ಬೆಂಗಳೂರು ಈ ಕಾರಣಕ್ಕೆ ಕುಖ್ಯಾತಿ: ಟ್ರಾಫಿಕ್ ಪೊಲೀಸರು ನಿಷ್ಪ್ರಯೋಜಕರು ಎಂದ ಯುಪಿ ಸಂಸದ!
Bengaluru Traffic Jam: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಜಾಮ್ ಸಮಸ್ಯೆ ವಿಪರೀತವಾಗಿದೆ. ಅಲ್ಲದೇ, ಇದೀಗ ಬೆಂಗಳೂರು ಸಮಸ್ಯೆ ವಿಚಾರವು ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಇದೀಗ ಉತ್ತರ ಪ್ರದೇಶದ ಸಂಸದ ಬೆಂಗಳೂರು ಟ್ರಾಫಿಕ್ ಜಾಮ್ ಸಮಸ್ಯೆ ಹಾಗೂ ಬೆಂಗಳೂರು ಟ್ರಾಫಿಕ್ ಪೊಲೀಸರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಡಿರುವ ಟ್ವೀಟ್ ಭಾರೀ ಚರ್ಚೆಗೆ ಕಾರಣವಾಗಿದೆ. ಅಲ್ಲದೇ ಆಕ್ರೋಶಕ್ಕೂ ಗುರಿಯಾಗಿದೆ. ಬೆಂಗಳೂರು ಟ್ರಾಫಿಕ್ ಪೊಲೀಸರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರಿದ್ದು. ಇದೀಗ ಈ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ದೆಹಲಿಯಲ್ಲಿ ನಡೆಯಲಿರುವ ಸಂಸತ್ ಅಧಿವೇಶನಕ್ಕೆ ಹೋಗುವುದಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಸಂದರ್ಭದಲ್ಲಿ ಡಾ. ರಾಜಕುಮಾರ್ ಸಮಾಧಿ ರಸ್ತೆಯಲ್ಲಿ ಸಂಚಾರ ದಟ್ಟಣೆಯಲ್ಲಿ ಸಿಲುಕಿದ್ದು, ಸಹಾಯಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಕರೆ ಮಾಡಿರುವುದಾಗಿ ಅವರು ಹೇಳಿದ್ದಾರೆ. ಸಂಸದ ರಾಜೀವ್ ರೈ ಅವರು ಬೆಂಗಳೂರಿನ ಟ್ರಾಫಿಕ್ ಕಂಟ್ರೋಲ್ ಹಾಗೂ ಟ್ರಾಫಿಕ್ ಪೊಲೀಸರ ಕಾರ್ಯವೈಖರಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಬರೆದಿರುವ ಬರಹವು ಸಹ ಇದೀಗ ವೈರಲ್ ಆಗುತ್ತಿದೆ.

ಸಂಸದ ರಾಜೀವ್ ರೈ ಟ್ವೀಟ್
ಉತ್ತರ ಪ್ರದೇಶದ ಎಸ್ಪಿ ಸಂಸದ ರಾಜೀವ್ ರೈ ಅವರು ಸೋಷಿಯಲ್ ಮೀಡಿಯಾದಲ್ಲಿ ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ
ಕ್ಷಮಿಸಿ, ನಿಮ್ಮ ಟ್ರಾಫಿಕ್ ಕಂಟ್ರೋಲ್ ವ್ಯವಸ್ಥೆ ಅತ್ಯಂತ ಕೆಟ್ಟದಾಗಿದೆ. ನಿಮ್ಮ ಟ್ರಾಫಿಕ್ ಪೊಲೀಸರು ಅತ್ಯಂತ ಬೇಜವಾಬ್ದಾರಿಯುತ, ನಿಷ್ಪ್ರಯೋಜಕರು. ಬೆಂಗಳೂರು ಟ್ರಾಫಿಕ್ ಪೊಲೀಸ್ ಫೋನ್ ಕರೆಗಳನ್ನು ಸಹ ಸ್ವೀಕರಿಸುವುದಿಲ್ಲ, ಅವರೊಂದಿಗೆ ಮಾತನಾಡಲು ನಾನು ಮಾಡಿದ ಪ್ರಯತ್ನದ ಇಲ್ಲಿದೆ. ಅವರಲ್ಲಿ ಯಾರೂ ನನ್ನ ಕರೆಯನ್ನು ಸ್ವೀಕರಿಸಲಿಲ್ಲ. ಕಳೆದ ಒಂದು ಗಂಟೆಯಿಂದ ನಾವು ರಾಜ್ಕುಮಾರ್ ಸಮಾಧಿ ರಸ್ತೆಯಲ್ಲಿ ಒಂದೇ ಸ್ಥಳದಲ್ಲಿ ಸಿಲುಕಿಕೊಂಡಿದ್ದೇವೆ. ನಾವು ವಿಮಾನ ತಪ್ಪಿಸಿಕೊಳ್ಳಲಿದ್ದೇವೆ. ನಾಳೆ ನಾನು ಸಂಸತ್ತಿನ ಅಧಿವೇಶನಕ್ಕೆ ಹಾಜರಾಗಬೇಕಾಗಿದೆ. ಈ ಪ್ರದೇಶದ ಸುತ್ತಲೂ ಒಬ್ಬೇ ಒಬ್ಬರು ಪೊಲೀಸರು ಸಹ ಕಾಣುತ್ತಿಲ್ಲ.
Hon’ble @CMofKarnataka I m sorry but you have the worst traffic management, and most irresponsible, useless traffic police. They don’t even pick up phone calls, here is the SS of my attempt to speak to them , none of them picked up my call. Last one hour we are stuck at same… pic.twitter.com/GlWjJ4RgKH
— Rajeev Rai (@RajeevRai) November 30, 2025
ಈ ಸುಂದರ ನಗರದ ಹೆಸರು ಮತ್ತು ವರ್ಚಸ್ಸು ಹಾಳು ಮಾಡಲು ಈ ಅಸಮರ್ಥ ಅಧಿಕಾರಿಗಳು ಸಾಕು. ನಿಸ್ಸಂದೇಹವಾಗಿ ಈಗ ಬೆಂಗಳೂರು ಸಂಚಾರವು ಅತ್ಯಂತ ಕೆಟ್ಟ ಟ್ರಾಫಿಕ್ ಸಮಸ್ಯೆಗೆ ಕುಖ್ಯಾತಿಯನ್ನು ಗಳಿಸಿದೆ ಎಂದು ಸಿಎಂ, ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications