸ್ತೆ ಹಾಗೂ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳ ಭಾಗದಲ್ಲಿ ಭೂಮಿ. ಮನೆ ಖರೀದಿ ಮಾಡುವುದು ಹಾಗೂ ಆಸ್ತಿಗಳ ಮೇಲೆ ಹೂಡಿಕೆ ಮಾಡುವುದು ಹೆಚ್ಚಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಭೂಮಿ ಬೆಲೆ ದಿಢೀರ್ ಕುಸಿತ ಕಂಡಿದೆ ಎಂದು HD ವರದಿ ಮಾಡಿದೆ. ಅದರ ಸಂಪೂರ್ಣ ವಿವರ ನೋಡೋಣ.

ಬೆಂಗಳೂರಿನಲ್ಲಿ ಭೂಮಿ ಬೆಲೆ ಇಳಿಕೆಗೆ ಕಾರಣವೇನು ?
ದೇಶದಲ್ಲಿ ಚಿನ್ನದ ಬೆಲೆ ಹಾಗೂ ಬೆಂಗಳೂರಿನಲ್ಲಿ ಭೂಮಿ ಮತ್ತು ಆಸ್ತಿ ಬೆಲೆಯು ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಏರಿಕೆಯ ಹಾದಿಯಲ್ಲೇ ಇದೆ. ಅದರಲ್ಲೂ ಆಸ್ತಿಗಳ ಖರೀದಿ ಮಾಡುವುದು ಹಾಗೂ ಮಾರಾಟ ಮಾಡುವುದು ಹೆಚ್ಚಳವಾಗಿಯೇ ಇದೆ. ಬೆಂಗಳೂರಿನಲ್ಲಿ ಪ್ರಮುಖ ಐಟಿ ಕೇಂದ್ರಗಳ ಅಭಿವೃದ್ಧಿ ವಿಸ್ತರಣೆ ಹಾಗೂ ವಿವಿಧ ಪ್ರಮುಖ ಯೋಜನೆಗಳ ಜಾರಿ ಸೇರಿದಂತೆ ಹಲವು ಕಾರಣಗಳಿಗೆ ರಿಯಲ್ ಎಸ್ಟೇಟ್ ಬೂಸ್ಟ್ ಆಗಿದೆ. ಆದರೆ ಇದೀಗ ಈ ಲೆಕ್ಕಾಚಾರಗಳು ತಲೆಕೆಳಗಾಗಿವೆ ಎನ್ನಲಾಗುತ್ತಿದೆ.
ಎಐ ಶಾಕ್ ಸೇರಿದಂತೆ ಹಲವು ಕಾರಣಗಳಿಗೆ ಮುಖ್ಯವಾಗಿ ಬೆಂಗಳೂರಿನ ಟೆಕ್ ಕಾರಿಡಾರ್ಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಿಯಲ್ ಎಸ್ಟೇಟ್ ತುಸು ಡಲ್ ಆಗಿದೆ ಎಂದೇ ಹೇಳಲಾಗುತ್ತಿದೆ. ಕಳೆದ ಎರಡು ತಿಂಗಳುಗಳಲ್ಲಿ ಖರೀದಿದಾರರು ಐಟಿ ಪ್ರದೇಶಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಭೂಮಿ ಹಾಗೂ ಮನೆಗಳ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ಹೆಚ್ಚುತ್ತಿರುವ ಉದ್ಯೋಗ ಅನಿಶ್ಚಿತತೆ, ಬೆಂಗಳೂರು ಮೂಲಸೌಕರ್ಯ ಸಮಸ್ಯೆ ಚರ್ಚೆ ಹಾಗೂ ಆಸ್ತಿ ಬೆಲೆ ಹೆಚ್ಚಳ ಸೇರಿದಂತೆ ಹಲವು ಕಾರಣಕ್ಕೆ ರಿಯಲ್ ಎಸ್ಟೇಟ್ನ ಮೇಲೆ ಪ್ರಭಾವ ಬೀರಿರುವ ಸಾಧ್ಯತೆ ಇದೆ.
ಈ ಭಾಗಗಳಲ್ಲಿ ಭೂಮಿ ಬೆಲೆ ಭರ್ಜರಿ ಇಳಿಕೆ
ಬೆಂಗಳೂರಿ ದಕ್ಷಿಣ, ಎಲೆಕ್ಟ್ರಾನಿಕ್ ಸಿಟಿ ಹಾಗೂ ಬನ್ನೇರುಘಟ್ಟ ರಸ್ತೆಯಂತಹ ಕೆಲವೊಂದು ಪ್ರದೇಶಗಳು ಆರಂಭಿಕ ಟೆಕ್ ಪಾರ್ಕ್ಗಳಾಗಿವೆ. ಪೂರ್ವ ಐಟಿ ಕಾರಿಡಾರ್ ವೈಟ್ಫೀಲ್ಡ್, ಔಟರ್ ರಿಂಗ್ ರಸ್ತೆ, ಬೆಳ್ಳಂದೂರು ಮತ್ತು ಸರ್ಜಾಪುರ ರಸ್ತೆ ಸೇರಿದಂತೆ ಹಲವು ಭಾಗದಲ್ಲಿ ಐಟಿ ಕೇಂದ್ರಗಳಿವೆ. ಉತ್ತರ ಬೆಂಗಳೂರಿನ ಐಟಿ ಕಾರಿಡಾರ್ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಹೆಬ್ಬಾಳ, ಯಲಹಂಕ ಮತ್ತು ದೇವನಹಳ್ಳಿ ಸುತ್ತಮುತ್ತಲಿನ ಮುಂಬರುವ ತಂತ್ರಜ್ಞಾನ ವಲಯಗಳು ಅಭಿವೃದ್ಧಿ ಹೊಂದಿವೆ. ಆದರೆ, ಈ ಭಾಗದಲ್ಲಿ ಈ ಹಿಂದೆ ಇದ್ದಂತಹ ಭೂಮಿಯ ಬಂಗಾರದ ಬೆಲೆಯು ಇತ್ತೀಚಿನ ದಿನಗಳಲ್ಲಿ ಕಡಿಮೆ ಆಗುತ್ತಿದೆ. ಈ ಭಾಗದಲ್ಲಿ ರಿಯಲ್ ಎಸ್ಟೇಟ್ ಬೂಸ್ಟ್ ಇದ್ದರೂ ಮೊದಲಿನಷ್ಟು ಡಿಮ್ಯಾಂಡ್ ಇಲ್ಲ ಎಂದು ಹೇಳಲಾಗುತ್ತಿದೆ.
ಕಳೆದ ಎರಡು ತಿಂಗಳುಗಳ ಅವಧಿಯಲ್ಲಿ ವೈಟ್ಫೀಲ್ಡ್ನಿಂದ ಸರ್ಜಾಪುರ ರಸ್ತೆಯವರೆಗೆ ಐಟಿ ಕಾರಿಡಾರ್ ಭಾಗದಲ್ಲಿ ಆಸ್ತಿಗಳ ಮಾರಾಟದ ಡಿಮ್ಯಾಂಡ್ನಲ್ಲಿ ಅಂದಾಜು ಶೇ 20 ರಿಂದ 25% ರಷ್ಟು ಕಡಿಮೆಯಾಗಿದೆ ಎಂದು ರಿಯಲ್ ಎಸ್ಟೇಟ್ ತಜ್ಞರು ಹೇಳಿದ್ದಾರೆ.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ












Click it and Unblock the Notifications