ಪಿಎಫ್ ನೀತಿ ಖಂಡನೆ, ಪ್ರತಿಭಟನೆ, ಹೊಸೂರು ರಸ್ತೆ ಟ್ರೆಂಡಿಂಗ್
ಬೆಂಗಳೂರು, ಏಪ್ರಿಲ್ 19: ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲೂ ಪ್ರತಿಭಟನೆ ನಡೆಯುತ್ತಿದ್ದು, ಕೇಂದ್ರ ಸರ್ಕಾರದ ಕಾರ್ಮಿಕರ ಭವಿಷ್ಯ ನಿಧಿ ನೀತಿ ತಿದ್ದುಪಡಿಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹೊಸೂರು ರಸ್ತೆ, ಜಾಲಹಳ್ಳಿ ಕ್ರಾಸ್, ಮೈಸೂರು ರಸ್ತೆ, ಸರ್ಜಾಪುರ ರಸ್ತೆ ಹೀಗೆ ಎಲ್ಲೆಡೆ ಹಿಂಸಾಚಾರ ನಡೆಯುತ್ತಿದ್ದು, ಹೊಸೂರು ರಸ್ತೆ ಸದ್ಯಕ್ಕೆ ಮೈಕ್ರೋಬ್ಲಾಗಿಂಗ್ ತಾಣ ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ನಲ್ಲಿದೆ.
ಕೇಂದ್ರ ಸರ್ಕಾರದ ಹೊಸ ಪಿಎಫ್ ನೀತಿ ಖಂಡಿಸಿ ಗಾರ್ಮೆಂಟ್ಸ್ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಮಂಗಳವಾರವೂ ಮುಂದುವರಿದೆ. ಗಾರ್ಮೆಂಟ್ ಸೇರಿದಂತೆ ಹಲವು ಫ್ಯಾಕ್ಟರಿಗಳ ಕಾರ್ಮಿಕರು ಬೆಂಗಳೂರಿನ ವಿವಿಧೆಡೆ ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.[ಬೆಂಗಳೂರು ಪೊಲೀಸರ ಮೂರ್ಖತನ ಇದೇ ಮೊದಲಲ್ಲ]
ಕಾರ್ಮಿಕರ ಭವಿಷ್ಯ ನಿಧಿ ಕಾಯ್ದೆಗೆ ತಿದ್ದುಪಡಿ ಮಾಡಿದ್ದು, ಕಾರ್ಖಾನೆ ಮಾಲೀಕರು ಹಾಗೂ ಕಾರ್ಮಿಕರು ಮಾಸಿಕ ಕಂತುಗಳಲ್ಲಿ ಪಾವತಿಸಿದ ಪಿಎಫ್ ಹಣವನ್ನು 58 ವರ್ಷಗಳ ನಂತರ (ನಿವೃತ್ತಿ ನಂತರ) ಹಿಂಪಡೆಯಬೇಕು ಎಂದು ಹೇಳಲಾಗಿತ್ತು.[ಗಾರ್ಮೆಂಟ್ಸ್ ನೌಕರರ ಕಥೆ ಬಿಚ್ಚಿಟ್ಟ ಸಾವಿತ್ರಿ]
ಬೆಂಗಳೂರು ಹೊತ್ತಿ ಉರಿಯಲು ಕಾರಣವೇನು? ವೋಟ್ ಮಾಡಿ https://t.co/NguhMb5WZo #GarmentWorkers #Bengaluru
— Oneindia Kannada (@OneindiaKannada) 19 April 2016
ಆದರೆ, ತೀವ್ರ ವಿರೋಧದ ನಂತರ ಆರೋಗ್ಯ, ವಸತಿ ವಿಷಯಕ್ಕಾಗಿ ಬೇಕಾದರೆ ಮುಂಚಿತವಾಗಿ ಹಿಂಪಡೆಯುವ ಅವಕಾಶ ನೀಡಲಾಗುವುದು ಎಂದು ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಹೇಳಿದ್ದಾರೆ. [ಕಾರ್ಮಿಕರನ್ನು ಕೆರಳಿಸಿದ ಕೇಂದ್ರದ ನೀತಿ ಯಾವುದು?]
ಆದರೆ, ಮೋದಿ ಸರ್ಕಾರಕ್ಕೆ ಕಾರ್ಮಿಕರ ಕಣ್ಣೀರು ಕಾಣಿಸುತ್ತಿಲ್ಲ, ಕಾರ್ಮಿಕರಿಗೆ ಮರಣ ಶಾಸನ ಬರೆಯಲಾಗುತ್ತಿದೆ ಎಂದು ಹೇಳಿ ಪ್ರತಿಭಟನೆ ತೀವ್ರಗೊಳಿಸಲಾಗುತ್ತಿದೆ. ಪ್ರತಿಭಟನೆ ವಿಡಿಯೋ ನೋಡಿ

ಸರ್ಕಾರಕ್ಕೆ ಕಾರ್ಮಿಕರ ಕಣ್ಣೀರು ಕಾಣಿಸುತ್ತಿಲ್ಲ
ಈ ನಡುವೆ ವಿವಿಧ ರಸ್ತೆಗಳಲ್ಲಿನ ಟ್ರಾಫಿಕ್ ಜಾಮ್ ಮಾಹಿತಿ, ಪ್ರತಿಭಟನೆ ಸ್ವರೂಪದ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಲಾಗುತ್ತಿದೆ.

ಹೊಸೂರು ರಸ್ತೆ ಸಂಚಾರ ಸುಗಮಗೊಳಿಸಲಾಗಿದೆ
ಹೊಸೂರು ರಸ್ತೆ ಸಂಚಾರ ಸುಗಮಗೊಳಿಸಲಾಗಿದೆ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರಿಂದ ಮಾಹಿತಿ.
|
ಸ್ವಾತಂತ್ರ್ಯ ಭಾರತದಲ್ಲಿ ಇಂಥದ್ದೆಲ್ಲ ನಡೆಯುತ್ತಿದೆ
ಸ್ವಾತಂತ್ರ್ಯ ಭಾರತದಲ್ಲಿ ಇಂಥದ್ದೆಲ್ಲ ನಡೆಯುತ್ತಿದೆ, 5 ಬಸ್ ಗಳಿಗೆ ಬೆಂಕಿ, ಕಾರ್ಮಿಕರಿಗೆ ಅನ್ಯಾಯ, ಈ ನಡುವೆ ಹೊಸೂರು ರಸ್ತೆ ಸಂಚಾರ ಸುಗಮ ಎಂದು ಮಾಹಿತಿ.
|
ಪೊಲೀಸ್ ಠಾಣೆಗೆ ನುಗ್ಗಿದ್ದ ಪ್ರತಿಭಟನೆಗಾರರು
ಹೊಸೂರು ರಸ್ತೆಯ ಹೆಬ್ಬಗೋಡಿ ಪೊಲೀಸ್ ಠಾಣೆಗೆ ನುಗ್ಗಿದ್ದ ಪ್ರತಿಭಟನೆಗಾರರು
|
ಬೊಮ್ಮಸಂದ್ರದಿಂದ ನಗರಕ್ಕೆ ಹೋಗಲು ಆಗುತ್ತಿಲ್ಲ
ಬೊಮ್ಮಸಂದ್ರದಿಂದ ನಗರಕ್ಕೆ ಹೋಗಲು ಆಗುತ್ತಿಲ್ಲ, ಯಾವುದೋ ರಸ್ತೆ ಹಿಡಿದು ಹೆಬ್ಬಗೋಡಿ ತನಕ ಬಂದೆ, ಗೂಗಲ್ ಮ್ಯಾಪ್ ಬಳಸಿ, ಸ್ಮಶಾನ, ನಿರ್ಜನ ಪ್ರದೇಶಗಳಲ್ಲಿ ಸಂಚರಿಸಿದೆ ಎಂದು ಟ್ವೀಟ್ ಮಾಡಿದ ಸಾರ್ವಜನಿಕರು.
|
ಬರೀ ಹೊಸೂರು ರಸ್ತೆಯಲ್ಲ ಬೇರೆ ಕಡೆ ಕೂಡಾ ಪ್ರತಿಭಟನೆ
ಬರೀ ಹೊಸೂರು ರಸ್ತೆಯಲ್ಲ, ತುಮಕೂರು, ಮಾಗಡಿ, ಮೈಸೂರು, ಸರ್ಜಾಪುರ ರಸ್ತೆಗಳನ್ನು ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಎಲ್ಲೆಡೆ 10 ಕಿ.ಮೀಗೂ ಉದ್ದದ ಟ್ರಾಫಿಕ್ ಜಾಮ್ ಇದೆ.
|
ಟ್ರಾಫಿಕ್ ಅಲರ್ಟ್ ಸಂದೇಶ ಕಳಿಸಿದ ಪೊಲೀಸರು
ಟ್ರಾಫಿಕ್ ಅಲರ್ಟ್ ಸಂದೇಶ ಕಳಿಸಿದ ಪೊಲೀಸರು
|
ನಿತಿನ್ ಗಡ್ಕರಿಗೆ ಪ್ರಶ್ನೆ ಎಸೆದ ಸಾರ್ವಜನಿಕರು
ನಿತಿನ್ ಗಡ್ಕರಿಗೆ ಪ್ರಶ್ನೆ ಎಸೆದ ಸಾರ್ವಜನಿಕರು, ರಾಷ್ಟ್ರೀಯ ಹೆದ್ದಾರಿ ನಿಭಾಯಿಸಲು ಆಗುತ್ತಿಲ್ಲವೇ? ಎಂದಿದ್ದಾರೆ.
ಪ್ರತಿಭಟನೆ ವಿಡಿಯೋ ನೋಡಿ
ಕಾರ್ಮಿಕ, ಪ್ರತಿಭಟನೆ ಆಕ್ರೋಶ, ದಾಳಿ ವಿಡಿಯೋದಲ್ಲಿ ನೋಡಿ
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications