ವಿಷ್ಣುವರ್ಧನ್ ಕಲಿತ ಬೆಂಗಳೂರಿನ ಪುರಾತನ ಕನ್ನಡ ಶಾಲೆ ಇನ್ನು ನೆನಪು ಮಾತ್ರ
ಬೆಂಗಳೂರು, ಜನವರಿ 3: ರಾಜ್ಯೋತ್ಸವ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡಿದ್ದೇ ಮಾಡಿದ್ದು. ಕನ್ನಡ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಸಿಎಂ ಗಂಟಾಘೋಷವಾಗಿ ಹೇಳಿದ್ದರು. ಆದರೆ ರಾಜ್ಯದ ಮುಖ್ಯಮಂತ್ರಿ ನೀಡಿದ ಭರವಸೆ ಹುಸಿಯಾಗಿದ್ದು ಬೆಂಗಳೂರಿನ ಅತ್ಯಂತ ಹಳೆಯ ಕನ್ನಡ ಶಾಲೆ ಇನ್ನು ಕೆಲವೇ ದಿನಗಳಲ್ಲಿ ಬಾಗಿಲೆಳೆದುಕೊಳ್ಳಲಿದೆ.
ನಗರದ ಚಾಮರಾಜಪೇಟೆಯಲ್ಲಿ 1870ರಲ್ಲಿ ಮಾಡೆಲ್ ಸ್ಕೂಲ್ ಎಜುಕೇಶನ್ ಸೊಸೈಟಿ ಕನ್ನಡ ಮಾಧ್ಯಮ ಶಾಲೆ ಆರಂಭಿಸಿತ್ತು. ಕನ್ನಡದ ಖ್ಯಾತ ನಟ ವಿಷ್ಣುವರ್ಧನ್ ಇದೇ ಶಾಲೆಯ ಹೈಸ್ಕೂಲ್ ವಿಭಾಗದಲ್ಲಿ ಅಭ್ಯಾಸವನ್ನೂ ಮಾಡಿದ್ದರು.

ಸದ್ಯ ಇದೇ ಶಾಲೆ ಮುಚ್ಚಲು ಸಿದ್ದವಾಗಿದೆ. ಸಾರ್ವಜನಿಕ ಸೂಚನೆ ಇಲಾಖೆಯು ನೋಟಿಸ್ ನೀಡಿದ ಹಿನ್ನಲೆಯಲ್ಲಿ ಶಾಲೆ ಮುಚ್ಚಲಾಗುತ್ತಿದೆ. ಶಾಲೆಯಲ್ಲಿ ಅಗತ್ಯ ಸಂಖ್ಯೆಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಇಲ್ಲದ ಕಾರಣ ನೋಟಿಸ್ ನೀಡಲಾಗಿತ್ತು. ಇದೀಗ ಮೂರು ತಿಂಗಳ ದೀರ್ಘ ಪ್ರಕ್ರಿಯೆ ನಂತರ ಶಾಲೆಯನ್ನು ಮುಚ್ಚಲಾಗುತ್ತಿದೆ.
1870ರಲ್ಲಿ ಆರಂಭವಾದ ಶಾಲೆಯ ಪ್ರಾಥಮಿಕ ವಿಭಾಗ ಮತ್ತು 1957ರಲ್ಲಿ ಆರಂಭವಾದ ಪ್ರೌಢ ಶಾಲೆಯನ್ನು ಒಟ್ಟಾಗಿ ಮುಚ್ಚಲಾಗುತ್ತಿದೆ.
ಈಗಾಗಲೇ ಪ್ರೌಢಶಾಲೆಯನ್ನು ಮುಚ್ಚಲಾಗಿದ್ದು 147 ವರ್ಷದ ಇತಿಹಾಸ ಇರುವ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಸರಕಾರಕ್ಕೆ ಶಾಲೆಯ ಆಡಳಿತ ಮಂಡಳಿ ಮನವಿ ಸಲ್ಲಿಸಿದೆ. ಇನ್ನೇನು ಈ ವರ್ಷ ಮುಗಿಯುವುದರೊಳಗೆ ಶಾಲೆ ಮುಚ್ಚಲಿದ್ದು ಇತಿಹಾಸದ ಪುಟ ಸೇರಲಿದೆ.

ನಮ್ಮ ಸರಕಾರ ಕನ್ನಡ ಪರ, ಕನ್ನಡ ಶಾಲೆ ಮುಚ್ಚುವುದಿಲ್ಲ ಎಂಬ ಹೇಳಿಕೆಗಳು ಬಾಯಿ ಮಾತಿಗೆ ಸೀಮಿತವಾದಾಗ ತಳಮಟ್ಟದಲ್ಲಿ ಏನೇನಾಗುತ್ತವೆ ಎಂಬುದಕ್ಕೆ ಮಾಡೆಲ್ ಶಾಲೆ ಒಂದು ಉದಾಹರಣೆ ಅಷ್ಟೆ. ಇದೇ ರೀತಿ ಇನ್ನೂ 17 ಶಾಲೆಗಳು ಮುಚ್ಚಲು ಸಿದ್ದವಾಗಿವೆ ಎಂಬುದನ್ನು ಇಲ್ಲಿ ಸ್ಮರಿಸಬಹುದು.
-
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications