Boycott Polls :ಪ್ರಾಮಾಣಿಕವಾಗಿ ನೀರು ಒದಗಿಸದಿದ್ದರೆ 'ಮತದಾನ ಬಹಿಷ್ಕಾರ', ಧರಣಿ
ಬೆಂಗಳೂರು, ಏಪ್ರಿಲ್ 12: ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಮತ್ತೊಂದೆಡೆ ಲೋಕಸಭಾ ಚುನಾವಣೆ ಕಾವು ಹೆಚ್ಚಾಗುತ್ತಿದೆ. ಈ ನಡುವೆ ನಗರದ ಅಪಾರ್ಟ್ಮೆಂಟ್ನಿವಾಸಿಗಳು ಲೋಕಸಭಾ ಚುನಾವಣೆ ವೇಳೆ ಮತದಾನ ಬಹಿಷ್ಕರಿಸುವುದಾಗಿ ಹೇಳಿದ್ದಾರೆ. ಇದು ಮತದಾನ ಜಾಗೃತಿ ಮೂಡಿಸುತ್ತಿರುವ ಬಿಬಿಎಂಪಿಗೆ ತಲೆನೋವಾಗಿ ಪರಿಣಮಿಸಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಯಾವುದೇ ಮೂಲಸೌಕರ್ಯ ಶುಲ್ಕವನ್ನು ವಿಧಿಸದೆ ಬಡಾವಣೆಗಳಿಗೆ ಕಾವೇರಿ ನೀರು ನೀಡಲಾಗುತ್ತಿದೆ. ಹೀಗೆಂದು ಆರೋಪಿಸಿರುವ ಜೆಪಿ ನಗರ 8 ನೇ ಪಿಎಚ್ಎಸ್ನ ರಾಯಲ್ ಲೇಕ್ಫ್ರಂಟ್ ನಿವಾಸಿಗಳು (RLF) ಅದೇ ಸಂಪರ್ಕ ನಮಗೆ ಒದಗಿಸಲು 2.3 ಕೋಟಿ ರೂ. ನೀಡಿದ್ದೇವೆ. ನಮಗೆ ಪ್ರಾಮಾಣಿಕವಾಗಿ ನೀರು ನೀಡಲಾಗಿಲ್ಲ.

ಮತದಾನ ಮಾಡದಿರಲು RLF ನಿರ್ಧಾರ
ಸಮರ್ಪಕವಾಗಿ ಬಡಾವಣೆಗಳಂತೆ ನಮಗೂ ನೀರು ಪೂರೈಕೆ ಮಾಡದಿದ್ದರೆ ನಾವು ಮತದಾನ ಮಾಡುವುದಿಲ್ಲ ಎಂದು ಅಪಾರ್ಟ್ಮೆಂಟ್ ನಿವಾಸಿಗಳು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದಿರಲು ನಿರ್ಧರಿಸಿದ್ದಾರೆ. ಈ ಕುರಿತು ಬ್ಯಾನರ್ ಹಾಕಿಕೊಂಡು ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದು TNIE ವರದಿ ಮಾಡಿದೆ.
ರಾಯಲ್ ಲೇಕ್ಫ್ರಂಟ್ ನಿವಾಸಿಗಳು (RLF) ಬ್ಯಾನರ್ನಲ್ಲಿ ''ಬಡಾವಣೆಯ ನಾಗರಿಕರಿಂದ ಮತದಾನ ಬಹಿಷ್ಕಾರ' ಕನಿಷ್ಟ ಮೂಲಸೌಕರ್ಯಗಳ ಕೊರತೆ ಪ್ರಾಮಾಣಿಕ ತೆರಿಗೆದಾರರಿಗೆ ನೀರು ಕೊಡಿ' ಎಂದು ಕನ್ನಡ ಮತ್ತು ಆಂಗ್ಲ ಎರಡು ಭಾಷೆಯಲ್ಲಿ ಬ್ಯಾನರ್ ಅಳವಡಿಸಿ ಜಲಮಂಡಳಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಚುನಾವಣಾ ಅಧಿಕಾರಿಗಳಿಗೆ ಪತ್ರ: ಅದರಲ್ಲೇನಿದೆ?
ನೀರು ಸಂಪರ್ಕ ವಿಚಾರವಾಗಿ ಏಪ್ರಿಲ್ 10 ರಂದ ರಾಯಲ್ ಲೇಕ್ಫ್ರಂಟ್ ರೆಸಿಡೆನ್ಸಿ ನಿವಾಸಿಗಳು ಮತ್ತು ಸೈಟ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದರು. ಸದರಿ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಪತ್ರದಲ್ಲಿ ತಿಳಿಸಿದ್ದರು. ಜಲಮಂಡಳಿಯ ನಿರಾಸಕ್ತಿ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಬೆಂಗಳೂರು ಜಲಮಂಡಳಿಯು (BWSSB) ರಾಯಲ್ ಲೇಕ್ಫ್ರಂಟ್ ರೆಸಿಡೆನ್ಸಿಯ ಸುತ್ತಮುತ್ತಲಿನ ಸ್ಥಳ, ಉದ್ಯಾನದಂತಹ ಸಾಮಾನ್ಯ ಪ್ರದೇಶಗಳಲ್ಲಿ ಹಾಗೂ ಯಾವುದೇ ಮೂಲಸೌಕರ್ಯ ಶುಲ್ಕಗಳನ್ನು ವಿಧಿಸದೆಯೇ ಆದಾಯ ಮತ್ತು 'ಬಿ-ಖಾತಾ' ಲೇಔಟ್ಗಳ ನಿವಾಸಿಗಳಿಗೆ ಮೂಲಸೌಕರ್ಯ ಶುಲ್ಕ ವಿಲ್ಲದೇ ನೀರು ಒದಗಿಸುತ್ತದೆ.
ವಿವಿಧ ಬಡಾವಣೆಗಳಿಗೆ ಶುಲ್ಕವಿಲ್ಲದೇ ನೀರು
ಬಿಡಿಎ ವ್ಯಾಪ್ತಿಯ ಬಡಾವಣೆಗಳಾದ ಬಾಲಾಜಿ ಲೇಔಟ್, ವಾಜರಹಳ್ಳಿ, ರಘುವನಹಳ್ಳಿಯ ಬಿಸಿಎಂಸಿ ಲೇಔಟ್, ನಾರಾಯಣನಗರ ಹಂತ 1 ಮತ್ತು ಹಂತ 2, ದೊಡ್ಡಕಲ್ಲಸಂದ್ರ, ಬಿಡಿಎ ನೌಕರರ ಬಡಾವಣೆ, ದೊಡ್ಡಕಲ್ಲಸಂದ್ರ ಮತ್ತು ಬಿಸಿಸಿ ಎಚ್ಎಸ್ ಬಡಾವಣೆಗಳಿಗೆ ಜಲಮಂಡಳಿಯು ಮೂಲಸೌಕರ್ಯದ ಚಾರ್ಜ್ (ಶುಲ್ಕ) ಹಾಕದೇ ನೀರು ನೀಡುತ್ತಿರುವುದು ಗಮನಕ್ಕೆ ಬಂದಿದೆ.
ಮೂಲಸೌಕರ್ಯ ಶುಲ್ಕ ಕಟ್ಟದ ಬಡಾವಣೆಗಳ ಮನೆಗೆ ನೀರಿನ ಸಂಪರ್ಕ ಮತ್ತು ಭೂಗತ ಒಳಚರಂಡಿ (ಯುಜಿಡಿ) ಸಂಪರ್ಕಗಳನ್ನು ಕಲ್ಪಿಸಲಾಗಿದೆ ಎಂದು ಚುನಾವನಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ಫ್ಲ್ಯಾಟ್ ನಿವಾಸಿಗಳು ವಿವರಿಸಿದ್ದಾರೆ.
ಬೋರ್ವೆಲ್ ಬತ್ತಿ ಹೋಗಿ ನೀರಿಗೆ ಪರದಾಟ
ರಾಯಲ್ ಲೇಕ್ಫ್ರಂಟ್ ನಿವಾಸಿಗಳು (RLF) ಯುಜಿಡಿ ಸೌಲಭ್ಯ ಹೊಂದಿದ್ದು, ಇಲ್ಲಿ ಬೋರ್ವೆಲ್ ನೀರಿನ ಸೇವೆಗಳ ಮೂಲಕ ಸಮುದಾಯ ನೀರು ಪೂರೈಕೆ ಆಗುತ್ತಿತ್ತು. ಬರಗಾಲ ಹಿನ್ನೆಲೆ ಈ ಬಾರಿ ಬೋರ್ವೆಲ್ ಬತ್ತಿ ಹೋಗಿದೆ. ನಾವು ಖಾಸಗಿ ಟ್ಯಾಂಕರ್ ನೀರಿನ ಮೇಲೆ ಅವಲಂಬಿತವಾಗಿದೆ.
ಸುಮಾರು 20 ವರ್ಷಗಳಿಂದ ಜಲಮಂಡಳಿಯಿಂದ ಕಾವೇರಿ ನೀರಿನ ಸಂಪರ್ಕ ಪಡೆಯಲು ಯತ್ನಿಸುತ್ತಿದ್ದೇವೆ. ಅದಕ್ಕಾಗಿ ಸಂಘದ ನಿವಾಸಿಗಳು ಓಡಾಡಿದ್ದಾರೆ. ನೀರು ಸಂಪರ್ಕ ಪಡೆಯಲು ಅಧಿಕಾರಿಗಳು 104 ಕೋಟಿ ರೂ. ಪಾವತಿಸಲು ಸೂಚಿಸಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ಜಲಮಂಡಳಿ ಅಧಿಕಾರಿಗಳು ಪರಿಗಣಿಸದೆ ನಿರ್ಲಕ್ಷಿಸಿದ್ದಾರೆ. ಇದು ಹೀಗೆ ಮುಂದುವರಿದರೆ ಲೋಕಸಭಾ ಚುನಾವಣೆ ಮಾತ್ರವಲ್ಲದೇ ಮುಂದಿನ ಎಲ್ಲ ಚುನಾವಣೆಗಳ ಮತದಾನ ಬಹಿಷ್ಕರಿಸುತ್ತೇವೆ ಎಂದು ತಿಳಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications