ಬೆಂಗಳೂರು ಹೋಟೆಲ್ಗಳಲ್ಲಿ ಆಹಾರದ ಬೆಲೆ ಶೇ 10ರಷ್ಟು ಏರಿಕೆ- ಯಾವಾಗಿಂದ, ಕಾರಣವೇನು? ತಿಳಿಯಿರಿ
ಬೆಂಗಳೂರು, ಜುಲೈ 27: ತರಕಾರಿಗಳು, ಆಹಾರ ಧಾನ್ಯಗಳು, ಹಾಲು ಮತ್ತು ಇತರ ಅಗತ್ಯ ವಸ್ತುಗಳ ಬೆಲೆಗಳಲ್ಲಿ ಏರಿಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೋಟೆಲ್ ಮಾಲೀಕರು ಆಹಾರ ಪದಾರ್ಥಗಳ ಬೆಲೆಗಳನ್ನು ಏರಿಸಲು ಮುಂದಾಗಿದ್ದಾರೆ. ಹೋಟೆಲ್ ಹಾಗೂ ರೆಸ್ಟೊರಾಂಟ್ಗಳಲ್ಲಿ ಶೇ 10 ರಷ್ಟು ಆಹಾರ ಬೆಲೆ ಏರಿಸಲು ಹೋಟೆಲ್ ಮಾಲೀಕರ ಸಂಘ ನಿರ್ಧರಿಸಿದೆ.
ಆಗಸ್ಟ್ 1 ರಿಂದ ಆಹಾರ ಪದಾರ್ಥಗಳ ಬೆಲೆಯನ್ನು ಶೇ 10 ರಷ್ಟು ಹೆಚ್ಚಿಸಲು ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ಬಹುತೇಕ ರೆಸ್ಟೋರೆಂಟ್ಗಳು ಈ ನಿರ್ಧಾರವನ್ನು ಒಪ್ಪಿಕೊಂಡಿವೆ. ತಿಂಡಿ- ತಿನಿಸುಗಳು ಬೆಲೆ ಈಗಾಗಲೇ 5ರಿಂದ 10ರಷ್ಟು ಏರಿಕೆಯಾಗಿದೆ.

ಸಾಮಾನ್ಯವಾಗಿ ಪ್ರತಿ ವರ್ಷ ಏಪ್ರಿಲ್ನಲ್ಲಿ ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳಲ್ಲಿ ಆಹಾರ ಪದಾರ್ಥಗಳ ಬೆಲೆಗಳನ್ನು ಹೆಚ್ಚಿಸಲಾಗುತ್ತದೆ. ಆದರೆ, ಈ ವರ್ಷ ಅಗತ್ಯ ವಸ್ತುಗಳ ಬೆಲೆಗಳು ಅಧಿಕವಾಗಿ ಹೆಚ್ಚಿದ್ದರಿಂದ ಅನಿವಾರ್ಯವಾಗಿ ಆಹಾರ ಪದಾರ್ಥಗಳ ಬೆಲೆಗಳನ್ನು ಏರಿಸಲು ನಿರ್ಧರಿಸಬೇಕಾಯಿತು ಎಂದು ಹೋಟೆಲ್ ಮಾಲೀಕರ ಸಂಘ ಹೇಳಿಕೆ
'ಚುನಾವಣೆಗಳು ಮತ್ತು ಇತರ ಬೆಳವಣಿಗೆಗಳು ನಡೆಯುತ್ತಿರುವುದರಿಂದ ನಾವು ಕಾಯುತ್ತಿದ್ದೆವು. ಆದರೆ ಈಗ ಎಲ್ಲಾ ಪದಾರ್ಥಗಳ ಬೆಲೆಗಳು ಏರಿಕೆಯಾಗಿರುವುದರಿಂದ ದರವನ್ನು ಹೆಚ್ಚಿಸಲು ನಾವು ಔಪಚಾರಿಕವಾಗಿ ನಿರ್ಧರಿಸಿದ್ದೇವೆ' ಎಂದು ಬಿಬಿಎಚ್ಎ ಅಧ್ಯಕ್ಷ ಪಿಸಿ ರಾವ್ ಹೇಳಿದ್ದಾರೆ ಎಂದು 'ದಿ ಹಿಂದೂ' ಪತ್ರಿಕೆ ವರದಿ ಮಾಡಿದೆ.
ಈಗಾಗಲೇ ಬೆಲೆ ಹೆಚ್ಚಿಸಿರುವ ಹೋಟೆಲ್ ಹಾಗೂ ರೆಸ್ಟೊರಾಂಟ್ಗಳು ಮತ್ತೆ ಏರಿಕೆ ಮಾಡುವುದಿಲ್ಲ. ಈ ವರ್ಷ ಬೆಲೆಯನ್ನು ಹೆಚ್ಚಿಸದ ಹೋಟೆಲ್ಗಳಲ್ಲಿ ಶೇ 10 ರಷ್ಟು ಹೆಚ್ಚಳವು ಜಾರಿಗೆ ಬರಲಿದೆ ಎಂದು ಪಿಸಿ ರಾವ್ ತಿಳಿಸಿದ್ದಾರೆ.

ಎಲ್ಲಾ ಸರಕುಗಳ ಬೆಲೆಗಳು ಹೆಚ್ಚಾಗಿರುವುದರಿಂದ, ಬೆಂಗಳೂರಿನ ಹೋಟೆಲ್ಗಳು ಆಹಾರದ ಬೆಲೆಯನ್ನು ಕನಿಷ್ಠ ಶೇ 10% ರಷ್ಟು ಹೆಚ್ಚಿಸಲು ನಿರ್ಧರಿಸಿವೆ ಎಂದು ಪಿಸಿ ರಾವ್ ಮಾಹಿತಿ ನೀಡಿದ್ದಾರೆ.
ಟೊಮೆಟೊ, ಮೆಣಸಿನಕಾಯಿ ಮತ್ತು ಇತರ ತರಕಾರಿಗಳ ಬೆಲೆಗಳು ಇತ್ತೀಚೆಗೆ ಹೆಚ್ಚಾದ ಕಾರಣ ಹೋಟೆಲ್ಗಳು ಇಂತಹ ನಿರ್ಧಾರವನ್ನು ತೆಗೆದುಕೊಳ್ಳಬೇಕಾಯಿತು. ಹಾಲಿನ ಬೆಲೆಗಳ ಪರಿಷ್ಕರಣೆ ನಂತರ ಆಹಾರದ ಬೆಲೆ ಏರಿಕೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೋಟೆಲ್ ಮಾಲೀಕರು ಈ ಹಿಂದೆ 'ದಿ ಹಿಂದೂ'ಗೆ ತಿಳಿಸಿದ್ದರು.
ಕಳೆದ ವಾರ ನಂದಿನಿ ಹಾಲು 3 ರೂಪಾಯಿಗಳಷ್ಟು ದುಬಾರಿಯಾಗುವ ಸಾಧ್ಯತೆಯಿದೆ ಎಂದು ಘೋಷಿಸಿದ ನಂತರ ಹೋಟೆಲ್ ಮಾಲೀಕರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ದೇಶದಾದ್ಯಂತ ತರಕಾರಿ ಬೆಲೆ ಏರಿಕೆ
ಈ ತಿಂಗಳ ಆರಂಭದಲ್ಲಿ, ದೇಶದಾದ್ಯಂತ ತರಕಾರಿ ಬೆಲೆಗಳಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಮೇ ತಿಂಗಳ ಆರಂಭದಿಂದ ಪಾಟ್ನಾದಲ್ಲಿ ತರಕಾರಿ ಬೆಲೆಗಳು ಗಣನೀಯವಾಗಿ ಹೆಚ್ಚಿವೆ. ಹೂಕೋಸು ಬೆಲೆ ಕೆಜಿಗೆ 60 ರೂ.ಗಳಾಗಿದ್ದು, ಮೇ ತಿಂಗಳ ಆರಂಭದಲ್ಲಿ ಕೆಜಿಗೆ 40 ರೂ. ಆಗಿದೆ. ಅದೇ ರೀತಿಯಲ್ಲಿ, ಎಲೆಕೋಸು ಬೆಲೆ ಕೆಜಿಗೆ 40 ರೂಪಾಯಿಯಿಂದ 60 ರೂ.ಗೆ ಏರಿದೆ. ಆಲೂಗೆಡ್ಡೆ ಮತ್ತು ಈರುಳ್ಳಿ ಬೆಲೆಯು ಮೇ ತಿಂಗಳ ಆರಂಭದಲ್ಲಿ ಕೆಜಿಗೆ ರೂ 20 ಇತ್ತು. ಜುಲೈನಲ್ಲಿ ಕೆಜೆಗೆ 30 ರೂಪಾಯಿ ಏರಿಕೆಯಾಗಿದೆ.
ಪಾಟ್ನಾ ಹೊರತುಪಡಿಸಿ, ಇತರ ಹಲವಾರು ನಗರಗಳು ತರಕಾರಿ ಬೆಲೆಯಲ್ಲಿ ಏರಿಕೆ ಕಂಡಿವೆ. ಪಶ್ಚಿಮ ಬಂಗಾಳದಲ್ಲಿ ತರಕಾರಿ ಬೆಲೆ ಶೇ.30-35ರಷ್ಟು ಏರಿಕೆಯಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಈ ತಿಂಗಳ ಆರಂಭದಲ್ಲಿ ಟೊಮೆಟೊ ಕೆಜಿಗೆ 130-150 ರೂ ಮತ್ತು ಹಸಿರು ಮೆಣಸಿನಕಾಯಿ 300-350 ರೂ. ಆಗಿದೆ.

ಒಡಿಶಾದಲ್ಲಿ, ತರಕಾರಿ ಬೆಲೆಗಳು ತೀವ್ರವಾಗಿ ಏರಿಕೆ ಕಂಡಿವೆ. ಟೊಮೆಟೊ ಸುಮಾರು ಕೆಜಿಗೆ 140-160 ರೂ ಮಾರಾಟವಾಗುತ್ತಿದ್ದರೆ, ಹಸಿರು ಮೆಣಸಿನಕಾಯಿ ಕೆಜಿಗೆ 200 ರೂ ಮತ್ತು ಶುಂಠಿ ಕೆಜಿಗೆ 300 ರೂಪಾಯಿಗೆ ಮಾರಾಟವಾಗುತ್ತಿದೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications