Get Updates
Get notified of breaking news, exclusive insights, and must-see stories!

ಬೆಂಗಳೂರು ರೌಂಡ್ಸ್: ಇಂದಿರಾ ಕ್ಯಾಂಟೀನ್‌, ಘನತ್ಯಾಜ್ಯ ಸಂಸ್ಕರಣ ಘಟಕಗಳಲ್ಲಿ ಅವ್ಯವಸ್ಥೆ ಕಂಡು ದಂಗಾದ ಡಿ.ಕೆ.ಶಿ

ಬೆಂಗಳೂರು, ಜುಲೈ, 09: ಭಾನುವಾರ (ಜುಲೈ 09) ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಇಂದಿರಾ ಕ್ಯಾಂಟೀನ್, ಘನತ್ಯಾಜ್ಯ ಸಂಸ್ಕರಣ ಘಟಕಗಳಿಗೆ ಭೇಟಿ ನೀಡಿದ್ದು, ಈ ವೇಳೆ ಅಲ್ಲಿನ ಅವ್ಯವಸ್ಥೆಗಳನ್ನು ಕಂಡು ದಂಗಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್‌ ಅವರು, ಇಂದು ಅಧಿಕಾರಿಗಳಿಗೆ ಮಾಹಿತಿ ನೀಡದೆ ಇಂದಿರಾ ಕ್ಯಾಂಟೀನ್, ಘನತ್ಯಾಜ್ಯ ಸಂಸ್ಕರಣ ಘಟಕಗಳಿಗೆ ಭೇಟಿ ನೀಡಿದ್ದೇನೆ. ಅಲ್ಲದೆ ಇಂದಿರಾ ಕ್ಯಾಂಟೀನ್‌, ಘನತ್ಯಾಜ್ಯ ಘಟಕಗಳಲ್ಲಿ ಕೆಲವು ವ್ಯವಸ್ಥೆಗಳನ್ನು ಪರಿಶೀಲನೆ ಮಾಡಿದ್ದೇನೆ. ಆದರೆ ಅಲ್ಲಿನ ಕಾರ್ಯವೈಖರಿಯೂ ತೃಪ್ತಿದಾಯಕವಾಗಿಲ್ಲ ಬೇಸರ ವ್ಯಕ್ತಪಡಿಸಿದರು.

Bengaluru Rounds

ಇನ್ನು ಬೆಂಗಳೂರು ಅಭಿವೃದ್ಧಿಗೆ ಬಜೆಟ್‌ನಲ್ಲಿ ನಿರೀಕ್ಷೆಗೆ ತಕ್ಕ ಅನುದಾನ ಸಿಗುತ್ತದೆಯೋ ಇಲ್ಲವೋ ಗೊತ್ತಿಲ್ಲ. ನಾನು ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸಂಪನ್ಮೂಲ ಸೋರಿಕೆ ಆಗುತ್ತಿದೆ?, ತೆರಿಗೆ ವಂಚನೆ ಮಾಡಲಾಗುತ್ತಿದೆ, ಯಾವ ತೆರಿಗೆ ಹೆಚ್ಚಿಸಬೇಕು ಎಂಬುದರ ಬಗ್ಗೆ ಪರಿಶೀಲನೆ ಮಾಡುತ್ತೇನೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ದಾಸರಹಳ್ಳಿ ವಲಯದ ಚೊಕ್ಕಸಂದ್ರ ವಾರ್ಡ್‌ನ ಇಂದಿರಾ ಕ್ಯಾಂಟೀನ್‌ ಬೆಳಗ್ಗೆ 9ರ ಸುಮಾರಿಗೆ ತೆರಳಿ ಡಿ.ಕೆ.ಶಿ ತಿಂಡಿ ನೀಡುವಂತೆ ಕೇಳಿದರು. ಈ ಆದರೆ ವೇಳೆ 200ಕ್ಕೂ ಹೆಚ್ಚು ಪ್ಲೇಟ್ ತಿಂಡಿ ಖಾಲಿ ಆಗಿತ್ತು. ಅಲ್ಲಿ 5 ರೂಪಾಯಿ ಬದಲು 10 ರೂಪಾಯಿ ಪಡೆಯಲಾಗಿದೆ. ಅಲ್ಲಿದ್ದ ಸಹಾಯವಾಣಿ ಸಂಖ್ಯೆ ದುರಸ್ಥಿಯಲ್ಲಿದ್ದು, ಆದಷ್ಟು ಬೇಗ ಈ ಲೋಪದೋಷವನ್ನು ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.

ಈ ಎಲ್ಲಾ ಸಂಸ್ಥೆಗಳ ಕಾರ್ಯವೈಖರಿಯನ್ನು ಸರಿಯಾದ ಹಳಿಗೆ ತರುವ ಕೆಲಸವನ್ನು ಮಾಡುತ್ತೇವೆ. ಹಾಗೆಯೆ ಕಸದಿಂದ ಇಂಧನ ಉತ್ಪಾದನೆ ಮಾಡುವುದಾಗಿ ಹೇಳಿ ಜವಾಬ್ದಾರಿ ವಹಿಸಿಕೊಂಡವರು ಇಂಧನ ಉತ್ಪಾದನೆ ಮಾಡುತ್ತಿಲ್ಲ. ಈ ಘಟಕಗಳ ಕಾರ್ಯವೈಖರಿ ಬಗ್ಗೆ ಜವಾಬ್ದಾರಿಯುತವಾಗಿ ಅಧಿಕಾರಿಗಳು ಪರಿಶೀಲನೆಯನ್ನೂ ಮಾಡುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಬೆಂಗಳೂರು ನಗರವನ್ನು ಸ್ವಚ್ಚವಾಗಿ ಇರುವಂತೆ ನೋಡಿಕೊಳ್ಳಬೇಕು. ಆದರೆ ರಸ್ತೆ ಮಧ್ಯದಲ್ಲಿ ಕಸದ ರಾಶಿ ಇದೆ. ಇದನ್ನು ಪರಿಶೀಲನೆ ಮಾಡಿದ್ದೀರಾ. ಇದರ ಹೊಣೆಗಾರಿಕೆಯನ್ನು ಯಾರು ಹೊರಬೇಕು ಎಂದು ಪ್ರಶ್ನಿಸುವ ಮೂಲಕ ಅಧಿಕಾರಿಗಳಿಗೆ ಚಳಿ ಬಿಡಿಸಿದರು. ಇನ್ನು ಈ ಮಧ್ಯೆ ಲಾರಿ ಮಾಲೀಕರ ಸಂಘದ ಜೊತೆ ಚರ್ಚೆ ಮಾಡುವಂತೆಯೂ ಆಯುಕ್ತರಿಗೆ ಸೂಚಿಸಿದ್ದೇನೆ ಎಂದರು.

ಕಸವನ್ನು ತಂದು ರಸ್ತೆಗೆ ಸುರಿಯುತ್ತಿರುವ ವಾಹನಗಳ ಬಗ್ಗೆ ಗಮನಹರಿಸಬೇಕು. ತ್ಯಾಜ್ಯ ಸಂಸ್ಕರಣ ಘಟಕಗಳ ಲೆಕ್ಕಾಚಾರದಲ್ಲಿ ಏರುಪೇರುಗಳಿವೆ. ಅದೆಲ್ಲವನ್ನೂ ಸರಿಪಡಿಸುತ್ತೇವೆ. ಆದ್ದರಿಂದ ಘಟಕಕ್ಕೆ ಬರುವ ಪ್ರತಿ ಕಸದ ವಾಹನಗಳ ವಿಡಿಯೋ ದಾಖಲೆ ಮಾಡಿಸಬೇಕು. ನಂತರ ಎಲ್ಲವೂ ಲೆಕ್ಕ ಸರಿಯಾಗಿ ಹೊಂದಾಣಿಕೆ ಆಗುತ್ತದೆಯೇ ಎಂಬುದನ್ನು ನೋಡಬೇಕು ಎಂದರು

ಇದುವರೆಗೂ ಅಧಿಕಾರಿಗಳು ಪರಿಶೀಲನೆ ಮಾಡದ ಕಾರಣ ಘಟಕಗಳು ದುರ್ವಾಸನೆಯಿಂದ ಕೂಡಿದ್ದು ಕಂಡುಬಂದಿದೆ. ಇದೇ ವೆಳೆ ಇಲ್ಲಿ ಏನೆಲ್ಲ ಆಗಿದೆ, ಯಾವ ರೀತಿ ಕೆಲಸಗಳು ನಡೆಯುತ್ತವೆ ಎನ್ನುವ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ನಂತರ ಅವರು ಇಲ್ಲಿಂದ ನೇರವಾಗಿ ಕನ್ನಹಳ್ಳಿ ಘನ ತ್ಯಾಜ್ಯ ಸಂಸ್ಕರಣೆ, ಇಂಧನ ಉತ್ಪಾದನೆ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ಮೇಲ್ವಿಚಾರಕರಿಂದ ಮಾಹಿತಿ ಪಡೆದರು.

ಪ್ರವೇಶ ದ್ವಾರದ ರಿಜಿಸ್ಟರ್ ಪುಸ್ತಕದಲ್ಲಿ ಆಗಿರುವ ದಾಖಲೆ ಮತ್ತು ಒಳಗೆ ಬಂದಿರುವ ಕಸದ ಲಾರಿಗಳ ಸಂಖ್ಯೆಯಲ್ಲಿ ವ್ಯತ್ಯಾಸವನ್ನು ಗಮನಿಸಿದರು. ಅಲ್ಲದೆ ಇಂಧನ ಉತ್ಪಾದನೆ ಆಗದಿರುವುದನ್ನು ಕೂಡ ಪರಿಶೀಲನೆ ನಡೆಸಿದರು. ಹಾಗೆಯೇ ದೊಡ್ಡಬಿದರಕಲ್ಲು ಘನತ್ಯಾಜ್ಯ ಸಂಸ್ಕಾರಣೆ, ಇಂಧನ ಉತ್ಪಾದನೆ ಘಟಕಕ್ಕೆ ಭೇಟಿ ನೀಡಿದರು.

ದಾರಿ ಮಧ್ಯದ ಸೀಗೆಹಳ್ಳಿ ರಸ್ತೆಯಲ್ಲಿ ಸಾಗುವಾಗ ರಸ್ತೆ ಬದಿಯಲ್ಲಿ ಕಸದ ರಾಶಿ ಕಂಡ ಡಿಸಿಎಂ ಪರಿಶೀಲನೆಗೆ ಮುಂದಾದರು. ಈ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಕಸ ಬಿದ್ದಿರುವುದನ್ನು ಕಂಡು, ಬೆಂಗಳೂರು ನಗರದಲ್ಲೇ ರಸ್ತೆಯಲ್ಲಿ ಈ ರೀತಿ ಕಸ ಎಸೆದು ಹೋದರೆ ಅದಕ್ಕೆ ಹೊಣೆ ಯಾರು? ಎಂದು ಪಾಲಿಕೆ ಅಧಿಕಾರಿಗಳನ್ನು ಪ್ರಶ್ನೆ ಮಾಡುವ ಮೂಲಕ ತರಾಟೆಗೆ ತೆಗೆದುಕೊಂಡರು.

ಎಚ್‌.ಡಿ.ಕುಮಾರಸ್ವಾಮಿ ಅವರ ಪೆನ್‌ಡ್ರೈವ್‌ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಏನಾದರೂ ಮಾಡಿಕೊಳ್ಳಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಈ ವಿಚಾರವಾಗಿ ಮುಂದೆ ಮಾತನಾಡೋಣ ಎಂದು ತಿಳಿಸಿದರು. ನಂತರ ಡಿಕೆಶಿ ಅವರು ಯಶವಂತಪುರದ ಸೀಗೇಹಳ್ಳಿ ಘನ ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಘಟಕ ಕಾರ್ಯಾರಂಭ ಮಾಡದಿರುವುದನ್ನು ಕೂಡ ಗಮನಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+