ಬೆಂಗಳೂರಿನ ಸಾರ್ವಜನಿಕ ಸಾರಿಗೆ ಹೊರೆಯಾಗಬಾರದು: ಹೈಕೋರ್ಟ್
ಬೆಂಗಳೂರು, ಜೂನ್ 8: ರಸ್ತೆ ಸಾರಿಗೆ ವ್ಯವಸ್ಥೆಯನ್ನು ಪರಿಗಣಿಸಿ ಬೆಂಗಳೂರಿನ ಸಾರ್ವಜನಿಕ ಸಾರಿಗೆಯು ಆರ್ಥಿಕವಾಗಿರಬೇಕು ಎಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ನೇತೃತ್ವದ ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.
ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಯ ರಸ್ತೆ ವಿಸ್ತರಣೆ ಕಾಮಗಾರಿ ವಿಳಂಬಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಸಾಮಾಜಿಕ-ಸಾಂಸ್ಕೃತಿಕ ಟ್ರಸ್ಟ್ ಸಮರ್ಪಣ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಪೀಠ ಈ ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಜಯಮಹಲ್ ರಸ್ತೆ (ಮೆಹಕ್ರಿ ವೃತ್ತದಿಂದ ಕಂಟೋನ್ಮೆಂಟ್ ರೈಲು ನಿಲ್ದಾಣದವರೆಗೆ) ಮತ್ತು ಬಳ್ಳಾರಿ ರಸ್ತೆ (ಮೆಹಕ್ರಿ ವೃತ್ತದಿಂದ ಬಿಡಿಎ ಜಂಕ್ಷನ್ವರೆಗೆ) ವಿಸ್ತರಣೆಗೆ ಯಾವುದೇ ಕ್ರಮವನ್ನು ಪ್ರಾರಂಭಿಸಲಾಗಿಲ್ಲ ಎಂದು ಅರ್ಜಿದಾರರು ಹೇಳಿದ್ದಾರೆ.

ಹಿಂದಿನ ವಿಚಾರಣೆಯಲ್ಲಿ, ಬಳ್ಳಾರಿ ರಸ್ತೆಯಲ್ಲಿನ ಸಂಚಾರ ದಟ್ಟಣೆಯ ಸಮಸ್ಯೆಯನ್ನು ಎದುರಿಸಲು ಬಿಬಿಎಂಪಿಯೊಂದಿಗೆ ಸಮನ್ವಯ ಅಥವಾ ಸ್ವತಂತ್ರವಾಗಿ ತೆಗೆದುಕೊಂಡ ಕ್ರಮಗಳ ವಿವರಗಳನ್ನು ಸಲ್ಲಿಸುವಂತೆ ಪೀಠವು ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿತ್ತು. ಅಫಿಡವಿಟ್ ಸಲ್ಲಿಸಲು ಕಾಲಾವಕಾಶ ಕೋರಿದ್ದರಿಂದ ನ್ಯಾಯಾಲಯ ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿತು.
ವಿಚಾರಣೆಯ ಸಂದರ್ಭದಲ್ಲಿ, ವಾಹನ ಚಾಲಕರ ಒಂದು ವಿಭಾಗವು ರಸ್ತೆ ನಿಯಮಗಳನ್ನು ಕಡೆಗಣಿಸಿ ರಸ್ತೆಗಳನ್ನು ಆಟದ ಮೈದಾನವಾಗಿ ಬಳಸುತ್ತದೆ ಎಂದು ನ್ಯಾಯಾಲಯ ಬೇಸರ ವ್ಯಕ್ತಪಡಿಸಿತ್ತು. ದ್ವಿಚಕ್ರ ವಾಹನಗಳು ಮತ್ತು ತ್ರಿಚಕ್ರ ವಾಹನಗಳು, ಕೆಲವೊಮ್ಮೆ ನಾಲ್ಕು ಚಕ್ರಗಳ ವಾಹನಗಳು ಏಕಮುಖ ಸಂಚಾರ ರಸ್ತೆಗಳಲ್ಲಿ ವಿರುದ್ಧ ದಿಕ್ಕುಗಳಿಂದ ಬರುತ್ತವೆ ಎಂದು ತಿಳಿಸಲಾಗಿತ್ತು.
ಸಮರ್ಪಕ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಲಭ್ಯತೆ ಇಲ್ಲದಿರುವುದು ವಾಹನಗಳ ಹೆಚ್ಚಳಕ್ಕೆ ಕಾರಣವಾಗಿದೆ. ರಸ್ತೆ ವಿಸ್ತರಣೆ ಅನಿವಾರ್ಯವಾಗಿದ್ದು, ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಜಮೀನು ಸ್ವಾಧೀನಕ್ಕೆ ಮುಂದಾಗಬೇಕು. ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಆರ್ಥಿಕವಾಗಿ ಸಶಕ್ತ ಮತ್ತು ಪರಿಣಾಮಕಾರಿಯಾಗಿ ಮಾಡಬೇಕು. ಹೆಚ್ಚಿನ ಆವರ್ತನ (ಸಾರ್ವಜನಿಕ ಸಾರಿಗೆ) ಇರಬೇಕು ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.
ಈ ಹಿಂದೆ ನ್ಯಾಯಾಲಯಕ್ಕೆ ಸಲ್ಲಿಸಿದ ಸ್ಥಿತಿಗತಿ ವರದಿಯಲ್ಲಿ ಜಯಮಹಲ್ ರಸ್ತೆಯ ಕಾಮಗಾರಿಯನ್ನು ಮೇ 30ಕ್ಕೆ ಹಾಗೂ ಬಳ್ಳಾರಿ ರಸ್ತೆಯ ಕಾಮಗಾರಿಯನ್ನು ಜೂನ್ 30ಕ್ಕೆ ಪೂರ್ಣಗೊಳಿಸುವುದಾಗಿ ಬಿಬಿಎಂಪಿ ತಿಳಿಸಿದ್ದು, ಈ ಎರಡೂ ರಸ್ತೆಗಳಲ್ಲಿ ಹಂತಹಂತವಾಗಿ ಕಾಮಗಾರಿಯನ್ನು ವಿಂಗಡಿಸಲಾಗಿದೆ ಎಂದು ತಿಳಿಸಲಾಗಿದೆ.












Click it and Unblock the Notifications