Liquor: ಮದ್ಯ ಬೇಡ ಎನ್ನುತ್ತಿರುವ ಮದ್ಯ ಪ್ರಿಯರು, ಸರ್ಕಾರಕ್ಕೆ ತಲೆನೋವು!
Liquor: ಭಾರತದಲ್ಲೇ ಅತ್ಯಂತ ಹೆಚ್ಚು ವಿಸ್ಕಿ ಕರ್ನಾಟಕದಲ್ಲಿ ಮಾರಾಟವಾಗುತ್ತಿದೆ ಎನ್ನುವ ವರದಿಯೊಂದು ಇತ್ತೀಚೆಗೆ ಪ್ರಕಟವಾಗಿತ್ತು. ಇದರ ಬೆನ್ನಲ್ಲೇ ಬಿಯರ್ ಸೇರಿದಂತೆ ವಿವಿಧ ಮದ್ಯಗಳ ಮಾರಾಟವು ಭರ್ಜರಿ ಕುಸಿತ ಕಂಡಿದ್ದು, ಮದ್ಯ ಪ್ರಿಯರು ಕರ್ನಾಟಕ ಸರ್ಕಾರಕ್ಕೆ ಭರ್ಜರಿ ಶಾಕ್ ಕೊಟ್ಟಿದ್ದಾರೆ. ಅದರ ವಿವರ ಈ ಲೇಖನದಲ್ಲಿ ನೋಡೋಣ.
ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಅತ್ಯಧಿಕ ಮದ್ಯ ಮಾರಾಟವಾಗುತ್ತದೆ. ದಕ್ಷಿಣ ಭಾರತದ ಉಳಿದ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಬೆಂಗಳೂರಿನಲ್ಲಿ ಮದ್ಯದ ಗುಣಮಟ್ಟ ಹಾಗೂ ರುಚಿ ಉತ್ತಮವಾಗಿರುತ್ತದೆ ಎನ್ನುವುದು ಸಹ ಇದಕ್ಕೆ ಕಾರಣ. ಬೆಂಗಳೂರಿನಿಂದ ವಿವಿಧ ರಾಜ್ಯಗಳಿಂದ ಬರುವ ಜನರು ಸಹ ಮದ್ಯ ಖರೀದಿ ಮಾಡುವುದು ಇದೆ.

ಇಲ್ಲಿ ಫಸ್ಟ್ ಕ್ಲಾಸ್ ಅಥವಾ ಬ್ರ್ಯಾಂಡೆಡ್ ಮದ್ಯ ಸಿಗುತ್ತದೆ ಎನ್ನುವುದು ಸಹ ಇದಕ್ಕೆ ಮುಖ್ಯ ಕಾರಣಗಳಲ್ಲಿ ಒಂದಾಗಿದೆ. ಆದರೆ ಇಷ್ಟೆಲ್ಲದರ ನಡುವೆಯೂ ಕರ್ನಾಟಕದಲ್ಲಿ ಮದ್ಯ ಮಾರಾಟ ಭಾರೀ ಕುಸಿತ ಕಂಡಿದೆ. ಕಳೆದ ವರ್ಷಗಳಿಗೆ ಹೋಲಿಕೆ ಮಾಡಿದರೆ ಶೇ15 ರಿಂದ 20 ರಷ್ಟು ಮದ್ಯ ಮಾರಾಟ ಕುಸಿತ ಕಂಡಿದೆ ಎಂದು ಅಂದಾಜಿಸಲಾಗಿದೆ. ಅದಕ್ಕೆ ಕಾರಣವೂ ಇದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬರೋಬ್ಬರಿ ಮೂರರಿಂದ ನಾಲ್ಕು ಬಾರಿ ಬಿಯರ್ ಸೇರಿದಂತೆ ಮದ್ಯದ ಬೆಲೆ ಏರಿಕೆಯಾಗಿದೆ. ಈ ರೀತಿ ನಿರಂತರವಾಗಿ ಮದ್ಯದ ಬೆಲೆ ಏರಿಕೆ ಆಗಿರುವುದರಿಂದ ಮದ್ಯ ಮಾರಾಟದಲ್ಲಿ ಭಾರೀ ಕುಸಿತ ಕಂಡಿದೆ ಎನ್ನುತ್ತಿವೆ ಅಂಕಿ - ಅಂಶಗಳು ಕಳೆದ ಆರು ತಿಂಗಳ ಅವಧಿಯಲ್ಲಿ ಮದ್ಯ ಮಾರಾಟ ಬೆಲೆಯು ಭರ್ಜರಿ ಕುಸಿತ ಕಂಡಿದೆ. ಈ ಮೂಲಕ ಮದ್ಯ ಬೆಲೆ ಏರಿಕೆಯಿಂದ ಹೆಚ್ಚು ಆದಾಯ ಸಂಗ್ರಹ ಮಾಡಿಕೊಳ್ಳಬಹುದು ಎಂದು ಲೆಕ್ಕಾಚಾರ ಹಾಕಿಕೊಂಡಿದ್ದ ಸರ್ಕಾರಕ್ಕೆ ಕರ್ನಾಟಕದ ಮದ್ಯ ಪ್ರಿಯರು ಶಾಕ್ ನೀಡಿದ್ದಾರೆ.
ಕಳೆದ ವರ್ಷಗಳಿಗೆ ಹೋಲಿಕೆ ಮಾಡಿದರೆ ಈ ವರ್ಷ ಮದ್ಯ ವ್ಯಾಪಾರ ಕುಸಿತ ಕಂಡಿದೆ. ಅಬಕಾರಿ ಇಲಾಖೆಯ ಅರ್ಧ ವಾರ್ಷಿಕ ವಹಿವಾಟಿನ ಡೇಟಾದಲ್ಲಿ ಉಲ್ಲೇಖ ಮಾಡಿರುವಂತೆ ಮದ್ಯ ಮಾರಾಟ ಭಾರೀ ಇಳಿಕೆ ಕಂಡಿದೆ. 2023 ಮತ್ತು 2024ಕ್ಕೆ ಹೋಲಿಕೆ ಮಾಡಿದರೆ ಮದ್ಯ ಮಾರಾಟ ಇಳಿಕೆಯಾಗಿದೆ. ಆದರೆ ಬೆಲೆ ಏರಿಕೆಯಿಂದ ನಷ್ಟದ ಮೇಲೆ ಭಾರೀ ಪರಿಣಾಮ ಬೀರಿಲ್ಲ. ಅದೇ ಸಂದರ್ಭದಲ್ಲಿ ಹೆಚ್ಚು ಲಾಭ ಸಹ ಆಗಿಲ್ಲ.
2023ನೇ ಸಾಲಿನ ಏಪ್ರಿಲ್-ಸೆಪ್ಟೆಂಬರ್ ನಡುವೆ 352.83 ಲಕ್ಷ ಬಾಕ್ಸ್ ಐಎಂಎಲ್ ಮದ್ಯ ಮಾರಾಟವಾದೆ. ಇನ್ನು 2024ರ ಅದೇ ಅವಧಿಯಲ್ಲಿ 345.76 ಲಕ್ಷ ಬಾಕ್ಸ್ಗೆ ಮದ್ಯ ಮಾರಾಟ ಇಳಿಕೆ ಕಂಡಿದೆ. ಆದರೆ, 2025ನೇ ಸಾಲಿನಲ್ಲಿ ಇದೇ ಅವಧಿಯಲ್ಲಿ ಕೇವಲ 342.93 ಲಕ್ಷ ಬಾಕ್ಸ್ ಮಾತ್ರ ಮದ್ಯ ಮಾರಾಟವಾಗಿದೆ. ಕಳೆದ ಸಾಲಿಗೆ ಹೋಲಿಕೆ ಮಾಡಿ, ನೋಡಿದರೆ ಬರೋಬ್ಬರಿ 2.83 ಲಕ್ಷ ಬಾಕ್ಸ್ ವ್ಯಾಪಾರ ಕುಸಿತ ಕಂಡಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications