ನಾರಾಯಣ ಹೃದಯಾಲಯದಲ್ಲಿ 'ಅಫ್ಘನ್ ಹುಡುಗಿ' ಚಿಕಿತ್ಸೆ!
ಬೆಂಗಳೂರು, ನವೆಂಬರ್ 16: ನ್ಯಾಷನಲ್ ಜಿಯಾಗ್ರಫಿಕ್ ನಿಂದಾಗಿ ಪ್ರಸಿದ್ಧಿಗೆ ಬಂದ 'ಅಫ್ಘಾನ್ ಹುಡುಗಿ' ಶರ್ಬತ್ ಗುಲಾಗೆ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಉಅಚಿತ ಚಿಕಿತ್ಸೆ ನೀಡಲು ಎಲ್ಲ ಸಿದ್ಧತೆ ನಡೆದಿದೆ. ಸದ್ಯಕ್ಕೆ ಅಫಘಾನಿಸ್ತಾನದ ಜೈಲಿನಲ್ಲಿ ದಿನ ದೂಡುತ್ತಿರುವ ಆಕೆ, ಹೆಪಟೈಟಿಸ್ ಸಿ ಚಿಕಿತ್ಸೆಗಾಗಿ ಭಾರತಕ್ಕೆ ಬರಲಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅಫಘಾನಿಸ್ತಾನದ ಶಾಯಿದಾ ಮೊಹಮ್ಮದ್ ಅಬ್ದಾಲಿ, ಭಾರತದ ಸಹಾಯಕ್ಕೆ ಧನ್ಯವಾದ ಹೇಳಿದ್ದಾರೆ. ಉಚಿತವಾಗಿ ಆಕೆಗೆ ಚಿಕಿತ್ಸೆ ನೀಡಲಿರುವ ನಾರಾಯಣ ಹೃದಯಾಲಯಕ್ಕೂ ಕೃತಜ್ಞತೆ ತಿಳಿಸಿದ್ದಾರೆ. ಇದೇ ವೇಳೆ ವಿದೇಶ ಪ್ರವಾಸದಲ್ಲಿರುವ ಡಾ.ದೇವಿಶೆಟ್ಟಿ ಅವರು ಪ್ರತಿಕ್ರಿಯೆಗೆ ಸಿಗುವುದಿಲ್ಲ ಎಂದು ಆಸ್ಪತ್ರೆ ಮೂಲಗಳು ಒನ್ಇಂಡಿಯಾಗೆ ತಿಳಿಸಿವೆ.[ತಾಲಿಬಾನಿಗಳಿಂದ ತಪ್ಪಿಸಿಕೊಂಡವಳ ಬದುಕು ಪಾಕಿಸ್ತಾನದಲ್ಲಿ ಹೀಗಾಯಿತು]

ಈ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಕಾಗದಪತ್ರಗಳನ್ನು ಸಿದ್ಧಪಡಿಸಬೇಕಿದೆ ಎಂದು ತಿಳಿಸಲಾಗಿದೆ. 'ನಾವೇನಿದ್ದರೂ ಅನೌಪಚಾರಿಕ ಮಾತುಕತೆ ನಡೆಸಿದ್ದೇವೆ. ರಾಯಭಾರ ಕಚೇರಿಯಿಂದ ಶರಬತ್ ಚಿಕಿತ್ಸೆ ಬಗ್ಗೆ ನಮ್ಮನ್ನು ಸಂಪರ್ಕಿಸಿದ್ದಾರೆ. ಮತ್ತು ಅದಕ್ಕೆ ಸಿದ್ಧರಿದ್ದೇವೆ ಎಂದು ತಿಳಿಸಿದ್ದೇವೆ. ನಾವು ಇದನ್ನು ಅಧಿಕೃತಗೊಳಿಸಬೇಕಿದೆ' ಎಂದು ಮೂಲಗಳು ತಿಳಿಸಿವೆ.
ಆಸ್ಪತ್ರೆಯ ಈ ನಿರ್ಧಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 'ನಮಗೆ ರಾಯಭಾರ ಕಚೇರಿಯಿಂದ ಅಕೆ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಅದು ಬಂದ ನಂತರವಷ್ಟೇ ಮುಂದಿನ ಯೋಜನೆಗಳನ್ನು ಮಾಡಿಕೊಳ್ಳಬಹುದು. ನಾವು ದೇವಿ ಶೆಟ್ಟಿಯವರು ವಾಪಸ್ ಬರಲಿ ಅಂತ ಕಾಯ್ತಿದ್ದೀವಿ' ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
-
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications