ಬೆಂಗಳೂರು ಗಲಭೆ: ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ
ಬೆಂಗಳೂರು, ಆ. 13: ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ. ಜಿ ಹಳ್ಳಿಹಾಗೂ ಕಾವಲ್ಭೈರಸಂದ್ರದಲ್ಲಿ ಮಂಗಳವಾರ ರಾತ್ರಿ ನಡೆದ ಗಲಭೆ ಹಾಗೂ ಪೊಲೀಸರ ಗೋಲಿಬಾರ್ ಪ್ರಕರಣವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಮ್ಯಾಜಿಸ್ಟೀರಿಯಲ್ ತನಿಖೆಗೆ ವಹಿಸಿದೆ. ಫೇಸ್ಬುಕ್ ಪೊಸ್ಟ್ಗೆ ಸಂಬಂಧಿಸಿದಂತೆ ಗಲಭೆ ನಡೆದು ಪರಿಸ್ಥಿತಿ ನಿಯಂತ್ರಿಸಲು ಪೊಲೀಸರ ಮಾಡಿದ ಗೋಲಿಬಾರ್ನಲ್ಲಿ ಮೂವರು ಮೃತಪಟ್ಟಿದ್ದರು. ನಂತರ ಸುಮಾರು 160ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಮ್ಯಾಜಿಸ್ಟೀರಿಯಲ್ ತನಿಖೆ ನಡೆಸಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಎನ್. ಶಿವಮೂರ್ತಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಮಾಡಿದೆ. ಜೊತೆಗೆ ಮೂರು ತಿಂಗಳೊಳಗೆ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ನೀಡಬೇಕು ಎಂದು ಸೂಚಿಸಲಾಗಿದೆ.

ಬೆಂಗಳೂರು ನಗರ ವ್ಯಾಪ್ತಿಯ ಡಿ.ಜಿ. ಹಳ್ಳಿ, ಕೆ. ಜಿ ಹಳ್ಳಿಯಲ್ಲಿ ಆಗಷ್ಟ್ 11 ರಂದು ನಡೆದ ಅಹಿತಕರ ಘಟನೆಯಲ್ಲಿ ಡಿ.ಜೆ. ಹಳ್ಳಿಯ ಯಾಸೀನ್ ಪಾಷಾ (21), ವಾಜೀದ್ ಖಾನ್ (19) ಹಾಗೂ ಕೆ. ಜಿ. ಹಳ್ಳಿಯ ಶೇಕ್ ಸಿದ್ಧಿಕ್ (25) ಸಾವನ್ನಪ್ಪಿದ್ದವರು. ಗಲಭೆಯಲ್ಲಿ ಮೃತಪಟ್ಟ ಹಾಗೂ ಅವರ ಸಾವಿಗೆ ಕಾರಣಗಳು, ಘಟನಾವಳಿಗಳ ಸರಣಿ ಹಾಗೂ ಸನ್ನಿವೇಶಗಳ ಬಗ್ಗೆ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಲು ಆದೇಶ ಮಾಡಲಾಗಿದೆ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾರ್ಗಸೂಚಿ ಅನ್ವಯ ಜಿಲ್ಲಾ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಬೇಕು. ಅದರಂತೆ ವಿಚಾರಣೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ಕೊಟ್ಟಿದ್ದರು.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರಲ್ಲಿ ಹೆಚ್ಚಾದ ಏಪ್ರಿಲ್ ಬಿಸಿಲಿನ ಕಾವು: 37°C ತಾಪಮಾನ ದಾಖಲು, 40 ಡಿಗ್ರಿ ತಲುಪುವ ನಿರೀಕ್ಷೆ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು












Click it and Unblock the Notifications