ಬೆಂಗಳೂರು ಸಮೀಪದ ಮತ್ತೊಂದು ಜಿಲ್ಲೆಯ ಹೆಸರು ಬದಲಾವಣೆ: ಡಾ. ರಾಜ್ಕುಮಾರ್ ಅವರ ಕನಸಿಗೂ ಜೀವ!
ಕರ್ನಾಟಕ ಸರ್ಕಾರವು ಹೆಸರು ಬದಲಾವಣೆಯ ಪರ್ವವನ್ನು ಮುಂದುವರಿಸಿದೆ. ಬೆಂಗಳೂರಿನ ಬ್ರ್ಯಾಂಡ್ ವ್ಯಾಲ್ಯೂವನ್ನು ಕರ್ನಾಟಕದಲ್ಲಿ ಎಲ್ಲೆಲ್ಲಿ ಬಳಸುವುದಕ್ಕೆ ಸಾಧ್ಯವಿದೆಯೋ ಅಲ್ಲೆಲ್ಲವೂ ಬಳಸಲಿದ್ದೇವೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಈ ಹಿಂದೆಯೇ ಹೇಳಿದ್ದರು. ಅದರಂತೆ ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಲಾಗಿತ್ತು. ಇದೀಗ ಬೆಂಗಳೂರು ಗ್ರಾಮಾಂತರ ಪ್ರದೇಶವನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಬದಲಾವಣೆ ಮಾಡಲಾಗಿದೆ. ಇದರೊಂದಿಗೆ ಬಾಗೇಪಲ್ಲಿ ವಿಚಾರದಲ್ಲಿ ಡಾ. ರಾಜ್ಕುಮಾರ್ ಅವರ ಕನಸನ್ನೂ ರಾಜ್ಯ ಸರ್ಕಾರ ಈಡೇರಿಸಿದೆ ಅದರ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರು ರಿಯಲ್ ಎಸ್ಟೇಟ್ನಲ್ಲಿ ಭಾರೀ ಹೆಚ್ಚಳ ಕಂಡಿದೆ. ಬೆಂಗಳೂರಿನಲ್ಲಿ ಭೂಮಿಗೆ ಬಂಗಾರದ ಬೆಲೆ ಬಂದಿದೆ. ಇದೀಗ ಬೆಂಗಳೂರಿನ ಸುತ್ತಮುತ್ತಲಿನ ಹೆಸರುಗಳನ್ನೂ ಬದಲಾವಣೆ ಮಾಡಲಾಗುತ್ತಿದೆ. ಇದೀಗ ಬೆಂಗಳೂರು ಗ್ರಾಮಾಂತರ ಪ್ರದೇಶವನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಬದಲಾವಣೆ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ. ಇಂದು (ಜುಲೈ 02) ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಪ್ರದೇಶವನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಬದಲಾವಣೆ ಮಾಡುವುದಕ್ಕೆ ಅನುಮೋದನೆ ನೀಡಲಾಗಿದೆ. ಈ ಮೂಲಕ ಕಳೆದ ಮೂರು ತಿಂಗಳ ಅವಧಿಯಲ್ಲಿ ಎರಡು ಪ್ರಮುಖ ಜಿಲ್ಲೆಗಳ ಹೆಸರು ಬದಲಾವಣೆ ಆದಂತೆ ಆಗಿದೆ.

ಬೆಂಗಳೂರು ಗ್ರಾಮಾಂತರಕ್ಕೆ ಭರ್ಜರಿ: ಇನ್ನು ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಕಳೆದ ಎರಡು 20 ವರ್ಷಗಳಿಂದಲೂ ಭೂಮಿಗೆ ಒಳ್ಳೆಯ ಬೆಲೆ ಇದೆ. ಈ ಭಾಗದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾದ ಮೇಲೆ ಭೂಮಿಯ ಬೆಲೆ ಹೆಚ್ಚಳವಾಗಿದೆ. ಇದೀಗ ಬೆಂಗಳೂರು ಗ್ರಾಮಾಂತರ ಪ್ರದೇಶವನ್ನು ಬೆಂಗಳೂರು ಉತ್ತರ ಎಂದು ಬದಲಾವಣೆ ಮಾಡಿರುವುದು ರಿಯಲ್ ಎಸ್ಟೇಟ್ಗೆ ಭರ್ಜರಿ ಬೂಸ್ಟ್ ನೀಡಿದೆ. ಬೆಂಗಳೂರಿನ ಬ್ರ್ಯಾಂಡ್ ವ್ಯಾಲ್ಯೂ ಇನ್ಮುಂದೆ ಬೆಂಗಳೂರು ಗ್ರಾಮಾಂತರ - ನೂತನ ಬೆಂಗಳೂರು ಉತ್ತರ ಪ್ರದೇಶಕ್ಕೂ ವಿಸ್ತರಣೆಯಾಗಲಿದೆ ಎಂದು ರಿಯಲ್ ಎಸ್ಟೇಟ್ ತಜ್ಞರು ಅಂದಾಜಿಸಿದ್ದಾರೆ.
ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಬದಲಾಯಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ ಬದಲಾದ ಪರಿಸ್ಥಿತಿಯಲ್ಲಿ ಯಾವುದೇ ಹೆಚ್ಚು ಚರ್ಚೆ ಇಲ್ಲದೆ. ಬೆಂಗಳೂರು ಗ್ರಾಮಾಂತರ ಪ್ರದೇಶವನ್ನು ಬೆಂಗಳೂರು ಉತ್ತರ ಎಂದು ಬದಲಾಯಿಸಲಾಗಿದೆ.
ಡಾ.ರಾಜ್ಕುಮಾರ್ ಅವರ ಕನಸಿಗೂ ಜೀವ!
ಇನ್ನು ರಾಜ್ಯ ಸರ್ಕಾರವು ಇಂದು ಮತ್ತೊಂದು ನಿರ್ಧಾರವನ್ನು ತೆಗೆದುಕೊಂಡಿದ್ದು. ಡಾ.ರಾಜ್ಕುಮಾರ್ ಅವರ ಕನಸನ್ನು ಈಡೇರಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೆಸರನ್ನು ಬದಲಾಯಿಸಲಾಗಿದೆ. ಇನ್ಮುಂದೆ ಬಾಗೇಪಲ್ಲಿ ಭಾಗ್ಯನಗರ ಎಂದಾಗಲಿದೆ. ಇದು ಡಾ. ರಾಜ್ಕುಮಾರ್ ಅವರ ಕನಸಾಗಿತ್ತು. ಬಾಗೇಪಲ್ಲಿ ಭಾಗ್ಯನಗರವಾಗಿ ಇಲ್ಲಿ ಎಲ್ಲಾ ಭಾಗ್ಯವೂ ಸೇರಲಿ ಎಂದು ವರ ನಟ ಡಾ. ರಾಜ್ಕುಮಾರ್ ಅವರು ಬರೋಬ್ಬರಿ 38 ವರ್ಷಗಳ ಹಿಂದೆಯೇ ಹೇಳಿದ್ದರು. ಇದೀಗ ಡಾ. ರಾಜ್ಕುಮಾರ್ ಅವರ ಕನಸು ಈಡೇರಿದ್ದು. ಬಾಗೇಪಲ್ಲಿ ಹೆಸರನ್ನು ಭಾಗ್ಯನಗರ ಎಂದು ರಾಜ್ಯ ಸರ್ಕಾರವು ಮರು ನಾಮಕರಣ ಮಾಡಿದೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೂ ಅನುಮೋದನೆ ನೀಡಲಾಗಿದೆ. ಈ ಹೆಸರು ಬದಲಾವಣೆ ಮಾಡಬೇಕು ಎನ್ನುವುದು ಹಲವು ವರ್ಷಗಳ ಕನಸಾಗಿತ್ತು. ಪಲ್ಲಿ ಎನ್ನುವುದು ತೆಲುಗು ಭಾಷೆಯಲ್ಲಿ ಹಳ್ಳಿ ಎಂದಾಗುತ್ತದೆ.
-
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Bengaluru Second Airport: 5 ತಿಂಗಳಲ್ಲಿ ಬೆಂಗಳೂರು 2ನೇ ವಿಮಾನ ನಿಲ್ದಾಣ ಸ್ಥಳ ಫೈನಲ್: 3 ತಾಣಗಳಿಗೆ ಕಾರ್ಯಸಾಧ್ಯತಾ ವರದಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications