ಬೆಂಗಳೂರು: ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಕಾಣಿಸಿಕೊಂಡ ಬೆಂಕಿ
ಗುರುವಾರ ಮತ್ತೆ ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಇಲ್ಲಿನ ನಿವಾಸಿಗಳು ಮತ್ತು ವಾಹನ ಸವಾರರು ಭಯಭೀತರಾಗಿದ್ದಾರೆ.
ಬೆಂಗಳೂರು, ಫೆಬ್ರವರು 17: ಗುರುವಾರ ಮತ್ತೆ ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಇಲ್ಲಿನ ನಿವಾಸಿಗಳು ಮತ್ತು ವಾಹನ ಸವಾರರು ಭಯಭೀತರಾಗಿದ್ದಾರೆ.
ಈ ಬಾರಿ ದೊಡ್ಡ ಮಟ್ಟಕ್ಕೆ ಬೆಂಕಿ ಹತ್ತಿಕೊಂಡಿದ್ದು ಸುತ್ತಮುತ್ತಲಿನ ಪ್ರದೇಶ ಹೊಗೆಯಿಂದ ತುಂಬಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಬಂದಿದ್ದರೂ ದಟ್ಟ ಹೊಗೆಯ ಮಧ್ಯೆ ಬೆಂಕಿ ಎಲ್ಲಿ ಹತ್ತಿಕೊಂಡಿದೆ ಎಂದು ಕಾಣಿಸುತ್ತಿಲ್ಲ. ಕೆರೆಯಲ್ಲಿ ಕಸ ದೊಡ್ಡಮಟ್ಟಕ್ಕೆ ಶೇಖರಣೆಯಾಗಿದ್ದು ಇದಕ್ಕೆ ಬೆಂಕಿ ಬಿದ್ದಿದೆ. 2016ರ ಮೇನಲ್ಲೂ ಇದೇ ರೀತಿ ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.[ಬೆಳ್ಳಂದೂರು ಕೆರೆ ಮತ್ತೆ ನೊರೆ ಉಗುಳಲು ಯಾರು ಕಾರಣ?]

ರಾತ್ರಿ ಹೊತ್ತು ಟ್ರಾಕ್ಟರುಗಳಲ್ಲಿ ಬಂದು ಕರೆಗೆ ಕಸ ಎಸೆದು ಹೋಗುತ್ತಾರೆ ಎಂದು ಇಲ್ಲಿನ ನಿವಾಸಿಗಳು ಈ ಹಿಂದೆ ದೂರು ನೀಡಿದ್ದರು. ಇದಾದ ನಂತರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೆಲವು ಸ್ಥಳೀಯ ಸಂಸ್ಥೆಗಳಿಗೆ ಕೆರೆಯಲ್ಲಿ ಕಸ ಎಸೆಯದಂತೆ ನೊಟೀಸ್ ಕೂಡಾ ಜಾರಿಗೊಳಿಸಿತ್ತು. ಆದರೆ ಇಲ್ಲೀವರೆಗೂ ಕಸ ಬೀಳುವುದು ಮಾತ್ರ ನಿಂತಿಲ್ಲ.[ಬೆಳ್ಳಂದೂರು ಕೆರೆ ಶುದ್ಧೀಕರಣ ಸಮಿತಿಯಲ್ಲಿ ಯಾರ್ಯಾರಿದ್ದಾರೆ?]
Heres a tragic sight that sums up expolitation n killing of #Bengaluru ! #Bellandur lake on fire this morning 😢😢 😠 pic.twitter.com/4DTF7QzZwT
— Rajeev Chandrasekhar (@rajeev_mp) February 17, 2017
ಕೆರೆಗೆ ಬೆಂಕಿ ಬೀಳುತ್ತಿದ್ದಂತೆ ಕೆಲವು ನಿವಾಸಿಗಳು ಸಿಟ್ಟಿಗೆದ್ದಿದ್ದು ಟ್ವಿಟ್ಟರಿನಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
Belandur lake right now. No clue what the fire is due too @BBMPCOMM1 pic.twitter.com/TOt91D6eBp
— Sandhya Menon (@TheRestlessQuil) February 16, 2017
#WATCH: Debris caught fire at Bellandur lake (Bengaluru) where toxic chemicals are dumped, smoke engulfed lake. Fire under control (16/02) pic.twitter.com/x27ru6Gz7n
— ANI (@ANI_news) February 17, 2017
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
GBA: ಪಾದಚಾರಿ ಮಾರ್ಗ ಒತ್ತುವರಿ ಮಾಡಿದ್ರೆ ಬೀಳುತ್ತೆ ದಂಡ: ನಗರದಲ್ಲಿ ಬಿರುಸಿನ ಕಾರ್ಯಾಚರಣೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications