ದೇವನಹಳ್ಳಿ ಭೀಕರ ಅಪಘಾತಕ್ಕೆ 6 ವಿದ್ಯಾರ್ಥಿಗಳು ಸೇರಿ 7 ಜನ ಬಲಿ, ಇಲ್ಲಿದೆ ಮಾಹಿತಿ... Bengaluru Road Accident
ಬೆಂಗಳೂರು: ಹೊಸಕೋಟೆ ಹಾಗೂ ದಾಬಸ್ಪೇಟೆಯ ಸ್ಯಾಟಲೈಟ್ ರಿಂಗ್ ರೋಡ್ (ಎಸ್ಟಿಆರ್ಆರ್) ಮಾರ್ಗದಲ್ಲಿ, ಸತ್ಯವಾರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಟ್ಟು 7 ಜನರು ಮೃತಪಟ್ಟಿದ್ದಾರೆ. ಇನ್ನು ಈ ಭೀಕರ ಅಪಘಾತದಲ್ಲಿ 1 ಟ್ರಕ್, ಎಕ್ಸ್ಯುವಿ ಕಾರು & ಒಂದು ಬೈಕ್ ನಜ್ಜುಗುಜ್ಜಾಗಿ ಹೋಗಿವೆ. ಹೆದ್ದಾರಿಯಲ್ಲಿ ದಿಢೀರ್ ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಡಿಕ್ಕಿಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ, ಪೊಲೀಸರು ತಕ್ಷಣ ಸ್ಥಳಕ್ಕೆ ದೌಡಾಯಿಸಿದ್ದಾರೆ.
ಬೆಂಗಳೂರು ಹೊರವಲಯ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ಸಂಭವಿಸಿರುವ ಈ ದುರಂತಕ್ಕೆ ಮೊದಲು ಎಕ್ಸ್ಯುವಿ ಕಾರು ಡಿಕ್ಕಿಯಾಗಿದ್ದೇ ಕಾರಣ ಎನ್ನಲಾಗಿದೆ. ಹೀಗೆ ಹೆದ್ದಾರಿಯಲ್ಲಿ ಎಕ್ಸ್ಯುವಿ ಕಾರು ಮೊದಲು ಬೈಕ್ಗೆ ಡಿಕ್ಕಿ ಹೊಡೆದು ಬಳಿಕ ಟ್ರಕ್ಗೆ ಹೋಗಿ ಗುದ್ದಿದೆ. ಇಲ್ಲಿ ಅತಿವೇಗದ ಚಾಲನೆಯಿಂದ ಈ ಭೀಕರ ಅಪಘಾತವು ಸಂಭವಿಸಿದೆ ಎಂದು ಶಂಕಿಸಲಾಗಿದ್ದು, ನಿಖರ ಕಾರಣಕ್ಕಾಗಿ ತನಿಖೆ ಆರಂಭ ಆಗಿದೆ. ಭೀಕರ ಅಪಘಾತದಲ್ಲಿ ಒಟ್ಟು 6 ವಿದ್ಯಾರ್ಥಿಗಳು ಸೇರಿ ಒಟ್ಟು 7 ಜನ ಬಲಿಯಾಗಿದ್ದಾರೆ. ಮೃತದೇಹಗಳನ್ನು ಕೂಡಲೇ ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

6 ವಿದ್ಯಾರ್ಥಿಗಳು ಮತ್ತು ಉದ್ಯೋಗಿ ಬಲಿ
ಬೆಂಗಳೂರು ಹೊರವಲಯದ ಹೆದ್ದಾರಿ, ಇಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತಕ್ಕೆ ಸಾಕ್ಷಿಯಾಗಿತ್ತು. ಹೊಸಕೋಟೆ ಹಾಗೂ ದಾಬಸ್ಪೇಟೆ ಹೆದ್ದಾರಿಯ ಕಳಪೆ ನಿರ್ಮಾಣ ಮತ್ತು ವಿನ್ಯಾಸದ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮೃತರಲ್ಲಿ ಬೈಕ್ ಸವಾರ ಸ್ಥಳೀಯರಾಗಿದ್ದು ಕಾರಿನಲ್ಲಿ ಇದ್ದ ಉಳಿದವರು ಬೆಂಗಳೂರಿನ ಕೊತ್ತನೂರು ಮೂಲದವರು ಎನ್ನಲಾಗಿದೆ. ಅಪಘಾತಕ್ಕೆ ಅತಿವೇಗ ಪ್ರಮುಖ ಕಾರಣ ಎಂಬುದು ಪ್ರಾಥಮಿಕವಾಗಿ ತಿಳಿದುಬಂದಿದ್ದು, ಪಿಯು ವಿದ್ಯಾರ್ಥಿಗಳ ಜಾಲಿ ರೈಡ್ ಅಪಘಾತಕ್ಕೆ ಕಾರಣ ಆಗಿದೆಯಾ? ಎಂಬ ಪ್ರಶ್ನೆ ಹುಟ್ಟುಹಾಕಿದೆ. ಇನ್ನು ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳು ಅಶ್ವಿನ್, ಅಹನ್, ಆಯನ್, ಅಲಿ, ಭರತ್, ಈಶನ್ ಎಂದು ಗುರುತಿಸಲಾಗಿದೆ. 6 ವಿದ್ಯಾರ್ಥಿಗಳೂ ಸೇರಿ, ಬೈಕ್ ಸವಾರ ಸಫಲ್ ಕಂಪನಿಯ ಉದ್ಯೋಗಿ ಗಗನ್ ಕೂಡ ಅಪಘಾತಕ್ಕೆ ಬಲಿಯಾಗಿದ್ದಾರೆ.
VIDEO | Karnataka: Seven people killed in a series of collisions between canter truck, bike and a car on Hoskote-Dabaspet National Highway.#KarnatakaNews
— Press Trust of India (@PTI_News) February 13, 2026
(Source: Third Party)
(Full video available on PTI Videos - https://t.co/n147TvrpG7) pic.twitter.com/ZbZWpo6PxC
ಮಕ್ಕಳನ್ನು ಕಳೆದುಕೊಂಡ ಪೋಷಕರ ಕಣ್ಣೀರು
ಅಪಘಾತ ನಡೆದ ಸ್ಥಳಕ್ಕೆ ತಕ್ಷಣವೇ ದೌಡಾಯಿಸಿದ ಬೆಂಗಳೂರು ಗ್ರಾಮಾಂತರ ಎಸ್ಪಿ ಚಂದ್ರಕಾಂತ್ ಹಾಗೂ ಪೊಲೀಸರ ತಂಡ, ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿಗಳ ಪೋಷಕರಿಗೆ ಬೆಳ್ಳಂಬೆಳಗ್ಗೆ ಈ ಸಾವಿನ ಸುದ್ದಿ ತಲುಪಿದ್ದು, ಮಕ್ಕಳನ್ನು ಕಳೆದುಕೊಂಡ ಪೋಷಕರು ಕಣ್ಣೀರು ಹಾಕುತ್ತಿದ್ದಾರೆ. ಇತ್ತ ಏನೂ ತಪ್ಪು ಮಾಡದೆ ತನ್ನ ಪಾಡಿಗೆ ತಾನು ಕೆಲಸಕ್ಕೆ ಹೊರಟಿದ್ದ ಉದ್ಯೋಗಿ ಕೂಡ ತನ್ನ ಜೀವವನ್ನೇ ಕಳೆದುಕೊಂಡಿದ್ದಾರೆ. ಈ ಭೀಕರ ಅಪಘಾತ ಇದೀಗ ರಾಷ್ಟ್ರೀಯ ಮಟ್ಟದಲ್ಲಿ ಕೂಡ ಸುದ್ದಿಯಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications