ಬೆಂಗಳೂರಿನ ಈ ಭಾಗದಲ್ಲಿ 58.44 ಕೋಟಿ ಮೊತ್ತದ ಯೋಜನೆ: 5 ಪ್ರದೇಶಗಳಿಗೆ ಲಾಭ!
ಬೆಂಗಳೂರಿನ ವಿವಿಧ ಭಾಗದಲ್ಲಿ ವೈಟ್ಟಾಪಿಂಗ್ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಇದೀಗ ಬೆಂಗಳೂರಿನ ವಿವಿಧ ಭಾಗದಲ್ಲಿ ವೈಟ್ಟಾಪಿಂಗ್ ಕಾಮಗಾರಿ ನಡೆಯುತ್ತಿದೆ. ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ವತಿಯಿಂದ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಕ್ಕಪೇಟೆ ರಸ್ತೆಯ ವೈಟ್ ಟಾಪಿಂಗ್ ಮತ್ತು ಸಮಗ್ರ ರಸ್ತೆ ಅಭಿವೃದ್ಧಿ ನಿರ್ಮಾಣ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ.
ಗಾಂಧಿನಗರ ವಿಧಾನ ಸಭಾಕ್ಷೇತ್ರದ ಚಿಕ್ಕಪೇಟೆ ವ್ಯಾಪ್ತಿಯ ರಸ್ತೆಗಳು ನಗರದ ಕೇಂದ್ರ ಭಾಗದ ರಸ್ತೆಗಳಾಗಿದ್ದು, ಅತಿ ಹೆಚ್ಚು ವಾಹನ ದಟ್ಟಣೆ ಹಾಗೂ ಅತ್ಯಂತ ಕಿರಿದಾದ ರಸ್ತೆಗಳಾಗಿದ್ದು ಹೆಚ್ಚು ಜನನಿಬಿಡ ರಸ್ತೆಗಳಾಗಿವೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆ ಪ್ರದೇಶವು ಬೆಂಗಳೂರು ಕೇಂದ್ರ ಭಾಗದಲ್ಲಿದ್ದು, ವ್ಯವಹಾರ ವಹಿವಾಟಿನಿಂದ ಕೂಡಿರುತ್ತದೆ. ಹಗಲಿನಲ್ಲಿ ಭಾರಿ ಸಂಖ್ಯೆಯ ಜನ ಓಡಾಡುವುದರೊಂದಿಗೆ ವಾಹನ ಸಂಚಾರವೂ ಹೆಚ್ಚಾಗಿರುತ್ತದೆ. ರಾತ್ರಿ ವೇಳೆಯಲ್ಲಿ ಸಹ ಸರಕು ವಾಹನಗಳ ಓಡಾಟ ಸಂಖ್ಯೆ ಜಾಸ್ತಿ ಇರುತ್ತದೆ.

ಈ ಪ್ರದೇಶಕ್ಕೆ ಹೊಂದಿಕೊಂಡಂತೆ ಬೆಂಗಳೂರು ನಗರದ ರೈಲು ನಿಲ್ದಾಣ, ಬಸ್ ನಿಲ್ದಾಣ ಹಾಗೂ ಮೆಟ್ರೋ ನಿಲ್ದಾಣಗಳಿರುವುದರಿಂದ ಈ ಪ್ರದೇಶಕ್ಕೆ ಬಂದು ಹೋಗುವ ಹಾಗೂ ಈ ಪ್ರದೇಶದಿಂದ ಹಾದು ಹೋಗುವ ವಾಹನಗಳ ಸಂಖ್ಯೆ ಸಹ ಹೆಚ್ಚಾಗಿದೆ. ಹೀಗಾಗಿ ಸಮಗ್ರವಾಗಿ ರಸ್ತೆಯನ್ನು ವೈಟ್ ಟಾಪಿಂಗ್ ಮತ್ತು ಸಮಗ್ರ ರಸ್ತೆ ಅಭಿವೃದ್ಧಿ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ವೈಟ್ ಟಾಪಿಂಗ್ ರಸ್ತೆ ಯೋಜನೆಯ ಒಟ್ಟು ಅಂದಾಜು ಮೊತ್ತವು 58.44 ಕೋಟಿ ರೂಪಾಯಿ ಆಗಿದೆ. ಕಾಮಗಾರಿಯ ಸ್ಥಳವು ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಕ್ಕಪೇಟೆ ಹಾಗೂ ರೇಸ್ ಕೋರ್ಸ್ ರಸ್ತೆ ಸೇರಿದೆ. ಈ ಯೋಜನೆಯಿಂದ ಚಿಕ್ಕಪೇಟೆ, ಗಾಂಧಿನಗರ, ಅವೆನ್ಯೂ ರಸ್ತೆ, ಕಾಟನ್ಪೇಟೆ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಅನುಕೂಲವಾಗಲಿದೆ. ಗಾಂಧಿನಗರ ಕ್ಲಸ್ಟರ್ ರಸ್ತೆಯ ಒಟ್ಟು ಉದ್ದ - 5.57 ಕಿ.ಮೀ, ಮಳೆ ನೀರು, ಒಳಚರಂಡಿ ಪೈಪ್ ಲೈನ್ಗಳು ರಸ್ತೆಯ ಮಧ್ಯಭಾಗದಲ್ಲಿ ಮತ್ತು ಯುಟಿಲಿಟಿಯು ರಸ್ತೆಯ ಎರಡು ಬದಿಗಳಲ್ಲಿ ಒಳಗೊಂಡಂತೆ 2.7 ಮೀ ಅಗಲದ ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಇದಾಗಿದೆ.
ಈ ಯೋಜನೆಯು ವಾಹನಗಳ ದಟ್ಟಣೆಯನ್ನು ನಿಯಂತ್ರಿಸಲು ಹಾಗೂ ಸಂಚಾರಿ ವ್ಯವಸ್ಥೆಯನ್ನು ಸುಗಮಗೊಳಿಸಲು ಉದ್ದೇಶವನ್ನು ಒಳಗೊಂಡಿದೆ. ಪ್ರಾಸ್ತಾಪಿತ ಯೋಜನೆಯಲ್ಲಿ ಟ್ರಾಫಿಕ್ ನಿಯಮಾವಳಿಗಳನ್ನು ವ್ಯವಸ್ಥಿತ ರೀತಿಯಲ್ಲಿ ಅಳವಡಿಸಲಾಗಿದ್ದು, ಇದರಿಂದ ವಾಹನ ಸರಳವಾಗಲಿದೆ ಎಂದು ಗ್ರೇಟರ್ ಬೆಂಗಳೂರು ಆಡಳಿತದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Bengaluru Second Airport: 5 ತಿಂಗಳಲ್ಲಿ ಬೆಂಗಳೂರು 2ನೇ ವಿಮಾನ ನಿಲ್ದಾಣ ಸ್ಥಳ ಫೈನಲ್: 3 ತಾಣಗಳಿಗೆ ಕಾರ್ಯಸಾಧ್ಯತಾ ವರದಿ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು











Click it and Unblock the Notifications