Bengaluru: ಕಿರಣ್ ಮಜುಂದಾರ್ ಶಾ ಪ್ರಸ್ತಾವನೆ: ಬೆಂಗಳೂರು & ಚೆನ್ನೈ ಸೂಕ್ತ ಎಂದ ಪಿ. ಚಿದಂಬರಂ
ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ಸಂಖ್ಯೆ ಹೆಚ್ಚಳವಾಗಿದೆ. ಅಲ್ಲದೇ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯಲಾಗುತ್ತಿದೆ. ಬೆಂಗಳೂರಿನ ಮೂಲಸೌಕರ್ಯ ಸುಧಾರಿಸಬೇಕು ಎಂದು ಉದ್ಯಮಿಗಳು ಪದೇ ಪದೇ ಪ್ರಶ್ನಿಸುತ್ತಿದ್ದಾರೆ. ಅಲ್ಲದೇ ಈ ವಿಚಾರವಾಗಿ ಉದ್ಯಮಿಗಳು ಹಾಗೂ ಕರ್ನಾಟಕ ಸರ್ಕಾರದ ಸಚಿವರ ನಡುವೆ ವಾಕ್ಸಮರ ನಡೆದಿತ್ತು. ಅಲ್ಲದೇ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರೇ ಯಾಕೆ ರಸ್ತೆಗಳನ್ನು ಅಭಿವೃದ್ಧಿಪಡಿಸಬಾರದು ಎಂದು ಸಚಿವ ಎಂ.ಬಿ ಪಾಟೀಲ್ ಅವರು ಪ್ರಶ್ನೆ ಮಾಡಿದ್ದರು.
ಈ ಬೆಳವಣಿಗೆಯ ನಂತರ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರೇ ತಮ್ಮ ಸಂಸ್ಥೆಯ ಸುತ್ತಮುತ್ತಲಿನ 10ರಿಂದ 15 ರಸ್ತೆಗಳನ್ನು ಅಭಿವೃದ್ಧಿಪಡಿಸುವುದಾಗಿ ಹೇಳಿದ್ದರು. ಈ ರೀತಿ ಕಿರಣ್ ಅವರೇ 15 ಪ್ರಮುಖ ರಸ್ತೆಗಳನ್ನು ಅಭಿವೃದ್ಧಿಪಡಿಸುವುದಾಗಿ ಹೇಳಿದ ಮೇಲೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಸಹ ಕಿರಣ್ ಅವರು ಕೇಳಿದರೆ ರಸ್ತೆಗಳ ಅಭಿವೃದ್ಧಿಗೆ ಸಹಕಾರ ನೀಡುವುದಾಗಿಯೂ ಹೇಳಿದ್ದರು.

ಇದೀಗ ಈ ವಿಚಾರ ದೇಶದಾದ್ಯಂತ ಚರ್ಚೆಗೆ ಕಾರಣವಾಗಿದೆ. ಅಲ್ಲದೇ ಕೇಂದ್ರ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಅವರು ಈ ಪ್ರಯೋಗಕ್ಕೆ ಬೆಂಗಳೂರು ಅಥವಾ ಚೆನ್ನೈ ಎರಡೂ ಪ್ರಮುಖ ನಗರಗಳು ಸೂಕ್ತವಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರನ್ನು ಸಹ ಈ ಟ್ವೀಟ್ನಲ್ಲಿ ಟ್ಯಾಗ್ ಮಾಡಿದ್ದಾರೆ.
ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಅವರು, ಬೆಂಗಳೂರಿನ ಕೆಲವು ರಸ್ತೆಗಳ ಅಭಿವೃದ್ಧಿಗೆ ಹಣಕಾಸು ನೆರವು ನೀಡುವುದಾಗಿ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರ ಪ್ರಸ್ತಾಪಿಸಿದ್ದಾರೆ. ಈ ಪ್ರಸ್ತಾವನೆಯನ್ನು ನಾನು ಆಸಕ್ತಿಯಿಂದ ಗಮನಿಸಿದ್ದೇನೆ, ಇದೊಂದು ಉತ್ತಮ ವಿಚಾರ & ಕೊಡುಗೆ, ಅಭಿನಂದನೆಗಳು ಎಂದು ಕಿರಣ್ ಮಜುಂದಾರ್ ಶಾ ಅವರು ಹೇಳಿದ್ದಾರೆ.
ಅಲ್ಲದೇ ಮುಂದುವರಿದು ಸಾರ್ವಜನಿಕ ಕಾಮಗಾರಿಗಳಲ್ಲಿನ ಸಮಸ್ಯೆ ಹಣದ ಕೊರತೆಯಲ್ಲ; ಸಮಸ್ಯೆ ಸಾರ್ವಜನಿಕ ಕಾಮಗಾರಿಗಳ ಅನುಷ್ಠಾನದಲ್ಲಿದೆ ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರಗಳು ಕಿರಣ್ ಶಾ ಅವರ ಆಲೋಚನೆ ಜಾರಿ ಮಾಡಬಹುದು. ಸಾರ್ವಜನಿಕ ಹಣ, ಟೆಂಡರ್ ಇತ್ಯಾದಿಗಳನ್ನು ಬಳಸಿಕೊಂಡು ಗುತ್ತಿಗೆದಾರರನ್ನು ಆಯ್ಕೆ ಮಾಡಬಹುದು. ಆಯ್ಕೆಯ ನಂತರ, ಗುತ್ತಿಗೆದಾರರನ್ನು ಕಿರಣ್ ಶಾ ಅವರಂತಹ ಇಚ್ಛಾಶಕ್ತಿಯುಳ್ಳ ಕಂಪನಿ ಅಥವಾ ಕೈಗಾರಿಕೋದ್ಯಮಿಯ ಮೇಲ್ವಿಚಾರಣೆಯಲ್ಲಿ ಇರಿಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಗುತ್ತಿಗೆದಾರರು ಸಾರ್ವಜನಿಕ ಕಾಮಗಾರಿಗಳನ್ನು (ರಸ್ತೆ ಅಭಿವೃದ್ಧಿ) ನಿರ್ವಹಿಸುತ್ತಾರೆ. ಆದಾಗ್ಯೂ, ಕೆಲಸದ ಗುಣಮಟ್ಟ ಮತ್ತು ಸಕಾಲಿಕ ಅನುಷ್ಠಾನಕ್ಕೆ ಮೇಲ್ವಿಚಾರಣೆ ಕಂಪನಿ ಅಥವಾ ಕೈಗಾರಿಕೋದ್ಯಮಿಗಳು ಜವಾಬ್ದಾರರಾಗಿರುತ್ತಾರೆ. ಯಾವುದೇ ದಂಡ ಅಥವಾ ವೆಚ್ಚದ ಮಿತಿಮೀರಿದ ಮೊತ್ತವನ್ನು ಮೇಲ್ವಿಚಾರಣಾ ಕಂಪನಿ ಅಥವಾ ಕೈಗಾರಿಕೋದ್ಯಮಿ ಭರಿಸುತ್ತಾರೆ. ಚೆನ್ನೈ ಅಥವಾ ಬೆಂಗಳೂರು ಈ ವಿಚಾರವನ್ನು ಪ್ರಯೋಗಿಸಲು ಸೂಕ್ತ ಸ್ಥಳವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
-
Lunar Eclipse: ಮಾರ್ಚ್ 3 ಹುಣ್ಣಿಮೆ: ವರ್ಷದ ಮೊದಲ ಮಹಾ ಚಂದ್ರ ಗ್ರಹಣ – ನಾಲ್ಕು ರಾಶಿಗಳಿಗೆ ಅಶುಭ ಸೂಚನೆ -
LPG Price: ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಏರಿಕೆ: ಇಲ್ಲಿದೆ ಮಾರ್ಚ್ 1ರ ದರಪಟ್ಟಿ -
Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಬಿಸಿಲೂ ಹೆಚ್ಚು -
ಮಾರ್ಚ್ 3, 2026 – ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ಕೇತುಗ್ರಸ್ತ ಮಹಾ ಚಂದ್ರಗ್ರಹಣ: ದ್ವಾದಶ ರಾಶಿಗಳ ಫಲಿತಾಂಶ -
Gold Rate Today: ಆಭರಣ ಪ್ರಿಯರ ಗಮನಕ್ಕೆ: ಬೆಂಗಳೂರಿನಲ್ಲಿ ಇಂದು ಚಿನ್ನ-ಬೆಳ್ಳಿ ದರ ಹೇಗಿದೆ? ಇಲ್ಲಿದೆ ಮಾಹಿತಿ -
National Highway: ರಾಜ್ಯದಲ್ಲಿ ಹೊಸ ರಾಷ್ಟ್ರೀಯ ಹೆದ್ದಾರಿಯ ಮಹತ್ವದ ಅಪ್ಡೇಟ್ -
ಹರ್ಮೂಜ್ ಜಲಸಂಧಿ ಬಂದ್: ಭಾರತಕ್ಕೆ ತಟ್ಟಲಿದೆ ತೈಲ ದರದ ಬಿಸಿ, ಆರ್ಥಿಕತೆಗೂ ಭಾರಿ ಹೊಡೆತ -
ಅಮೆರಿಕಕ್ಕೆ ಸೆಡ್ಡು ಹೊಡೆದು 16,800 ಕೋಟಿ ರೂ ಒಪ್ಪಂದ ಕಡಿದುಕೊಂಡ ಆಂತ್ರೋಪಿಕ್: ಬೆಂಗಳೂರು ಟೆಕ್ಕಿ ಮೆಚ್ಚುಗೆ -
Horoscope March 1: ಈ ರಾಶಿಯವರ ವ್ಯಾಪಾರ, ಆರೋಗ್ಯ ವೃದ್ಧಿ, ಇಂದಿನ ದಿನ ಭವಿಷ್ಯ ಇಲ್ಲಿದೆ. -
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಜೋಡಿಯಿಂದ ಕರ್ನಾಟಕ ಸೇರಿ ದೇಶದ ಪ್ರಮುಖ ದೇವಸ್ಥಾನಗಳಲ್ಲಿ ಅನ್ನದಾನ ಸೇವೆ -
ಮದುವೆ ಪೋಸ್ಟ್ನಲ್ಲಿ ರಶ್ಮಿಕಾ ವಿಶೇಷ ಸಾಲುಗಳು: ಕೊಡಗಿನ ಬೆಡಗಿಯ ವಿದ್ಯಾರ್ಹತೆ ಬಗ್ಗೆ ನಿಮಗೆಷ್ಟು ಗೊತ್ತು? -
Ali Khamenei: ಇರಾನ್ ಸುಪ್ರೀಂ ನಾಯಕ ಖಮೇನಿ ಭೇಟಿ ನೀಡಿದ್ದ ಚಿಕ್ಕಬಳ್ಳಾಪುರದ ಅಲೀಪುರ ಗ್ರಾಮದ ವಿಶೇಷವೇನು












Click it and Unblock the Notifications